AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನ ಮರ್ಯಾದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ: ಡಿಕೆಶಿ ವಿರುದ್ಧ ಅಶೋಕ ವಾಗ್ದಾಳಿ

ಕರ್ನಾಟಕದಲ್ಲಿ ಮುಂಗಾರು ಹಿಂಗಾರು ಮಳೆ ಕೊರತೆಯಿಂದಾಗಿ ಬರಗಾಲ ಉಂಟಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಈ ಬಗ್ಗೆ ಟೀಕಿಸಿದ ಬಿಜೆಪಿಗೆ ಮಾನ ಮರ್ಯಾದೆ ಇಲ್ಲದವರು ಎಂದು ಡಿಕೆ ಶಿವಕುಮಾರ್ ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ವಾಗ್ದಾಳಿ ನಡೆಸಿದ ಆರ್.ಅಶೋಕ, ಮಾನ ಮರ್ಯಾದೆ ಇಲ್ಲದಿರುವವರು ಯಾರು? ನಿಮಗೆ ಮಾನ ಮರ್ಯಾದೆ ಇದ್ದಿದ್ದರೆ ನೀವು ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಖಾರವಾಗಿ ಹೇಳಿದರು.

ಮಾನ ಮರ್ಯಾದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ: ಡಿಕೆಶಿ ವಿರುದ್ಧ ಅಶೋಕ ವಾಗ್ದಾಳಿ
ಮಾನ ಮಱದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ ವಾಗ್ದಾಳಿ ನಡೆಸಿದರು
ಕಿರಣ್​ ಹನಿಯಡ್ಕ
| Edited By: |

Updated on: Mar 10, 2024 | 7:57 PM

Share

ಬೆಂಗಳೂರು, ಮಾ.10: ಕರ್ನಾಟಕದಲ್ಲಿ ಮುಂಗಾರು ಹಿಂಗಾರು ಮಳೆ ಕೊರತೆಯಿಂದಾಗಿ ಬರಗಾಲ ಉಂಟಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಈ ಬಗ್ಗೆ ಟೀಕಿಸಿದ ಬಿಜೆಪಿಗೆ ಮಾನ ಮರ್ಯಾದೆ ಇಲ್ಲದವರು ಎಂದು ಡಿಕೆ ಶಿವಕುಮಾರ್ (DK Shivakumar) ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ವಾಗ್ದಾಳಿ ನಡೆಸಿದ ಆರ್.ಅಶೋಕ (R Ashoka), ಮಾನ ಮರ್ಯಾದೆ ಇಲ್ಲದಿರುವವಱರು? ನಿಮಗೆ ಮಾನ ಮರ್ಯಾದೆ ಇದ್ದಿದ್ದರೆ ನೀವು ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಖಾರವಾಗಿ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ತಮಿಳುನಾಡಿಗೆ ಪದೇಪದೆ ನೀರು ಬಿಡುತ್ತಿದೆ.  ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಗಾಗಿ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ಚುನಾವಣೆಗೋಸ್ಕರ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ಇದು ನಾಚಿಕೆಗೆಟ್ಟ ಸರ್ಕಾರ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಮಾಡಿದ ತಪ್ಪಿನಿಂದ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ: ಆರ್ ಅಶೋಕ ವಾಗ್ದಾಳಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಮಾನ ಹರಾಜು ಹಾಕಲಾಗಿದೆ. ಲೂಟಿ ಹೊಡೆಯುವುದರಲ್ಲಿ ಸರ್ಕಾರ ಬ್ಯುಸಿಯಾಗಿದೆ. ಪರಿಹಾರ ತರಲು ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಡಿ. ಬೇರೆ ಯಾರಾದರೂ ಕೇಂದ್ರದಿಂದ ಪರಿಹಾರ ತರುತ್ತಾರೆ. ಸರ್ಕಾರ ಪಾಪರ್ ಆಗಿದೆ. ತಮಿಳುನಾಡು, ಆಂಧ್ರದವರು ಅನುದಾನ ತರುತ್ತಾರೆ. ಹೇಗೆ ಮಾತನಾಡಬೇಕೆಂದು ಇವರು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ನೋಡಿ ಕಲಿತುಕೊಳ್ಳಬೇಕು ಎಂದರು.

ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ

ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಅಶೋಕ ಸ್ಪಷ್ಟನೆ ನೀಡಿದರು. ಟಿಕೆಟ್ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಟಿಕೆಟ್ ಹಂಚಿಕೆ ಆದ ಮೇಲೆ ಎಲ್ಲವೂ ಸರಿಯಾಗಲಿದೆ. ವರಿಷ್ಠರ ಜೊತೆಗೆ ಫೋನ್​ನಲ್ಲಿ ಮಾತನಾಡುತ್ತಿದ್ದೇವೆ. ಮೋದಿ ಕಾರ್ಯಕ್ರಮ ಹಿನ್ನೆಲೆ ಇಂದಿನ ಸಭೆ ರದ್ದುಗೊಂಡಿದೆ. ಮಂಗಳವಾರ ಅಥವಾ ಬುಧವಾರ ಸಭೆ ಆಗಬಹುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು