AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ ಪರಿಹಾರದ ಹಣ ಲೂಟಿ ಹೊಡೆಯಲು ಬಿಡಲ್ಲ: ಕಾವಲು ಕಾಯ್ತೇವೆ ಎಂದ ಆರ್ ಅಶೋಕ್

ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್​ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್​. ಅಶೋಕ್, ಕೇಂದ್ರದ ಬರ ಪರಿಹಾರ ಹಣ ಲೂಟಿ ಹೊಡೆಯಲು ನಾವು ಬಿಡಲ್ಲ. ಅನುದಾನ ತಾರತಮ್ಯ ಮಾಡಿದ್ದರೆ ನಾವೇ‌ ಬಂದು ಕ್ಷಮಾಪಣೆ ಕೇಳುತ್ತೇವೆ. ಇಲ್ಲ ಅಂದರೆ ಅವರು ಕ್ಷಮಾಪಣೆ ಕೇಳಲಿ ಎಂದು ಕಿಡಿಕಾರಿದ್ದಾರೆ. 

ಬರ ಪರಿಹಾರದ ಹಣ ಲೂಟಿ ಹೊಡೆಯಲು ಬಿಡಲ್ಲ: ಕಾವಲು ಕಾಯ್ತೇವೆ ಎಂದ ಆರ್ ಅಶೋಕ್
ಆರ್ ಅಶೋಕ್
TV9 Web
| Edited By: |

Updated on: Apr 27, 2024 | 4:48 PM

Share

ಬೆಂಗಳೂರು, ಏಪ್ರಿಲ್​ 27: ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ (Karnataka Drought Relief Fund) ಕೊಡಿಸಿದ ಸುಪ್ರೀಂ ಕೋರ್ಟ್​ಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್​. ಅಶೋಕ್ (R. Ashoka)​, ಕೇಂದ್ರದ ಬರ ಪರಿಹಾರ ಲೂಟಿ ಹೊಡೆಯಲು ನಾವು ಬಿಡಲ್ಲ. ಬರ ಪರಿಹಾರ ಬಂದಿದೆ ಈ ಹಣದ ಕಾವಲು ಕಾಯುತ್ತೇವೆ ನಾವು ಎಂದು ಹೇಳಿದ್ದಾರೆ.

ಲೂಟಿಕೋರರ ಪಕ್ಷ ಕಾಂಗ್ರೆಸ್ 50 ವರ್ಷ‌ ಆಡಳಿತ ಮಾಡಿದೆ. ಯಾವಾಗ ಯಾವಾಗ‌‌ ಕರ್ನಾಟಕ ಹಣ‌ ಕೇಳಿದೆ? ಎಷ್ಟು ಬಿಡುಗಡೆ ಮಾಡಿದೆ? ಹೇಳಲಿ. ಅನುದಾನ ತಾರತಮ್ಯ ಮಾಡಿದ್ದರೆ ನಾವೇ‌ ಬಂದು ಕ್ಷಮಾಪಣೆ ಕೇಳುತ್ತೇವೆ. ಇಲ್ಲ ಅಂದರೆ ಅವರು ಕ್ಷಮಾಪಣೆ ಕೇಳಲಿ ಎಂದು ಕಿಡಿಕಾರಿದ್ದಾರೆ.

ಯಾರು ಜಾಸ್ತಿ ಬಿಡುಗಡೆ ಮಾಡಿದಾರೆ ಜನ ತೀರ್ಮಾನ ಮಾಡಲಿ. ಯಾವುದೇ‌ ಕಾರಣಕ್ಕೂ‌ ಹಣ, ಚೆಕ್ ಮೂಲಕ‌ ಬರದ ಹಣ‌ ಬಿಡುಗಡೆ ಮಾಡಬಾರದು. ಡಿಬಿಟಿ‌ ಮೂಲಕವೇ ವರ್ಗಾಯಿಸಬೇಕು. ಜಾಸ್ತಿ ಬರ ಪರಿಹಾರ ಬಂದರೆ ಜಾಸ್ತಿ ಲೂಟಿ ಹೊಡೆಯಬಹುದು ಅಂತ ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಏನಾದರೂ ಹೇಳಿಕೊಳ್ಳಲಿ, ರಾಜ್ಯದ ಎಲ್ಲ ಸ್ಥಾನಗಳಲ್ಲಿ ಗೆಲ್ಲೋದು ನಾವೇ: ಬಿಎಸ್ ಯಡಿಯೂರಪ್ಪ

ಇದರಲ್ಲಿ ಪ್ರತಿ ಪೈಸೆಯೂ ರೈತರಿಗೆ ಹೋಗಬೇಕು. ಈ ಹಿಂದೆ ರಾಜ್ಯ ಸರ್ಕಾರ ಲೂಟಿ ಹೊಡೆದು ಈಗಾಗಲೇ ಮಧ್ಯಪ್ರದೇಶ, ರಾಜಸ್ಥಾನಕ್ಕೆ ಹಣ ಕಳಿಸಿದೆ. ಈಗ ಬರ ಪರಿಹಾರ ಲೂಟಿ ಮಾಡಲು ನಾವು ಬಿಡಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಬರ ಪರಿಹಾರ ಹಣ ಸಾಲದು, ಹೋರಾಟ ಮುಂದುವರಿಯಲಿದೆ: ಸಿಎಂ, ಡಿಸಿಎಂ ಮತ್ತು ಕೃಷಿ ಸಚಿವ

ಈ ಹಣದ ಜತೆ ರಾಜ್ಯ ಸರ್ಕಾರ ಎಷ್ಟು ಸೇರಿಸಿ ಪರಿಹಾರ ಕೊಡುತ್ತೆ ನೋಡೋಣ. ಕೇಂದ್ರದ ಪರಿಹಾರ ಕೊಟ್ಟು ನಾವೇ ಕೊಟ್ಟಿದ್ದು ಅಂತ ಹೇಳುವ ಹಾಗಿಲ್ಲ. ಇದರ ಜತೆ ರಾಜ್ಯವೂ ಪರಿಹಾರ ಸೇರಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಧರ್ಮಾಧಾರಿತ ಮೀಸಲಾತಿ ಕೊಡಬಾರದು ಅಂತ ಸಂವಿಧಾನದಲ್ಲೇ ಇದೆ ಎಂದ ಆರ್ ಅಶೋಕ್

ಮುಸ್ಲಿಮರ ಮೀಸಲಾತಿ ಒಬಿಸಿಯಲ್ಲಿ ಸೇರಿಸಲು ಸರ್ಕಾರ ಮುಂದಾಗಿದೆ. ಮುಸ್ಲಿಮರು ಹಿಂದೂಗಳ ಮೇಲೆ ಹಲ್ಲೆ ಮಾಡಿದರೆ ಮುಚ್ಚಿಡುತ್ತಾರೆ. ಪಾಕ್ ಪರ ಘೋಷಣೆ ಕೂಗಿದವರ ರಕ್ಷಣೆ ಮಾಡುತ್ತಾರೆ. ಮುಸ್ಲಿಮರ ಮೀಸಲಾತಿ ಒಬಿಸಿಗೆ ಸೇರಿಸುವುದು ನೀಚ ಕಾರ್ಯ. ಒಬಿಸಿ ಸಮುದಾಯಕ್ಕೆ, ಎಸ್‌ಸಿ, ಎಸ್ಟಿ ಸಮುದಾಯಗಳಿಗೆ ಅನ್ಯಾಯ ಮಾಡಿ, ಅವರ ಮತ ಕೇಳಲು ಯಾವ ನೈತಿಕತೆ ಇದೆ? ಇವರು ಮುಸ್ಲಿಮರ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಧರ್ಮಾಧಾರಿತ ಮೀಸಲಾತಿ ಕೊಡಬಾರದು ಅಂತ ಸಂವಿಧಾನದಲ್ಲೇ ಇದೆ ಎಂದಿದ್ದಾರೆ.

ವರದಿ: ಈರಣ್ಣ ಬಸವ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?