AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಇಲಾಖೆಯ ಸುತ್ತೋಲೆಗೂ ಡೋಂಟ್ ಕೇರ್; ನೋ ಫೀಸ್, ನೋ ಹಾಲ್ ಟಿಕೆಟ್ ಎಂದು ಪಟ್ಟು ಹಿಡಿದ ಖಾಸಗಿ ಶಾಲೆಗಳು

SSLC Exam; ಎಕ್ಸಾಂ ಹತ್ತಿರವಾಗುತ್ತಿದ್ದಂತೆ ಫೀಸ್ ಪೈಟ್ ನಡೆಯುತ್ತಿದೆ. ಶಿಕ್ಷಣ ಇಲಾಖೆಯ ಸುತ್ತೋಲೆಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಸಚಿವ ಸುರೇಶ್ ಕುಮಾರ್ ವಿರುದ್ಧ ಖಾಸಗಿ ಶಾಲೆಗಳು ಸಮರ ಸಾರಿವೆ.

ಶಿಕ್ಷಣ ಇಲಾಖೆಯ ಸುತ್ತೋಲೆಗೂ ಡೋಂಟ್ ಕೇರ್; ನೋ ಫೀಸ್, ನೋ ಹಾಲ್ ಟಿಕೆಟ್ ಎಂದು ಪಟ್ಟು ಹಿಡಿದ ಖಾಸಗಿ ಶಾಲೆಗಳು
ಸಾಂಕೇತಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Jul 15, 2021 | 12:19 PM

Share

ಬೆಂಗಳೂರು: ಕೊರೊನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಜುಲೈ 19 ಹಾಗೂ ಜುಲೈ 22ರಂದು ನಡೆಸಲು ಸರ್ಕಾರ ನಿರ್ಧರಿಸಿದೆ. ಸದ್ಯ ಈಗ ಎಸ್ಎಸ್ಎಲ್ಸಿ ಪರೀಕ್ಷೆಗೆ ಐದೇ ದಿನ ಬಾಕಿ ಇದೆ. ಆದರೆ ಇಂತಹ ಸಮಯದಲ್ಲಿ ಶಿಕ್ಷಣ ಇಲಾಖೆ v/s ಖಾಸಗಿ ಶಾಲೆಗಳು ಹಾಲ್ ಟಿಕೆಟ್ ಪೈಟ್ ಶುರುವಾಗಿದೆ. ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಹಾಲ್ ಟಿಕಿಟ್ ನೀಡಲು ನಿರಾಕರಿಸಿವೆ. ನೋ ಫೀಸ್, ನೋ ಹಾಲ್ ಟಿಕೆಟ್ ಎಂಬ ಧೋರಣೆಗೆ ಮುಂದಾಗಿವೆ.

ಎಕ್ಸಾಂ ಹತ್ತಿರವಾಗುತ್ತಿದ್ದಂತೆ ಫೀಸ್ ಪೈಟ್ ನಡೆಯುತ್ತಿದೆ. ಶಿಕ್ಷಣ ಇಲಾಖೆಯ ಸುತ್ತೋಲೆಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಸಚಿವ ಸುರೇಶ್ ಕುಮಾರ್ ವಿರುದ್ಧ ಖಾಸಗಿ ಶಾಲೆಗಳು ಸಮರ ಸಾರಿವೆ. ಕನಿಷ್ಠ ಕಳೆದ ವರ್ಷದ 50% ಶುಲ್ಕ ಕಟ್ಟಿದ್ರೆ ಮಾತ್ರ ಹಾಲ್ ಟಿಕೆಟ್ ನೀಡುತ್ತೇವೆ ಎಂದು ಶಾಲೆಗಳು ಡಿಮ್ಯಾಂಡ್ ಮಾಡುತ್ತಿವೆ. ಫೀಸ್ ಕಟ್ಟಿದರೆ ಮಾತ್ರ ಪ್ರವೇಶ ಪತ್ರ ನೀಡೊದಕ್ಕೆ ಖಾಸಗಿ ಶಾಲೆಗಳು ತೀರ್ಮಾನಿಸಿವೆ. ಶಾಲೆಗಳ ಈ ನಡೆ ವಿರುದ್ಧ ನಿನ್ನೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು.

ಎಸ್ಎಸ್ಎಲ್ಸಿ ಎಕ್ಸಾಂಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಸಕಾಲದಲ್ಲಿ ಪ್ರವೇಶ ಪತ್ರ ಒದಗಿಸಬೇಕು. BEO ಕಚೇರಿಗೆ ಭೇಟಿ ನೀಡಿ ಪ್ರವೇಶ ಪತ್ರ ಪಡೆದುಕೊಳ್ಳಬಹುದು ಅಂತಾ ತಿಳಸಿತ್ತು. ಆದ್ರೆ ಇಲಾಖೆಯ ಸುತ್ತೋಲೆಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸಿವೆ. ಕನಿಷ್ಠ 50% ಕಳೆದ ವರ್ಷದ ಶುಲ್ಕ ಕಟ್ಟುವಂತೆ ಒತ್ತಾಯಿಸಿವೆ. 50% ಕಳೆದ ವರ್ಷದ ಶುಲ್ಕ ಕಟ್ಟಿದ್ರೆ ಮಾತ್ರ ಹಾಲ್ ಟಿಕೆಟ್ ನೀಡುವುದಾಗಿ ಖಾಸಗಿ ಶಾಲೆಗಳು ಪೋಷಕರಿಗೆ ಸೂಚಿಸಿವೆ. ಆದ್ರೆ ಶಾಲೆಗಳ ಈ ನಡೆ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ತಲೆ ನೋವಾಗಿದೆ.

ಇದನ್ನೂ ಓದಿ: SSLC Exam 2021: ಜುಲೈ 19 ಹಾಗೂ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

Published On - 12:16 pm, Thu, 15 July 21

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ