AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಇಲಾಖೆಯ ಸುತ್ತೋಲೆಗೂ ಡೋಂಟ್ ಕೇರ್; ನೋ ಫೀಸ್, ನೋ ಹಾಲ್ ಟಿಕೆಟ್ ಎಂದು ಪಟ್ಟು ಹಿಡಿದ ಖಾಸಗಿ ಶಾಲೆಗಳು

SSLC Exam; ಎಕ್ಸಾಂ ಹತ್ತಿರವಾಗುತ್ತಿದ್ದಂತೆ ಫೀಸ್ ಪೈಟ್ ನಡೆಯುತ್ತಿದೆ. ಶಿಕ್ಷಣ ಇಲಾಖೆಯ ಸುತ್ತೋಲೆಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಸಚಿವ ಸುರೇಶ್ ಕುಮಾರ್ ವಿರುದ್ಧ ಖಾಸಗಿ ಶಾಲೆಗಳು ಸಮರ ಸಾರಿವೆ.

ಶಿಕ್ಷಣ ಇಲಾಖೆಯ ಸುತ್ತೋಲೆಗೂ ಡೋಂಟ್ ಕೇರ್; ನೋ ಫೀಸ್, ನೋ ಹಾಲ್ ಟಿಕೆಟ್ ಎಂದು ಪಟ್ಟು ಹಿಡಿದ ಖಾಸಗಿ ಶಾಲೆಗಳು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 15, 2021 | 12:19 PM

Share

ಬೆಂಗಳೂರು: ಕೊರೊನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಜುಲೈ 19 ಹಾಗೂ ಜುಲೈ 22ರಂದು ನಡೆಸಲು ಸರ್ಕಾರ ನಿರ್ಧರಿಸಿದೆ. ಸದ್ಯ ಈಗ ಎಸ್ಎಸ್ಎಲ್ಸಿ ಪರೀಕ್ಷೆಗೆ ಐದೇ ದಿನ ಬಾಕಿ ಇದೆ. ಆದರೆ ಇಂತಹ ಸಮಯದಲ್ಲಿ ಶಿಕ್ಷಣ ಇಲಾಖೆ v/s ಖಾಸಗಿ ಶಾಲೆಗಳು ಹಾಲ್ ಟಿಕೆಟ್ ಪೈಟ್ ಶುರುವಾಗಿದೆ. ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಹಾಲ್ ಟಿಕಿಟ್ ನೀಡಲು ನಿರಾಕರಿಸಿವೆ. ನೋ ಫೀಸ್, ನೋ ಹಾಲ್ ಟಿಕೆಟ್ ಎಂಬ ಧೋರಣೆಗೆ ಮುಂದಾಗಿವೆ.

ಎಕ್ಸಾಂ ಹತ್ತಿರವಾಗುತ್ತಿದ್ದಂತೆ ಫೀಸ್ ಪೈಟ್ ನಡೆಯುತ್ತಿದೆ. ಶಿಕ್ಷಣ ಇಲಾಖೆಯ ಸುತ್ತೋಲೆಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಸಚಿವ ಸುರೇಶ್ ಕುಮಾರ್ ವಿರುದ್ಧ ಖಾಸಗಿ ಶಾಲೆಗಳು ಸಮರ ಸಾರಿವೆ. ಕನಿಷ್ಠ ಕಳೆದ ವರ್ಷದ 50% ಶುಲ್ಕ ಕಟ್ಟಿದ್ರೆ ಮಾತ್ರ ಹಾಲ್ ಟಿಕೆಟ್ ನೀಡುತ್ತೇವೆ ಎಂದು ಶಾಲೆಗಳು ಡಿಮ್ಯಾಂಡ್ ಮಾಡುತ್ತಿವೆ. ಫೀಸ್ ಕಟ್ಟಿದರೆ ಮಾತ್ರ ಪ್ರವೇಶ ಪತ್ರ ನೀಡೊದಕ್ಕೆ ಖಾಸಗಿ ಶಾಲೆಗಳು ತೀರ್ಮಾನಿಸಿವೆ. ಶಾಲೆಗಳ ಈ ನಡೆ ವಿರುದ್ಧ ನಿನ್ನೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು.

ಎಸ್ಎಸ್ಎಲ್ಸಿ ಎಕ್ಸಾಂಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಸಕಾಲದಲ್ಲಿ ಪ್ರವೇಶ ಪತ್ರ ಒದಗಿಸಬೇಕು. BEO ಕಚೇರಿಗೆ ಭೇಟಿ ನೀಡಿ ಪ್ರವೇಶ ಪತ್ರ ಪಡೆದುಕೊಳ್ಳಬಹುದು ಅಂತಾ ತಿಳಸಿತ್ತು. ಆದ್ರೆ ಇಲಾಖೆಯ ಸುತ್ತೋಲೆಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸಿವೆ. ಕನಿಷ್ಠ 50% ಕಳೆದ ವರ್ಷದ ಶುಲ್ಕ ಕಟ್ಟುವಂತೆ ಒತ್ತಾಯಿಸಿವೆ. 50% ಕಳೆದ ವರ್ಷದ ಶುಲ್ಕ ಕಟ್ಟಿದ್ರೆ ಮಾತ್ರ ಹಾಲ್ ಟಿಕೆಟ್ ನೀಡುವುದಾಗಿ ಖಾಸಗಿ ಶಾಲೆಗಳು ಪೋಷಕರಿಗೆ ಸೂಚಿಸಿವೆ. ಆದ್ರೆ ಶಾಲೆಗಳ ಈ ನಡೆ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ತಲೆ ನೋವಾಗಿದೆ.

ಇದನ್ನೂ ಓದಿ: SSLC Exam 2021: ಜುಲೈ 19 ಹಾಗೂ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

Published On - 12:16 pm, Thu, 15 July 21

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ