AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷ ಸಜ್ಜು: 2 ವಾರಕ್ಕಿಂತ ಹೆಚ್ಚು ದಿನ ಅಧಿವೇಶನ ನಡೆಸಲು ಮನವಿ

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನವನ್ನು ಎರಡು ವಾರಕ್ಕಿಂತ ಹೆಚ್ಚು ಕಾಲ ನಡೆಸಲು ವಿಪಕ್ಷ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ. ವಕ್ಫ್ ಆಸ್ತಿ, ಪಡಿತರ ಚೀಟಿ, ಅಬಕಾರಿ ಹಗರಣ, ಉತ್ತರ ಕರ್ನಾಟಕದ ಸಮಸ್ಯೆಗಳು, ಆರ್ಥಿಕ ಸ್ಥಿತಿ ಮುಂತಾದ ವಿಷಯಗಳನ್ನು ಚರ್ಚಿಸಲು ಒತ್ತಾಯಿಸಿದ್ದಾರೆ.

ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷ ಸಜ್ಜು: 2 ವಾರಕ್ಕಿಂತ ಹೆಚ್ಚು ದಿನ ಅಧಿವೇಶನ ನಡೆಸಲು ಮನವಿ
ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷ ಸಜ್ಜು: 2 ವಾರಕ್ಕಿಂತ ಹೆಚ್ಚು ದಿನ ಅಧಿವೇಶನ ನಡೆಸಲು ಮನವಿ
ಕಿರಣ್​ ಹನಿಯಡ್ಕ
| Edited By: |

Updated on:Nov 26, 2024 | 6:04 PM

Share

ಬೆಂಗಳೂರು, ನವೆಂಬರ್​ 26: ಬೆಳಗಾವಿಯ ಸುವರ್ಣಸೌಧದಲ್ಲಿ ಡಿ.9ರಿಂದ ಚಳಿಗಾಲ ಅಧಿವೇಶನ ನಡೆಯಲಿದ್ದು, 2 ವಾರಕ್ಕಿಂತ ಹೆಚ್ಚು ದಿನ ಅಧಿವೇಶನ ನಡೆಸಲು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ವಿಧಾನಸಭೆ ವಿಪಕ್ಷ ನಾಯಕ ಆರ್​​ ಅಶೋಕ್ (R Ashoka) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಚಾರಗಳ ಬಗ್ಗೆ ಸಮಾಲೋಚನೆ ಮಾಡಿದ್ದೇನೆ ಎಂದಿದ್ದಾರೆ.

ವಕ್ಫ್ ಆಸ್ತಿ ನೋಂದಣಿ, ಪಡಿತರ ಚೀಟಿ ಗೊಂದಲದ ಬಗ್ಗೆ,  ಅಬಕಾರಿ ಇಲಾಖೆ ಹಗರಣದ ಬಗ್ಗೆಯೂ ಪ್ರಸ್ತಾಪ ಮಾಡುತ್ತೇವೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ಕೇಳುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ಆರ್​​ ಅಶೋಕ್ ವಾಗ್ದಾಳಿ

ಬೈಎಲೆಕ್ಷನ್​ನಲ್ಲಿ 3 ಕ್ಷೇತ್ರ ಗೆದ್ದಿದ್ದೇವೆಂದು ಬೀಗುವುದು ಬೇಡ. ಸರ್ಕಾರದಲ್ಲಿ ಅಧಿಕಾರಿಗಳಿಗೆ ನೇಣುಭಾಗ್ಯ, ವರ್ಗಾವಣೆ ಭಾಗ್ಯ ನೀಡಿದೆ. ಜನರ ಧ್ವನಿಯಾಗಿ ನಾವು ಸದನದಲ್ಲಿ ಹೋರಾಟ ಮಾಡುತ್ತೇವೆ. ಅನುದಾನ ಕಡಿತ, ಬಿತ್ತನೆ ಬೀಜ ಬೆಲೆ ಏರಿಕೆ ವಿಚಾರಗಳ ಬಗ್ಗೆ ಕೂಡಾ ಚರ್ಚೆ ಮಾಡುತ್ತೇವೆ. ಸರ್ಕಾರದ ಆರ್ಥಿಕ ಸ್ಥಿತಿ ಅಧೋಗತಿಗೆ ಇಳಿದಿರುವ ಬಗ್ಗೆಯೂ ಅಧಿವೇಶನದಲ್ಲಿ ಚರ್ಚಿಸಲು ದಾಖಲೆ ಸಿದ್ಧಪಡಿಸಿಟ್ಟುಕೊಂಡಿದ್ದೇವೆ. ಕಾಂಗ್ರೆಸ್ ಶಾಸಕ ಗವಿಯಪ್ಪ ಇಂದು ಗವಿಯಿಂದ ಗುಡುಗಿದ್ದಾರೆ, ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಲದಲ್ಲಿ ಕೂತಿದ್ದಾರೆ. ಬಿಲ ಓಪನ್ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಚಳಿಗಾಲದ ಅಧಿವೇಶ: ಬಿಜೆಪಿ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಹೂಡಿದ ಕಾಂಗ್ರೆಸ್, ಎಲ್ಲರ ಚಿತ್ತ ರಾಜ್ಯಪಾಲರತ್ತ

ವಕ್ಫ್ ವಿಚಾರವಾಗಿ ಮಾತನಾಡಿದ ಅವರು, ವಕ್ಫ್ ವಿಚಾರ ಬಿಜೆಪಿ ವಿಚಾರವಾಗಿ ಉಳಿದಿಲ್ಲ, ಜನರ ವಿಚಾರವಾಗಿದೆ. ವಕ್ಫ್ ವಿಚಾರದಲ್ಲಿ ಯಾರೇ ಹೋರಾಟ ಮಾಡಿದರೂ ಸ್ವಾಗತಿಸುತ್ತೇವೆ. ವಿಧಾನಸಭೆಯೊಳಗೆ ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡುತ್ತೇವೆ. ಬಸನಗೌಡ ಪಾಟೀಲ್ ಯತ್ನಾಳ್ ಜೊತೆ ನಾನು ಮಾತನಾಡುತ್ತೇನೆ ಎಂದಿದ್ದಾರೆ.

ನಮಗೂ ಕರ್ನಾಟಕದಲ್ಲಿ ಅನುಮಾನ ಎಂದ ಅಶೋಕ್

EVM ಹ್ಯಾಕ್ ಆಗಿದ್ದಕ್ಕೆ ಮಹಾರಾಷ್ಟ್ರದಲ್ಲಿ ನಮಗೆ ಸೋಲು’ ಜಿ. ಪರಮೇಶ್ವರ್ ಹೇಳಿಕೆಗೆ ವಿಪಕ್ಷ ನಾಯಕ ಅಶೋಕ್ ಪ್ರತಿಕ್ರಿಯಿಸಿದ್ದು, ಇವಿಎಂ ಸರಿ ಇಲ್ಲ ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಮಗೂ ಕರ್ನಾಟಕದಲ್ಲಿ ಅನುಮಾನ ಇದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ 90 ಸ್ಥಾನ ದಾಟಲ್ಲ ಆದರೂ, 136 ಸ್ಥಾನ ಹೇಗೆ ಬಂತು? ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ 136 ಸ್ಥಾನ ಹೇಗೆ ಬಂತು? ತಕ್ಷಣ ರಾಜೀನಾಮೆ ಕೊಡಿ ಎಂದು ಒತ್ತಾಯಿಸಿದರು. ಗೆದ್ದಾಗ ಕುಣಿಯುವುದು, ಸೋತಾಗ ಬಾಯಿ ಬಡಿದುಕೊಳುತ್ತಾರೆ. ಬೈಎಲೆಕ್ಷನ್​​ನಲ್ಲಿ ಸೋತಾಗ ನಾವು ಇವಿಎಂ ಮೇಲೆ ಆರೋಪಿಸಿಲ್ಲ. ಬ್ಯಾಲೆಟ್​​ನಲ್ಲಿ ಚುನಾವಣೆ ನಡೆಸಿ ಎಂದು ಎಲ್ಲರೂ ಸೇರಿ ಚುನಾವಣಾ ಆಯೋಗಕ್ಕೆ ಮನವಿ ಮಾಡೋಣ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:03 pm, Tue, 26 November 24

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್