AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಸಿಎಂ ಬದಲಾವಣೆಗಾಗಿ ಗಡ್ಡ, ತಲೆಗೂದಲು ಹರಕೆ ಬಿಟ್ಟಿದ್ದಾರಾ ಬಿಜೆಪಿ ಶಾಸಕ ಯತ್ನಾಳ್?

ಜುಲೈ 30ರ ವರೆಗೆ ಕಾದು ನೋಡಿ. ಜುಲೈ 30 ರ ಬಳಿಕ ನಾನು ಮತ್ತೇ ಮೊದಲಿನಂತೆ ಆಗುತ್ತೇನೆ. ಹರಕೆ ಹೊತ್ತಿದ್ದೀನಿ, ನಾವು ಹಿಂದೂಗಳು ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊರುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆಗಾಗಿ ಗಡ್ಡ, ತಲೆಗೂದಲು ಹರಕೆ ಬಿಟ್ಟಿದ್ದಾರಾ ಬಿಜೆಪಿ ಶಾಸಕ ಯತ್ನಾಳ್?
ಬಸನಗೌಡ ಪಾಟೀಲ್ ಯತ್ನಾಳ್
TV9 Web
| Edited By: |

Updated on:Jul 19, 2021 | 1:47 PM

Share

ವಿಜಯಪುರ: ಗಡ್ಡ ಬಿಟ್ಟಿರಲ್ಲಾ ಎಂದು ಕೇಳಿದ್ದ ಪ್ರಶ್ನೆಗೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉತ್ತರ ನೀಡಿದ್ದು, ಜುಲೈ 30ರ ವರೆಗೆ ಕಾದು ನೋಡಿ. ಜುಲೈ 30 ರ ಬಳಿಕ ನಾನು ಮತ್ತೇ ಮೊದಲಿನಂತೆ ಆಗುತ್ತೇನೆ. ಹರಕೆ ಹೊತ್ತಿದ್ದೀನಿ, ನಾವು ಹಿಂದೂಗಳು ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊರುತ್ತೇವೆ ಎಂದು ತಿಳಿಸಿದ್ದಾರೆ. ಇವರ ಈ ಉತ್ತರದಿಂದ ಹಲವಾರು ಪ್ರಶ್ನೆ ಹುಟ್ಟಿಕೊಂಡಿದ್ದು, ಮುಖ್ಯಮಂತ್ರಿಗಳ ಬದಲಾವಣೆಗಾಗಿ ಹರಕೆ ಕಟ್ಟಿಕೊಂಡಿದ್ದಾರಾ? ಹರಕೆಗಾಗಿಯೇ ಗಡ್ಡ, ತಲೆಗೂದಲು ಬಿಟ್ಟಿದ್ದಾರಾ ಯತ್ನಾಳ್ ? ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.

ಈ ಮಧ್ಯೆ ಭಿನ್ನಮತೀಯ ಯತ್ನಾಳ್ ಏನು ಹೇಳ್ತಾರೆ? ಈ ಎಲ್ಲಾ ಬೆಳವಣಿಗೆ ಬಗ್ಗೆ ಮಾತನಾಡಿರುವ ಬಸನಗೌಡ ಪಾಟೀಲ್ ಯತ್ನಾಳ್, ಶಾಸಕಾಂಗ ಪಕ್ಷದ ಸಭೆ ಕರೆದ ಬಗ್ಗೆ ಇನ್ನೂ ಮಾಹಿತಿ ನೀಡಿಲ್ಲ. ಆಧಿಕೃತವಾಗಿ ನಮಗೆ ಇನ್ನೂ ಮಾಹಿತಿ ಇಲ್ಲ. ಶಾಸಕಾಂಗ ಸಭೆ ಕರೆದರೆ ನಾವು ಹೋಗಲೇಬೇಕಾಗುತ್ತದೆ. ಸಭೆಗೆ ಹೋಗುವುದು ನಮ್ಮ ಕರ್ತವ್ಯ ಮತ್ತು ಹಕ್ಕು ಎಂದಿದ್ದಾರೆ. ಸಭೆಯನ್ನು ನಾವು ಉಪಯೋಗ ಮಾಡಿಕೊಂಡೇ ಮಾಡಿಕೊಳ್ಳುತ್ತೇವೆ. ಏನು ಹೇಳಬೇಕೋ ಅದನ್ನ ನಾವು ಶಾಸಕಾಂಗ ಸಭೆಯಲ್ಲಿ ಹೇಳುತ್ತೇವೆ. ಮತಕ್ಷೇತ್ರದ ಕೆಲಸ ಕಾರ್ಯಗಳು ಹಾಗೂ ಪಕ್ಷದ ಮುಂದಿನ ಭವಿಷ್ಯದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ಇದೇ ವೇಳೆ ವಿರೋಧ ಪಕ್ಷಗಳ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿ ವಿರೋಧ ಪಕ್ಷಗಳು ಸತ್ತಿವೆ, ಮಾರಾಟವಾಗಿವೆ. ನಿನ್ನೆ ಒಬ್ಬ ನಾಯಕರು ಜಿಲ್ಲೆಗೆ ಬಂದಿದ್ದರು, ಎಲ್ಲಾ ಮಾರಾಟವಾಗಿದ್ದಾರೆ. ಆ್ಯಂಡ್ ಕಂಪನಿ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಮುಖ್ಯಮಂತ್ರಿ ಬದಲಾವಣೆ? – ಜುಲೈ 26ಕ್ಕೆ ಮೊದಲ ಮುಹೂರ್ತ, ತಪ್ಪಿದರೆ ಆಗಸ್ಟ್​ 15

ಮುರುಗೇಶ್ ನಿರಾಣಿ ನಂತರ ದೆಹಲಿಗೆ ತೆರಳಿರುವ ಬಸನಗೌಡ ಪಾಟೀಲ್​ ಯತ್ನಾಳ್,ರಾಜ್ಯ ಬಿಜೆಪಿ ಘಟಕದಲ್ಲಿ ಗೊಂದಲ

Published On - 1:46 pm, Mon, 19 July 21

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್