AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಇಲಾಖೆಯ ಸುತ್ತೋಲೆಗೂ ಡೋಂಟ್ ಕೇರ್; ನೋ ಫೀಸ್, ನೋ ಹಾಲ್ ಟಿಕೆಟ್ ಎಂದು ಪಟ್ಟು ಹಿಡಿದ ಖಾಸಗಿ ಶಾಲೆಗಳು

SSLC Exam; ಎಕ್ಸಾಂ ಹತ್ತಿರವಾಗುತ್ತಿದ್ದಂತೆ ಫೀಸ್ ಪೈಟ್ ನಡೆಯುತ್ತಿದೆ. ಶಿಕ್ಷಣ ಇಲಾಖೆಯ ಸುತ್ತೋಲೆಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಸಚಿವ ಸುರೇಶ್ ಕುಮಾರ್ ವಿರುದ್ಧ ಖಾಸಗಿ ಶಾಲೆಗಳು ಸಮರ ಸಾರಿವೆ.

ಶಿಕ್ಷಣ ಇಲಾಖೆಯ ಸುತ್ತೋಲೆಗೂ ಡೋಂಟ್ ಕೇರ್; ನೋ ಫೀಸ್, ನೋ ಹಾಲ್ ಟಿಕೆಟ್ ಎಂದು ಪಟ್ಟು ಹಿಡಿದ ಖಾಸಗಿ ಶಾಲೆಗಳು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 15, 2021 | 12:19 PM

Share

ಬೆಂಗಳೂರು: ಕೊರೊನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಜುಲೈ 19 ಹಾಗೂ ಜುಲೈ 22ರಂದು ನಡೆಸಲು ಸರ್ಕಾರ ನಿರ್ಧರಿಸಿದೆ. ಸದ್ಯ ಈಗ ಎಸ್ಎಸ್ಎಲ್ಸಿ ಪರೀಕ್ಷೆಗೆ ಐದೇ ದಿನ ಬಾಕಿ ಇದೆ. ಆದರೆ ಇಂತಹ ಸಮಯದಲ್ಲಿ ಶಿಕ್ಷಣ ಇಲಾಖೆ v/s ಖಾಸಗಿ ಶಾಲೆಗಳು ಹಾಲ್ ಟಿಕೆಟ್ ಪೈಟ್ ಶುರುವಾಗಿದೆ. ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಹಾಲ್ ಟಿಕಿಟ್ ನೀಡಲು ನಿರಾಕರಿಸಿವೆ. ನೋ ಫೀಸ್, ನೋ ಹಾಲ್ ಟಿಕೆಟ್ ಎಂಬ ಧೋರಣೆಗೆ ಮುಂದಾಗಿವೆ.

ಎಕ್ಸಾಂ ಹತ್ತಿರವಾಗುತ್ತಿದ್ದಂತೆ ಫೀಸ್ ಪೈಟ್ ನಡೆಯುತ್ತಿದೆ. ಶಿಕ್ಷಣ ಇಲಾಖೆಯ ಸುತ್ತೋಲೆಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಸಚಿವ ಸುರೇಶ್ ಕುಮಾರ್ ವಿರುದ್ಧ ಖಾಸಗಿ ಶಾಲೆಗಳು ಸಮರ ಸಾರಿವೆ. ಕನಿಷ್ಠ ಕಳೆದ ವರ್ಷದ 50% ಶುಲ್ಕ ಕಟ್ಟಿದ್ರೆ ಮಾತ್ರ ಹಾಲ್ ಟಿಕೆಟ್ ನೀಡುತ್ತೇವೆ ಎಂದು ಶಾಲೆಗಳು ಡಿಮ್ಯಾಂಡ್ ಮಾಡುತ್ತಿವೆ. ಫೀಸ್ ಕಟ್ಟಿದರೆ ಮಾತ್ರ ಪ್ರವೇಶ ಪತ್ರ ನೀಡೊದಕ್ಕೆ ಖಾಸಗಿ ಶಾಲೆಗಳು ತೀರ್ಮಾನಿಸಿವೆ. ಶಾಲೆಗಳ ಈ ನಡೆ ವಿರುದ್ಧ ನಿನ್ನೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು.

ಎಸ್ಎಸ್ಎಲ್ಸಿ ಎಕ್ಸಾಂಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಸಕಾಲದಲ್ಲಿ ಪ್ರವೇಶ ಪತ್ರ ಒದಗಿಸಬೇಕು. BEO ಕಚೇರಿಗೆ ಭೇಟಿ ನೀಡಿ ಪ್ರವೇಶ ಪತ್ರ ಪಡೆದುಕೊಳ್ಳಬಹುದು ಅಂತಾ ತಿಳಸಿತ್ತು. ಆದ್ರೆ ಇಲಾಖೆಯ ಸುತ್ತೋಲೆಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸಿವೆ. ಕನಿಷ್ಠ 50% ಕಳೆದ ವರ್ಷದ ಶುಲ್ಕ ಕಟ್ಟುವಂತೆ ಒತ್ತಾಯಿಸಿವೆ. 50% ಕಳೆದ ವರ್ಷದ ಶುಲ್ಕ ಕಟ್ಟಿದ್ರೆ ಮಾತ್ರ ಹಾಲ್ ಟಿಕೆಟ್ ನೀಡುವುದಾಗಿ ಖಾಸಗಿ ಶಾಲೆಗಳು ಪೋಷಕರಿಗೆ ಸೂಚಿಸಿವೆ. ಆದ್ರೆ ಶಾಲೆಗಳ ಈ ನಡೆ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ತಲೆ ನೋವಾಗಿದೆ.

ಇದನ್ನೂ ಓದಿ: SSLC Exam 2021: ಜುಲೈ 19 ಹಾಗೂ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

Published On - 12:16 pm, Thu, 15 July 21

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ