AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಇಲಾಖೆಯ ಸುತ್ತೋಲೆಗೂ ಡೋಂಟ್ ಕೇರ್; ನೋ ಫೀಸ್, ನೋ ಹಾಲ್ ಟಿಕೆಟ್ ಎಂದು ಪಟ್ಟು ಹಿಡಿದ ಖಾಸಗಿ ಶಾಲೆಗಳು

SSLC Exam; ಎಕ್ಸಾಂ ಹತ್ತಿರವಾಗುತ್ತಿದ್ದಂತೆ ಫೀಸ್ ಪೈಟ್ ನಡೆಯುತ್ತಿದೆ. ಶಿಕ್ಷಣ ಇಲಾಖೆಯ ಸುತ್ತೋಲೆಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಸಚಿವ ಸುರೇಶ್ ಕುಮಾರ್ ವಿರುದ್ಧ ಖಾಸಗಿ ಶಾಲೆಗಳು ಸಮರ ಸಾರಿವೆ.

ಶಿಕ್ಷಣ ಇಲಾಖೆಯ ಸುತ್ತೋಲೆಗೂ ಡೋಂಟ್ ಕೇರ್; ನೋ ಫೀಸ್, ನೋ ಹಾಲ್ ಟಿಕೆಟ್ ಎಂದು ಪಟ್ಟು ಹಿಡಿದ ಖಾಸಗಿ ಶಾಲೆಗಳು
ಸಾಂಕೇತಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Jul 15, 2021 | 12:19 PM

Share

ಬೆಂಗಳೂರು: ಕೊರೊನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಜುಲೈ 19 ಹಾಗೂ ಜುಲೈ 22ರಂದು ನಡೆಸಲು ಸರ್ಕಾರ ನಿರ್ಧರಿಸಿದೆ. ಸದ್ಯ ಈಗ ಎಸ್ಎಸ್ಎಲ್ಸಿ ಪರೀಕ್ಷೆಗೆ ಐದೇ ದಿನ ಬಾಕಿ ಇದೆ. ಆದರೆ ಇಂತಹ ಸಮಯದಲ್ಲಿ ಶಿಕ್ಷಣ ಇಲಾಖೆ v/s ಖಾಸಗಿ ಶಾಲೆಗಳು ಹಾಲ್ ಟಿಕೆಟ್ ಪೈಟ್ ಶುರುವಾಗಿದೆ. ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಹಾಲ್ ಟಿಕಿಟ್ ನೀಡಲು ನಿರಾಕರಿಸಿವೆ. ನೋ ಫೀಸ್, ನೋ ಹಾಲ್ ಟಿಕೆಟ್ ಎಂಬ ಧೋರಣೆಗೆ ಮುಂದಾಗಿವೆ.

ಎಕ್ಸಾಂ ಹತ್ತಿರವಾಗುತ್ತಿದ್ದಂತೆ ಫೀಸ್ ಪೈಟ್ ನಡೆಯುತ್ತಿದೆ. ಶಿಕ್ಷಣ ಇಲಾಖೆಯ ಸುತ್ತೋಲೆಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಸಚಿವ ಸುರೇಶ್ ಕುಮಾರ್ ವಿರುದ್ಧ ಖಾಸಗಿ ಶಾಲೆಗಳು ಸಮರ ಸಾರಿವೆ. ಕನಿಷ್ಠ ಕಳೆದ ವರ್ಷದ 50% ಶುಲ್ಕ ಕಟ್ಟಿದ್ರೆ ಮಾತ್ರ ಹಾಲ್ ಟಿಕೆಟ್ ನೀಡುತ್ತೇವೆ ಎಂದು ಶಾಲೆಗಳು ಡಿಮ್ಯಾಂಡ್ ಮಾಡುತ್ತಿವೆ. ಫೀಸ್ ಕಟ್ಟಿದರೆ ಮಾತ್ರ ಪ್ರವೇಶ ಪತ್ರ ನೀಡೊದಕ್ಕೆ ಖಾಸಗಿ ಶಾಲೆಗಳು ತೀರ್ಮಾನಿಸಿವೆ. ಶಾಲೆಗಳ ಈ ನಡೆ ವಿರುದ್ಧ ನಿನ್ನೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು.

ಎಸ್ಎಸ್ಎಲ್ಸಿ ಎಕ್ಸಾಂಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಸಕಾಲದಲ್ಲಿ ಪ್ರವೇಶ ಪತ್ರ ಒದಗಿಸಬೇಕು. BEO ಕಚೇರಿಗೆ ಭೇಟಿ ನೀಡಿ ಪ್ರವೇಶ ಪತ್ರ ಪಡೆದುಕೊಳ್ಳಬಹುದು ಅಂತಾ ತಿಳಸಿತ್ತು. ಆದ್ರೆ ಇಲಾಖೆಯ ಸುತ್ತೋಲೆಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸಿವೆ. ಕನಿಷ್ಠ 50% ಕಳೆದ ವರ್ಷದ ಶುಲ್ಕ ಕಟ್ಟುವಂತೆ ಒತ್ತಾಯಿಸಿವೆ. 50% ಕಳೆದ ವರ್ಷದ ಶುಲ್ಕ ಕಟ್ಟಿದ್ರೆ ಮಾತ್ರ ಹಾಲ್ ಟಿಕೆಟ್ ನೀಡುವುದಾಗಿ ಖಾಸಗಿ ಶಾಲೆಗಳು ಪೋಷಕರಿಗೆ ಸೂಚಿಸಿವೆ. ಆದ್ರೆ ಶಾಲೆಗಳ ಈ ನಡೆ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ತಲೆ ನೋವಾಗಿದೆ.

ಇದನ್ನೂ ಓದಿ: SSLC Exam 2021: ಜುಲೈ 19 ಹಾಗೂ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

Published On - 12:16 pm, Thu, 15 July 21

ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್