AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಂಗನ ನೆಪದಲ್ಲಿ ದಲಿತರನ್ನ ಧ್ವಂಸ ಮಾಡುವ ಹುನ್ನಾರ: ಬಿಜೆಪಿ ವಿರುದ್ಧ ಆರ್.ಧ್ರುವನಾರಾಯಣ ವಾಗ್ದಾಳಿ

ಬಿಜೆಪಿಯವರಿಗೆ ದಲಿತರ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ, ಚುನಾವಣೆ ಬಂದಾಗ ಬಿಜೆಪಿಯವರಿಗೆ ಅಂಬೇಡ್ಕರ್​ ನೆನಪಾಗುತ್ತಾರೆ ಎಂದು ಮೈಸೂರಿನಲ್ಲಿ ಎಸ್​ಸಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಆಲಿಂಗನ ನೆಪದಲ್ಲಿ ದಲಿತರನ್ನ ಧ್ವಂಸ ಮಾಡುವ ಹುನ್ನಾರ: ಬಿಜೆಪಿ ವಿರುದ್ಧ ಆರ್.ಧ್ರುವನಾರಾಯಣ ವಾಗ್ದಾಳಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​. ಧ್ರುವನಾರಾಯಣ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 10, 2023 | 5:34 PM

Share

ಮೈಸೂರು: ಬಿಜೆಪಿಯವರಿಗೆ ದಲಿತರ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ, ಚುನಾವಣೆ ಬಂದಾಗ ಮಾತ್ರ ಅಂಬೇಡ್ಕರ್​ ನೆನಪಾಗುತ್ತಾರೆ. ದಲಿತರ ಮೇಲೆ ಧೃತರಾಷ್ಟ್ರ ಪ್ರೇಮವಿದೆ. ಆಲಿಂಗನ ನೆಪದಲ್ಲಿ ದಲಿತರನ್ನ ಧ್ವಂಸ ಮಾಡುವ ಹುನ್ನಾರ ನಡೆಸಿದ್ದಾರೆ. ಕೇಂದ್ರ ಸರ್ಕಾರ ದಲಿತ ಪರ ಕಾರ್ಯಕ್ರಮ ನೀಡುವಲ್ಲಿ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ(R. Dhruvanarayana) ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ನಗರದ ಎಸ್​ಸಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಧ್ರುವನಾರಾಯಣ, ಅಂಬೇಡ್ಕರ್​ ಅಂತ್ಯಸಂಸ್ಕಾರಕ್ಕೆ ಜಾಗ ಕೊಡಲಿಲ್ಲವೆಂದು ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಆರೋಪ ಮಾಡುತ್ತಾರೆ. ಕಳೆದ 40 ವರ್ಷಗಳಿಂದ ಇದನ್ನೇ ಹೇಳಿ ಸವಕಲು ನಾಣ್ಯದಂತಾಗಿದೆ. ನಾವು ರಾಷ್ಟ್ರೀಕರಣ ಮಾಡಿದೆವು, ಇವರು ಖಾಸಗೀಕರಣ ಮಾಡಿದ್ದಾರೆ ಎಂದರು.

ನಾನೊಬ್ಬ ಅಂಬೇಡ್ಕರ್​ವಾದಿ ಎಂಬ ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಎಸ್​ಸಿ, ಎಸ್​ಟಿ ಸಮುದಾಯದ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು..? ರಾಜ್ಯದಲ್ಲಿ 2 ಲಕ್ಷ ಹುದ್ದೆ ಖಾಲಿಯಿದ್ದರೂ ಭರ್ತಿ ಮಾಡುತ್ತಿಲ್ಲವೇಕೆ. ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳವನ್ನು ಸ್ವಾಗತಿಸುತ್ತೇವೆ. ಅದನ್ನು ಶೆಡ್ಯೂಲ್​ 9ರಲ್ಲಿ ಸೇರಿಸದಿದ್ದರೆ ಚುನಾವಣಾ ಗಿಮಿಕ್ ಆಗುತ್ತದೆ. ನಮ್ಮದು ಜಾತ್ಯತೀತ ರಾಷ್ಟ್ರ ಎನ್ನುವುದನ್ನು ಸಿ.ಟಿ.ರವಿ ಒಪ್ಪಿಕೊಳ್ಳಬೇಕು. ಧರ್ಮ ಧರ್ಮಗಳ ನಡುವೆ ದ್ವೇಷದ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿರುವ ಸಿ.ಟಿ.ರವಿಗೆ ದಲಿತರ ಬಗ್ಗೆ ಮಾತನಾಡಲು ನೈತಿಕತೆಯೇ ಇಲ್ಲವೆಂದು ಹೇಳಿದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್