AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಂಗನ ನೆಪದಲ್ಲಿ ದಲಿತರನ್ನ ಧ್ವಂಸ ಮಾಡುವ ಹುನ್ನಾರ: ಬಿಜೆಪಿ ವಿರುದ್ಧ ಆರ್.ಧ್ರುವನಾರಾಯಣ ವಾಗ್ದಾಳಿ

ಬಿಜೆಪಿಯವರಿಗೆ ದಲಿತರ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ, ಚುನಾವಣೆ ಬಂದಾಗ ಬಿಜೆಪಿಯವರಿಗೆ ಅಂಬೇಡ್ಕರ್​ ನೆನಪಾಗುತ್ತಾರೆ ಎಂದು ಮೈಸೂರಿನಲ್ಲಿ ಎಸ್​ಸಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಆಲಿಂಗನ ನೆಪದಲ್ಲಿ ದಲಿತರನ್ನ ಧ್ವಂಸ ಮಾಡುವ ಹುನ್ನಾರ: ಬಿಜೆಪಿ ವಿರುದ್ಧ ಆರ್.ಧ್ರುವನಾರಾಯಣ ವಾಗ್ದಾಳಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​. ಧ್ರುವನಾರಾಯಣ
TV9 Web
| Edited By: |

Updated on: Jan 10, 2023 | 5:34 PM

Share

ಮೈಸೂರು: ಬಿಜೆಪಿಯವರಿಗೆ ದಲಿತರ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ, ಚುನಾವಣೆ ಬಂದಾಗ ಮಾತ್ರ ಅಂಬೇಡ್ಕರ್​ ನೆನಪಾಗುತ್ತಾರೆ. ದಲಿತರ ಮೇಲೆ ಧೃತರಾಷ್ಟ್ರ ಪ್ರೇಮವಿದೆ. ಆಲಿಂಗನ ನೆಪದಲ್ಲಿ ದಲಿತರನ್ನ ಧ್ವಂಸ ಮಾಡುವ ಹುನ್ನಾರ ನಡೆಸಿದ್ದಾರೆ. ಕೇಂದ್ರ ಸರ್ಕಾರ ದಲಿತ ಪರ ಕಾರ್ಯಕ್ರಮ ನೀಡುವಲ್ಲಿ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ(R. Dhruvanarayana) ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ನಗರದ ಎಸ್​ಸಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಧ್ರುವನಾರಾಯಣ, ಅಂಬೇಡ್ಕರ್​ ಅಂತ್ಯಸಂಸ್ಕಾರಕ್ಕೆ ಜಾಗ ಕೊಡಲಿಲ್ಲವೆಂದು ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಆರೋಪ ಮಾಡುತ್ತಾರೆ. ಕಳೆದ 40 ವರ್ಷಗಳಿಂದ ಇದನ್ನೇ ಹೇಳಿ ಸವಕಲು ನಾಣ್ಯದಂತಾಗಿದೆ. ನಾವು ರಾಷ್ಟ್ರೀಕರಣ ಮಾಡಿದೆವು, ಇವರು ಖಾಸಗೀಕರಣ ಮಾಡಿದ್ದಾರೆ ಎಂದರು.

ನಾನೊಬ್ಬ ಅಂಬೇಡ್ಕರ್​ವಾದಿ ಎಂಬ ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಎಸ್​ಸಿ, ಎಸ್​ಟಿ ಸಮುದಾಯದ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು..? ರಾಜ್ಯದಲ್ಲಿ 2 ಲಕ್ಷ ಹುದ್ದೆ ಖಾಲಿಯಿದ್ದರೂ ಭರ್ತಿ ಮಾಡುತ್ತಿಲ್ಲವೇಕೆ. ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳವನ್ನು ಸ್ವಾಗತಿಸುತ್ತೇವೆ. ಅದನ್ನು ಶೆಡ್ಯೂಲ್​ 9ರಲ್ಲಿ ಸೇರಿಸದಿದ್ದರೆ ಚುನಾವಣಾ ಗಿಮಿಕ್ ಆಗುತ್ತದೆ. ನಮ್ಮದು ಜಾತ್ಯತೀತ ರಾಷ್ಟ್ರ ಎನ್ನುವುದನ್ನು ಸಿ.ಟಿ.ರವಿ ಒಪ್ಪಿಕೊಳ್ಳಬೇಕು. ಧರ್ಮ ಧರ್ಮಗಳ ನಡುವೆ ದ್ವೇಷದ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿರುವ ಸಿ.ಟಿ.ರವಿಗೆ ದಲಿತರ ಬಗ್ಗೆ ಮಾತನಾಡಲು ನೈತಿಕತೆಯೇ ಇಲ್ಲವೆಂದು ಹೇಳಿದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?