AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶೋತ್ಸವ ಆಚರಣೆಗೆ ಕಳೆದ ಬಾರಿಗಿಂತ ಹೆಚ್ಚು ಅವಕಾಶ; ಸೆಪ್ಟೆಂಬರ್ 5ಕ್ಕೆ ಅಂತಿಮ ತೀರ್ಮಾನ: ಆರ್ ಅಶೋಕ್

Ganesh Chaturthi: ಪ್ರತಿ ತಾಲೂಕಿನಲ್ಲಿ ಆಚರಣೆ ಬಗ್ಗೆ ಮಾಹಿತಿ ಪಡೆದು ಸಭೆ ನಡೆಸಲಾಗುವುದು. ಸೆಪ್ಟೆಂಬರ್ 5 ರಂದು ಆ ಬಗ್ಗೆ ಸಭೆ ಮಾಡಲಾಗುವುದು. ಸಭೆ ಬಳಿಕ ಗಣೇಶ ಉತ್ಸವ ಆಚರಣೆ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಆರ್ ಅಶೋಕ್ ತಿಳಿಸಿದ್ದಾರೆ.

ಗಣೇಶೋತ್ಸವ ಆಚರಣೆಗೆ ಕಳೆದ ಬಾರಿಗಿಂತ ಹೆಚ್ಚು ಅವಕಾಶ; ಸೆಪ್ಟೆಂಬರ್ 5ಕ್ಕೆ ಅಂತಿಮ ತೀರ್ಮಾನ: ಆರ್ ಅಶೋಕ್
ಗಣೇಶ
TV9 Web
| Edited By: |

Updated on:Aug 30, 2021 | 7:14 PM

Share

ಬೆಂಗಳೂರು: ಗಣೇಶ ಹಬ್ಬ ಆಚರಣಗೆ ಅವಕಾಶ ವಿಚಾರವಾಗಿ ಇಂದು (ಆಗಸ್ಟ್ 30) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಸಿದ ಸಭೆಯಲ್ಲಿ ಚರ್ಚಿಸಲಾಗಿದೆ. ಗಣೇಶ ಆಚರಣೆ ಬಗ್ಗೆ ಮತ್ತೊಮ್ಮೆ ಸಭೆ ಕರೆಯುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ತಾಲೂಕಿನಲ್ಲಿ ಆಚರಣೆ ಬಗ್ಗೆ ಮಾಹಿತಿ ಪಡೆದು ಸಭೆ ನಡೆಸಲಾಗುವುದು. ಸೆಪ್ಟೆಂಬರ್ 5 ರಂದು ಆ ಬಗ್ಗೆ ಸಭೆ ಮಾಡಲಾಗುವುದು. ಸಭೆ ಬಳಿಕ ಗಣೇಶ ಉತ್ಸವ ಆಚರಣೆ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಆರ್ ಅಶೋಕ್ ತಿಳಿಸಿದ್ದಾರೆ.

3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಎಚ್ಚರದಿಂದ ಇರಬೇಕಾಗುತ್ತೆ. ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಗಣೇಶೋತ್ಸವ ಆಚರಣೆ ಇರುತ್ತೆ. ಹೀಗಾಗಿ ಈಗಾಗಲೇ ಡಿಸಿ, ಎಸ್​ಪಿಗಳ ಜತೆ ಮಾತುಕತೆ ನಡೆಸಿದ್ದೇವೆ. ಗಣೇಶೋತ್ಸವ ಆಚರಣೆ ಸಂಬಂಧ ಆಯೋಜಕರ ಜತೆ ಚರ್ಚೆ ಮಾಡಬೇಕಿದೆ. ಹಿಂದಿನ ವರ್ಷಗಳಲ್ಲಿ ಅದ್ಧೂರಿಯಾಗಿ ಆಚರಿಸಿದ್ದವರ ಜತೆ ಸಭೆ ಮಾಡುತ್ತೇವೆ. ಡಿಸಿ, ಎಸ್​ಪಿಗಳು ಕರೆದು ಚರ್ಚೆ ನಡೆಸಿ ವರದಿ ನೀಡುತ್ತಾರೆ. ಆ ಬಳಿಕ, ಸೆಪ್ಟೆಂಬರ್ 5 ರಂದು ಸಿಎಂ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದೇವೆ. ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ. ಗಣೇಶೋತ್ಸವ ಆಚರಣೆಗೆ ಅನುಮತಿ ಸಿಗುವ ಎಲ್ಲಾ ಸಾಧ್ಯತೆ ಇದೆ. ನಮ್ಮ ಸರ್ಕಾರ ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಲಿದೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.

ಸೆಪ್ಟೆಂಬರ್ 5 ರ ಭಾನುವಾರ ಗಣೇಶೋತ್ಸವ ಗೈಡ್​ಲೈನ್ಸ್​ ಸಂಬಂಧ ಸಭೆ ಇದೆ. ಗಣೇಶೋತ್ಸವ ಆಚರಣೆ ಸಂಬಂಧ ನಿರ್ಧಾರ ಸದ್ಯಕ್ಕೆ ಇಲ್ಲ. ಜಿಲ್ಲಾವಾರು ಆಯೋಜಕರ ಅಭಿಪ್ರಾಯ ಪಡೆದು ನಿರ್ಧಾರ ತಿಳಿಸಲಾಗುವುದು ಎಂದು ಹೇಳಲಾಗಿದೆ.

ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆಗೆ ಅವಕಾಶ ವಿಚಾರವಾಗಿ ತಾಂತ್ರಿಕ ಸಲಹಾ ಸಮಿತಿ ಸಭೆಗೂ ಮುನ್ನ ಸಿಎಂ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್​ ಜತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿತ್ತು. ಸಭೆಯಲ್ಲಿ ಚರ್ಚಿಸುವ ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಮಾಹಿತಿಪಡೆದಿದ್ದರು. ಆರೋಗ್ಯ ಇಲಾಖೆಯಿಂದ ಸಿದ್ಧತೆ ಬಗ್ಗೆ ವರದಿ ಪಡೆದಿದ್ದರು. ಈ ವೇಳೆ, 1-8ನೇ ತರಗತಿ ಆರಂಭಕ್ಕೆ ಸಿದ್ಧತೆ ಬಗ್ಗೆಯೂ ಮಾತುಕತೆ ನಡೆಸಲಾಗಿದೆ. ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಸಿದ್ಧತೆ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದು ಮಾಹಿತಿ ಲಭ್ಯವಾಗಿತ್ತು.

ತಜ್ಞರ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ತಜ್ಞರ ಜತೆ ಸಭೆ ನಡೆಸಲಾಗಿದೆ. ಸಚಿವರಾದ ಕೆ. ಸುಧಾಕರ್, ಬಿ.ಸಿ.ನಾಗೇಶ್, ಆರ್.ಅಶೋಕ್, ಸಿಎಸ್​ಪಿ ರವಿಕುಮಾರ್, ಡಿಜಿ & ಐಜಿಪಿ ಪ್ರವೀಣ್ ಸೂದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸಭೆಯಲ್ಲಿ ಭಾಗಿ ಆಗಿದ್ದಾರೆ.

ಸಿಎಂ ನೇತೃತ್ವದ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಪ್ರಾಥಮಿಕ ಶಾಲೆಗಳ ಭೌತಿಕ ತರಗತಿ ಆರಂಭ ವಿಚಾರ, 9- 12 ನೇ ತರಗತಿಗಳ ಫೀಡ್‌ಬ್ಯಾಕ್ ಪಡೆಯುವುದು, ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕಾ, ನೀಡಬಾರದಾ ಎಂಬ ಬಗ್ಗೆಯೂ ಮಾತುಕತೆ ನಡೆಸಲಾಗಿದೆ. ಜತೆಗೆ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚಿಂತನೆ ನಡೆಸಲಾಗಿದೆ. ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳ ಪರಿಸ್ಥಿತಿ ಪರಿಶೀಲನೆ. ಜಿಲ್ಲಾವಾರು ಕೊವಿಡ್ ಸ್ಥಿತಿಗತಿಯ ಬಗ್ಗೆ ಸಭೆಯಲ್ಲಿ ಚರ್ಚೆ, ಕೊರೊನಾ ಸೋಂಕಿನ 3ನೇ ಅಲೆ ತಡೆಗೆ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಗಿದೆ. ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಬಗ್ಗೆ ಸಭೆಯಲ್ಲಿ ವಿಮರ್ಶಿಸಲಾಗಿದೆ.

ಇದನ್ನೂ ಓದಿ: ಮದುವೆ ಸಮಾರಂಭಗಳಲ್ಲಿ 400 ಜನ ಸೇರಬಹುದು; ಕೊಡಗು, ದ.ಕ. ಹೊರತುಪಡಿಸಿ ಕೊರೊನಾ ನಿರ್ಬಂಧ ಸಡಿಲಿಕೆ

ಇದನ್ನೂ ಓದಿ: School Open: 6ರಿಂದ 8ನೇ ತರಗತಿಯವರೆಗೆ ಸೆಪ್ಟೆಂಬರ್ 6ರಿಂದ ಶಾಲೆ ಆರಂಭ: ಸಚಿವ ಆರ್ ಅಶೋಕ್ ಘೋಷಣೆ

(R Ashok on Ganesh Chaturthi Celebration Ganesh Festival amid Coronavirus Covid19 in Karnataka)

Published On - 6:05 pm, Mon, 30 August 21

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್