AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಇಲಾಖೆಯ ಸುತ್ತೋಲೆಗೂ ಡೋಂಟ್ ಕೇರ್; ನೋ ಫೀಸ್, ನೋ ಹಾಲ್ ಟಿಕೆಟ್ ಎಂದು ಪಟ್ಟು ಹಿಡಿದ ಖಾಸಗಿ ಶಾಲೆಗಳು

SSLC Exam; ಎಕ್ಸಾಂ ಹತ್ತಿರವಾಗುತ್ತಿದ್ದಂತೆ ಫೀಸ್ ಪೈಟ್ ನಡೆಯುತ್ತಿದೆ. ಶಿಕ್ಷಣ ಇಲಾಖೆಯ ಸುತ್ತೋಲೆಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಸಚಿವ ಸುರೇಶ್ ಕುಮಾರ್ ವಿರುದ್ಧ ಖಾಸಗಿ ಶಾಲೆಗಳು ಸಮರ ಸಾರಿವೆ.

ಶಿಕ್ಷಣ ಇಲಾಖೆಯ ಸುತ್ತೋಲೆಗೂ ಡೋಂಟ್ ಕೇರ್; ನೋ ಫೀಸ್, ನೋ ಹಾಲ್ ಟಿಕೆಟ್ ಎಂದು ಪಟ್ಟು ಹಿಡಿದ ಖಾಸಗಿ ಶಾಲೆಗಳು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 15, 2021 | 12:19 PM

Share

ಬೆಂಗಳೂರು: ಕೊರೊನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಜುಲೈ 19 ಹಾಗೂ ಜುಲೈ 22ರಂದು ನಡೆಸಲು ಸರ್ಕಾರ ನಿರ್ಧರಿಸಿದೆ. ಸದ್ಯ ಈಗ ಎಸ್ಎಸ್ಎಲ್ಸಿ ಪರೀಕ್ಷೆಗೆ ಐದೇ ದಿನ ಬಾಕಿ ಇದೆ. ಆದರೆ ಇಂತಹ ಸಮಯದಲ್ಲಿ ಶಿಕ್ಷಣ ಇಲಾಖೆ v/s ಖಾಸಗಿ ಶಾಲೆಗಳು ಹಾಲ್ ಟಿಕೆಟ್ ಪೈಟ್ ಶುರುವಾಗಿದೆ. ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಹಾಲ್ ಟಿಕಿಟ್ ನೀಡಲು ನಿರಾಕರಿಸಿವೆ. ನೋ ಫೀಸ್, ನೋ ಹಾಲ್ ಟಿಕೆಟ್ ಎಂಬ ಧೋರಣೆಗೆ ಮುಂದಾಗಿವೆ.

ಎಕ್ಸಾಂ ಹತ್ತಿರವಾಗುತ್ತಿದ್ದಂತೆ ಫೀಸ್ ಪೈಟ್ ನಡೆಯುತ್ತಿದೆ. ಶಿಕ್ಷಣ ಇಲಾಖೆಯ ಸುತ್ತೋಲೆಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಸಚಿವ ಸುರೇಶ್ ಕುಮಾರ್ ವಿರುದ್ಧ ಖಾಸಗಿ ಶಾಲೆಗಳು ಸಮರ ಸಾರಿವೆ. ಕನಿಷ್ಠ ಕಳೆದ ವರ್ಷದ 50% ಶುಲ್ಕ ಕಟ್ಟಿದ್ರೆ ಮಾತ್ರ ಹಾಲ್ ಟಿಕೆಟ್ ನೀಡುತ್ತೇವೆ ಎಂದು ಶಾಲೆಗಳು ಡಿಮ್ಯಾಂಡ್ ಮಾಡುತ್ತಿವೆ. ಫೀಸ್ ಕಟ್ಟಿದರೆ ಮಾತ್ರ ಪ್ರವೇಶ ಪತ್ರ ನೀಡೊದಕ್ಕೆ ಖಾಸಗಿ ಶಾಲೆಗಳು ತೀರ್ಮಾನಿಸಿವೆ. ಶಾಲೆಗಳ ಈ ನಡೆ ವಿರುದ್ಧ ನಿನ್ನೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು.

ಎಸ್ಎಸ್ಎಲ್ಸಿ ಎಕ್ಸಾಂಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಸಕಾಲದಲ್ಲಿ ಪ್ರವೇಶ ಪತ್ರ ಒದಗಿಸಬೇಕು. BEO ಕಚೇರಿಗೆ ಭೇಟಿ ನೀಡಿ ಪ್ರವೇಶ ಪತ್ರ ಪಡೆದುಕೊಳ್ಳಬಹುದು ಅಂತಾ ತಿಳಸಿತ್ತು. ಆದ್ರೆ ಇಲಾಖೆಯ ಸುತ್ತೋಲೆಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸಿವೆ. ಕನಿಷ್ಠ 50% ಕಳೆದ ವರ್ಷದ ಶುಲ್ಕ ಕಟ್ಟುವಂತೆ ಒತ್ತಾಯಿಸಿವೆ. 50% ಕಳೆದ ವರ್ಷದ ಶುಲ್ಕ ಕಟ್ಟಿದ್ರೆ ಮಾತ್ರ ಹಾಲ್ ಟಿಕೆಟ್ ನೀಡುವುದಾಗಿ ಖಾಸಗಿ ಶಾಲೆಗಳು ಪೋಷಕರಿಗೆ ಸೂಚಿಸಿವೆ. ಆದ್ರೆ ಶಾಲೆಗಳ ಈ ನಡೆ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ತಲೆ ನೋವಾಗಿದೆ.

ಇದನ್ನೂ ಓದಿ: SSLC Exam 2021: ಜುಲೈ 19 ಹಾಗೂ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

Published On - 12:16 pm, Thu, 15 July 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್