Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಂಚಣಿ ಹಣ ಡ್ರಾ ಮಾಡದಿದ್ದರೆ ಬ್ಯಾಂಕ್ ಖಾತೆ ಸ್ಥಗಿತ: ಆರ್.ಅಶೋಕ ಹೇಳಿಕೆಗೆ ವ್ಯಾಪಕ ಖಂಡನೆ

’ಸರ್ಕಾರದಲ್ಲಿ ಆಯಕಟ್ಟಿನ ಸ್ಥಾನಗಳಲ್ಲಿರುವವರಿಗೆ ಬಡತನದ ಬಗ್ಗೆ ಮಾಹಿತಿಯ ಕೊರತೆಯಿದೆ. ಇನ್ನಾದರೂ ಇವರು ಸರಿಯಾದ ಸಲಹೆಗಾರರನ್ನು ನೇಮಿಸಿಕೊಳ್ಳುವುದು ಒಳಿತು’

ಪಿಂಚಣಿ ಹಣ ಡ್ರಾ ಮಾಡದಿದ್ದರೆ ಬ್ಯಾಂಕ್ ಖಾತೆ ಸ್ಥಗಿತ: ಆರ್.ಅಶೋಕ ಹೇಳಿಕೆಗೆ ವ್ಯಾಪಕ ಖಂಡನೆ
ಆರ್. ಅಶೋಕ್
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Feb 16, 2021 | 3:05 PM

ಬೆಂಗಳೂರು: ಸತತ 9 ತಿಂಗಳು ಬ್ಯಾಂಕ್​ನಿಂದ ಪಿಂಚಣಿ ಹಣ ವಿತ್​ಡ್ರಾ ಮಾಡದಿದ್ದರೆ ಅಂಥ ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಲಾಗುವುದು ಎಂಬ ಕಂದಾಯ ಸಚಿವ ಆರ್.ಅಶೋಕ ಅವರ ಹೇಳಿಕೆ ಗೊಂದಲ ಸೃಷ್ಟಿಸಿದೆ. ರಾಜ್ಯದಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ ಸಿಗುತ್ತಿರುವ ಪಿಂಚಣಿಯನ್ನೇ ಜೀವನಾಧಾರ ಮಾಡಿಕೊಂಡಿರುವ ಹಲವರು ಕಂದಾಯ ಸಚಿವರ ಹೇಳಿಕೆಯಿಂದ ಆತಂಕಕ್ಕೆ ಒಳಗಾಗಿದ್ದಾರೆ.

‘ಸರ್ಕಾರದಿಂದ ವಿವಿಧ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವವರು 9 ತಿಂಗಳ ಅವಧಿಯಲ್ಲಿ ಹಣವನ್ನು ಡ್ರಾ ಮಾಡದಿದ್ದರೆ ಅಂಥ ಖಾತೆಗಳನ್ನು ಸ್ಥಗಿತಗೊಳಿಸಲು ಬ್ಯಾಂಕುಗಳಿಗೆ ಸೂಚಿಸುತ್ತೇವೆ. ಪ್ರತಿ ವರ್ಷ 4 ಲಕ್ಷ ಹೊಸ ಪಿಂಚಣಿದಾರರು ಸೇರ್ಪಡೆಯಾಗುತ್ತಿದ್ದಾರೆ’ ಎಂದು ಸಚಿವರು ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿಕೆ ನೀಡಿದ್ದರು.

‘ಕೊರೊನಾ ಸೋಂಕು ರಾಜ್ಯದಲ್ಲಿ ವ್ಯಾಪಕವಾಗಿ ಹರಡಿದ್ದ ಹಿನ್ನೆಲೆಯಲ್ಲಿ ಹಲವು ಹಿರಿಯ ನಾಗರಿಕರು ಸುಮಾರು ಒಂದು ವರ್ಷದಿಂದ ಬ್ಯಾಂಕ್​ ಸೇರಿದಂತೆ ಜನಜಂಗುಳಿ ಹೆಚ್ಚಿರುವ ಪ್ರದೇಶಗಳಿಂದ ದೂರವೇ ಉಳಿದಿದ್ದಾರೆ. ಸಾಲಸೋಲ ಮಾಡಿ ಜೀವನ ನಡೆಸುತ್ತಿದ್ದಾರೆ. ಇಂಥ ಹೊತ್ತಿನಲ್ಲಿ ಸಚಿವರು ಪಿಂಚಣಿ ವಿತ್​ಡ್ರಾ ಮಾಡದ ಬ್ಯಾಂಕ್ ಖಾತೆಯನ್ನೇ ನಿರ್ಬಂಧಿಸುತ್ತೇವೆ ಎಂದು ಹೇಳಿರುವುದು ಆತಂಕ ಮೂಡಿಸಿದೆ’ ಎಂದು ಹೆಸರು ಹೇಳಲು ಇಚ್ಛಿಸದ ವೃದ್ಧಾಪ್ಯ ವೇತನ ಫಲಾನುಭವಿಯೊಬ್ಬರು ತಿಳಿಸಿದರು.

‘ಈ ಸರ್ಕಾರಕ್ಕೆ ಏನಾಗಿದೆ? ಟಿವಿ, ಬೈಕ್, ಫ್ರಿಡ್ಜ್ ಇದ್ದವರಿಗೆ ಬಿಪಿಎಲ್ ಕಾರ್ಡ್​ ಕೊಡಲ್ಲ ಎಂದು ನಿನ್ನೆ ಉಮೇಶ್​ ಕತ್ತಿ ಹೇಳಿಕೆ ನೀಡಿ ಗಾಬರಿಯುಂಟು ಮಾಡಿದ್ದರು. ಈಗ ಹಣ ವಿತ್​ಡ್ರಾ ಮಾಡದಿದ್ದರೆ ಬ್ಯಾಂಕ್ ಖಾತೆ ನಿರ್ಬಂಧಿಸುವುದಾಗಿ ಆರ್.ಅಶೋಕ ಹೇಳಿದ್ದಾರೆ. ಸರ್ಕಾರದಲ್ಲಿ ಆಯಕಟ್ಟಿನ ಸ್ಥಾನಗಳಲ್ಲಿರುವವರಿಗೆ ಬಡತನದ ಬಗ್ಗೆ ಮಾಹಿತಿಯ ಕೊರತೆಯಿದೆ. ಇನ್ನಾದರೂ ಇವರು ಸರಿಯಾದ ಸಲಹೆಗಾರರನ್ನು ನೇಮಿಸಿಕೊಳ್ಳುವುದು ಒಳಿತು’ ಎಂದು ಸಾಮಾಜಿಕ ಹೋರಾಟಗಳಲ್ಲಿ ಸಕ್ರಿಯರಾಗಿರುವ ಹೋರಾಟಗಾರರೊಬ್ಬರು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ 20ರಂದು ‘ಹಳ್ಳಿ ಕಡೆ ನಡೆಯಿರಿ’ ಕಾರ್ಯಕ್ರಮ; ಹಳ್ಳಿಗಳಿಗೆ ಡಿಸಿ, ಎಸಿ, ತಹಶೀಲ್ದಾರ್ ಭೇಟಿ: ಆರ್​.ಅಶೋಕ ಘೋಷಣೆ

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ