AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನ ಮರ್ಯಾದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ: ಡಿಕೆಶಿ ವಿರುದ್ಧ ಅಶೋಕ ವಾಗ್ದಾಳಿ

ಕರ್ನಾಟಕದಲ್ಲಿ ಮುಂಗಾರು ಹಿಂಗಾರು ಮಳೆ ಕೊರತೆಯಿಂದಾಗಿ ಬರಗಾಲ ಉಂಟಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಈ ಬಗ್ಗೆ ಟೀಕಿಸಿದ ಬಿಜೆಪಿಗೆ ಮಾನ ಮರ್ಯಾದೆ ಇಲ್ಲದವರು ಎಂದು ಡಿಕೆ ಶಿವಕುಮಾರ್ ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ವಾಗ್ದಾಳಿ ನಡೆಸಿದ ಆರ್.ಅಶೋಕ, ಮಾನ ಮರ್ಯಾದೆ ಇಲ್ಲದಿರುವವರು ಯಾರು? ನಿಮಗೆ ಮಾನ ಮರ್ಯಾದೆ ಇದ್ದಿದ್ದರೆ ನೀವು ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಖಾರವಾಗಿ ಹೇಳಿದರು.

ಮಾನ ಮರ್ಯಾದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ: ಡಿಕೆಶಿ ವಿರುದ್ಧ ಅಶೋಕ ವಾಗ್ದಾಳಿ
ಮಾನ ಮಱದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ ವಾಗ್ದಾಳಿ ನಡೆಸಿದರು
ಕಿರಣ್​ ಹನಿಯಡ್ಕ
| Edited By: |

Updated on: Mar 10, 2024 | 7:57 PM

Share

ಬೆಂಗಳೂರು, ಮಾ.10: ಕರ್ನಾಟಕದಲ್ಲಿ ಮುಂಗಾರು ಹಿಂಗಾರು ಮಳೆ ಕೊರತೆಯಿಂದಾಗಿ ಬರಗಾಲ ಉಂಟಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಈ ಬಗ್ಗೆ ಟೀಕಿಸಿದ ಬಿಜೆಪಿಗೆ ಮಾನ ಮರ್ಯಾದೆ ಇಲ್ಲದವರು ಎಂದು ಡಿಕೆ ಶಿವಕುಮಾರ್ (DK Shivakumar) ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ವಾಗ್ದಾಳಿ ನಡೆಸಿದ ಆರ್.ಅಶೋಕ (R Ashoka), ಮಾನ ಮರ್ಯಾದೆ ಇಲ್ಲದಿರುವವಱರು? ನಿಮಗೆ ಮಾನ ಮರ್ಯಾದೆ ಇದ್ದಿದ್ದರೆ ನೀವು ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಖಾರವಾಗಿ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ತಮಿಳುನಾಡಿಗೆ ಪದೇಪದೆ ನೀರು ಬಿಡುತ್ತಿದೆ.  ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಗಾಗಿ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ಚುನಾವಣೆಗೋಸ್ಕರ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ಇದು ನಾಚಿಕೆಗೆಟ್ಟ ಸರ್ಕಾರ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಮಾಡಿದ ತಪ್ಪಿನಿಂದ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ: ಆರ್ ಅಶೋಕ ವಾಗ್ದಾಳಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಮಾನ ಹರಾಜು ಹಾಕಲಾಗಿದೆ. ಲೂಟಿ ಹೊಡೆಯುವುದರಲ್ಲಿ ಸರ್ಕಾರ ಬ್ಯುಸಿಯಾಗಿದೆ. ಪರಿಹಾರ ತರಲು ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಡಿ. ಬೇರೆ ಯಾರಾದರೂ ಕೇಂದ್ರದಿಂದ ಪರಿಹಾರ ತರುತ್ತಾರೆ. ಸರ್ಕಾರ ಪಾಪರ್ ಆಗಿದೆ. ತಮಿಳುನಾಡು, ಆಂಧ್ರದವರು ಅನುದಾನ ತರುತ್ತಾರೆ. ಹೇಗೆ ಮಾತನಾಡಬೇಕೆಂದು ಇವರು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ನೋಡಿ ಕಲಿತುಕೊಳ್ಳಬೇಕು ಎಂದರು.

ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ

ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಅಶೋಕ ಸ್ಪಷ್ಟನೆ ನೀಡಿದರು. ಟಿಕೆಟ್ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಟಿಕೆಟ್ ಹಂಚಿಕೆ ಆದ ಮೇಲೆ ಎಲ್ಲವೂ ಸರಿಯಾಗಲಿದೆ. ವರಿಷ್ಠರ ಜೊತೆಗೆ ಫೋನ್​ನಲ್ಲಿ ಮಾತನಾಡುತ್ತಿದ್ದೇವೆ. ಮೋದಿ ಕಾರ್ಯಕ್ರಮ ಹಿನ್ನೆಲೆ ಇಂದಿನ ಸಭೆ ರದ್ದುಗೊಂಡಿದೆ. ಮಂಗಳವಾರ ಅಥವಾ ಬುಧವಾರ ಸಭೆ ಆಗಬಹುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!