AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಪರಾರಿಯಾಗಲು ಯತ್ನಿಸಿದ ಅಕ್ರಮ ಗೋಸಾಗಾಟಗಾರರ ಮೇಲೆ ಪೊಲೀಸ್ ಗುಂಡಿನ ದಾಳಿ

ಹಾಸನದಿಂದ ಕೇರಳದತ್ತ ಜಾನುವಾರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಲಾರಿಯನ್ನು ಪುತ್ತೂರು ಗ್ರಾಮೀಣ ಠಾಣಾ ವ್ಯಾಪ್ತಿಯ ಪೊಲೀಸರು ತಡೆಹಿಡಿಯಲು ಯತ್ನಿಸಿದ್ದರು. ಅಪಾಯದ ಪರಿಸ್ಥಿತಿಯಲ್ಲಿ ಪುತ್ತೂರು ಗ್ರಾಮೀಣ ಠಾಣೆಯ ಸಬ್ ಇನ್ಸ್ಪೆಕ್ಟರ್ ಜಂಬುರಾಜ್ ಮಹಾಜನ್ ಅವರು ಗುಂಡು ಹಾರಿಸಿದ್ದು, ಪುತ್ತೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು:  ಪರಾರಿಯಾಗಲು ಯತ್ನಿಸಿದ ಅಕ್ರಮ ಗೋಸಾಗಾಟಗಾರರ ಮೇಲೆ ಪೊಲೀಸ್ ಗುಂಡಿನ ದಾಳಿ
ಅಕ್ರಮ ಗೋಸಾಗಾಟಗಾರರ ಮೇಲೆ ಪುತ್ತೂರು ಪಿಎಸ್ಐ ಜಂಬುರಾಜ್ ಮಹಾಜನ್ ಪೈರಿಂಗ್
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Oct 22, 2025 | 10:23 AM

Share

ಮಂಗಳೂರು, (ಅಕ್ಟೋಬರ್ 22):  ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ (Illegal cow trade) ಖದೀಮರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲದ ಬೆಳ್ಳಿಚಡವು ಬಳಿ ನಡೆದಿದೆ. ಹಾಸನದಿಂದ ಕೇರಳದತ್ತ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪುತ್ತೂರು ಪೊಲೀಸರು ತಡೆಹಿಡಿಯಲು ಯತ್ನಿಸಿದ್ದಾರೆ. ಆದ್ರೆ, ಲಾರಿ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದಾರೆ. ಅಲ್ಲದೇ ಲಾರಿ ಚಾಲಕ ನೇರವಾಗಿ ಪೊಲೀಸರ ಮೇಲೆ ಹತ್ತಿಸಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಆರೋಪಿಯ ಮೇಲೆ ಗುಂಡುಹಾರಿಸಿದ ಪಿಎಸ್ಐ

ಹಾಸನದಿಂದ ಕೇರಳದತ್ತ ಜಾನುವಾರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಲಾರಿಯನ್ನು ಪುತ್ತೂರು ಗ್ರಾಮೀಣ ಠಾಣಾ ವ್ಯಾಪ್ತಿಯ ಪೊಲೀಸರು ತಡೆಹಿಡಿಯಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಲಾರಿ ನಿಲ್ಲಿಸಲು ಸೂಚಿಸಿದರೂ, ಚಾಲಕ ಲೆಕ್ಕಿಸದೇ ಲಾರಿಯನ್ನು ನೇರವಾಗಿ ಪೊಲೀಸರ ಕಡೆಗೆ ಹತ್ತಿಸಲು ಯತ್ನಿಸಿದ ಎನ್ನಲಾಗಿದೆ. ಅಪಾಯದ ಪರಿಸ್ಥಿತಿಯಲ್ಲಿ ಪುತ್ತೂರು ಗ್ರಾಮೀಣ ಠಾಣೆಯ ಪಿಎಸ್ಐ ಜಂಬುರಾಜ್ ಮಹಾಜನ್ ಅವರು ಗುಂಡು ಹಾರಿಸಿದ್ದು, ಆರೋಪಿಯಾದ ಅಬ್ದುಲ್ಲಾ ಕಾಲಿಗೆ ಗುಂಡು ತಗುಲಿದೆ.

ಗಾಯಗೊಂಡ ಅಬ್ದುಲ್ಲಾನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಆರೋಪಿಯ ಸ್ಥಿತಿ ಸ್ಥಿರವಾಗಿದೆ. ಲಾರಿಯಲ್ಲಿ ಇದ್ದ ಮತ್ತೊಬ್ಬ ಆರೋಪಿ ಘಟನೆಯ ನಂತರ ಪರಾರಿಯಾಗಿದ್ದಾನೆ. ಪೊಲೀಸರು ಅವನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

10 ಗೋವುಗಳ ರಕ್ಷಣೆ

ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಅದರೊಳಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 10 ಗೋವುಗಳನ್ನು ರಕ್ಷಿಸಿದ್ದಾರೆ. ಈ ಘಟನೆ ನಂತರ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಸನದಿಂದ ಕೇರಳದತ್ತ ಜಾನುವಾರುಗಳ ಕಳ್ಳಸಾಗಣೆ ನಡೆಯುತ್ತಿತ್ತು ಎಂಬ ಮಾಹಿತಿ ಆಧಾರದ ಮೇಲೆ ಪೊಲೀಸರು ಬಲೆ ಬೀಸಿದ್ದರು. ಆದರೆ ಆರೋಪಿಗಳು ಪೊಲೀಸರ ಸೂಚನೆಗೆ ಸಹಕರಿಸದೆ ದಾಳಿ ಮಾಡಲು ಮುಂದಾಗಿದ್ದರಿಂದ ಆತ್ಮರಕ್ಷಣೆಗಾಗಿ ಗುಂಡು ಹಾರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆಯೆಂದು ಪೊಲೀಸರಿಂದ ತಿಳಿದುಬಂದಿದೆ. ಘಟನೆಯ ಕುರಿತು ಪುತ್ತೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:21 am, Wed, 22 October 25

ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ
ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ
ಬೆಥೆಲ್ ಸ್ಪಿನ್​ಗೆ 'ತಿರುಗಿ' ಬಿದ್ದ ಶ್ರೀಲಂಕಾ
ಬೆಥೆಲ್ ಸ್ಪಿನ್​ಗೆ 'ತಿರುಗಿ' ಬಿದ್ದ ಶ್ರೀಲಂಕಾ