AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನ ಮರ್ಯಾದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ: ಡಿಕೆಶಿ ವಿರುದ್ಧ ಅಶೋಕ ವಾಗ್ದಾಳಿ

ಕರ್ನಾಟಕದಲ್ಲಿ ಮುಂಗಾರು ಹಿಂಗಾರು ಮಳೆ ಕೊರತೆಯಿಂದಾಗಿ ಬರಗಾಲ ಉಂಟಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಈ ಬಗ್ಗೆ ಟೀಕಿಸಿದ ಬಿಜೆಪಿಗೆ ಮಾನ ಮರ್ಯಾದೆ ಇಲ್ಲದವರು ಎಂದು ಡಿಕೆ ಶಿವಕುಮಾರ್ ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ವಾಗ್ದಾಳಿ ನಡೆಸಿದ ಆರ್.ಅಶೋಕ, ಮಾನ ಮರ್ಯಾದೆ ಇಲ್ಲದಿರುವವರು ಯಾರು? ನಿಮಗೆ ಮಾನ ಮರ್ಯಾದೆ ಇದ್ದಿದ್ದರೆ ನೀವು ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಖಾರವಾಗಿ ಹೇಳಿದರು.

ಮಾನ ಮರ್ಯಾದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ: ಡಿಕೆಶಿ ವಿರುದ್ಧ ಅಶೋಕ ವಾಗ್ದಾಳಿ
ಮಾನ ಮಱದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ ವಾಗ್ದಾಳಿ ನಡೆಸಿದರು
ಕಿರಣ್​ ಹನಿಯಡ್ಕ
| Updated By: Rakesh Nayak Manchi|

Updated on: Mar 10, 2024 | 7:57 PM

Share

ಬೆಂಗಳೂರು, ಮಾ.10: ಕರ್ನಾಟಕದಲ್ಲಿ ಮುಂಗಾರು ಹಿಂಗಾರು ಮಳೆ ಕೊರತೆಯಿಂದಾಗಿ ಬರಗಾಲ ಉಂಟಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಈ ಬಗ್ಗೆ ಟೀಕಿಸಿದ ಬಿಜೆಪಿಗೆ ಮಾನ ಮರ್ಯಾದೆ ಇಲ್ಲದವರು ಎಂದು ಡಿಕೆ ಶಿವಕುಮಾರ್ (DK Shivakumar) ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ವಾಗ್ದಾಳಿ ನಡೆಸಿದ ಆರ್.ಅಶೋಕ (R Ashoka), ಮಾನ ಮರ್ಯಾದೆ ಇಲ್ಲದಿರುವವಱರು? ನಿಮಗೆ ಮಾನ ಮರ್ಯಾದೆ ಇದ್ದಿದ್ದರೆ ನೀವು ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಖಾರವಾಗಿ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ತಮಿಳುನಾಡಿಗೆ ಪದೇಪದೆ ನೀರು ಬಿಡುತ್ತಿದೆ.  ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಗಾಗಿ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ಚುನಾವಣೆಗೋಸ್ಕರ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ಇದು ನಾಚಿಕೆಗೆಟ್ಟ ಸರ್ಕಾರ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಮಾಡಿದ ತಪ್ಪಿನಿಂದ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ: ಆರ್ ಅಶೋಕ ವಾಗ್ದಾಳಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಮಾನ ಹರಾಜು ಹಾಕಲಾಗಿದೆ. ಲೂಟಿ ಹೊಡೆಯುವುದರಲ್ಲಿ ಸರ್ಕಾರ ಬ್ಯುಸಿಯಾಗಿದೆ. ಪರಿಹಾರ ತರಲು ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಡಿ. ಬೇರೆ ಯಾರಾದರೂ ಕೇಂದ್ರದಿಂದ ಪರಿಹಾರ ತರುತ್ತಾರೆ. ಸರ್ಕಾರ ಪಾಪರ್ ಆಗಿದೆ. ತಮಿಳುನಾಡು, ಆಂಧ್ರದವರು ಅನುದಾನ ತರುತ್ತಾರೆ. ಹೇಗೆ ಮಾತನಾಡಬೇಕೆಂದು ಇವರು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ನೋಡಿ ಕಲಿತುಕೊಳ್ಳಬೇಕು ಎಂದರು.

ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ

ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಅಶೋಕ ಸ್ಪಷ್ಟನೆ ನೀಡಿದರು. ಟಿಕೆಟ್ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಟಿಕೆಟ್ ಹಂಚಿಕೆ ಆದ ಮೇಲೆ ಎಲ್ಲವೂ ಸರಿಯಾಗಲಿದೆ. ವರಿಷ್ಠರ ಜೊತೆಗೆ ಫೋನ್​ನಲ್ಲಿ ಮಾತನಾಡುತ್ತಿದ್ದೇವೆ. ಮೋದಿ ಕಾರ್ಯಕ್ರಮ ಹಿನ್ನೆಲೆ ಇಂದಿನ ಸಭೆ ರದ್ದುಗೊಂಡಿದೆ. ಮಂಗಳವಾರ ಅಥವಾ ಬುಧವಾರ ಸಭೆ ಆಗಬಹುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?