AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ; 24 ಕುಟುಂಬಗಳಿಗೆ ಪರಿಹಾರ, ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ ಎಂದು ಆರ್.ಧ್ರುವನಾರಾಯಣ

24 ಕುಟುಂಬಗಳಿಗೆ ಮಾತ್ರ ತಲಾ 2 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಉಳಿದ 12 ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಲಾಗಿದೆ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಸಾವಿನಲ್ಲೂ ತಾರತಮ್ಯ ಮಾಡುವುದನ್ನ ಸರ್ಕಾರ ನಿಲ್ಲಸಬೇಕು ಎಂದು ಚಾಮರಾಜನಗರದಲ್ಲಿ ಆರ್.ಧ್ರುವನಾರಾಯಣ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ; 24 ಕುಟುಂಬಗಳಿಗೆ ಪರಿಹಾರ, ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ ಎಂದು ಆರ್.ಧ್ರುವನಾರಾಯಣ
ಕಾಂಗ್ರೆಸ್ ನಾಯಕ ಧ್ರುವ ನಾರಾಯಣ
ಆಯೇಷಾ ಬಾನು
ಆಯೇಷಾ ಬಾನು|

Updated on: May 23, 2021 | 1:13 PM

Share

ಚಾಮರಾಜನಗರ: ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನೇಮಿಸಿದ ತಜ್ಞರ ಸಮಿತಿ 36 ಜನರ ಮೃತಪಟ್ಟಿರುವುದಾಗಿ ವರದಿ ನೀಡಿತ್ತು. ಆದರೆ ಈಗ ರಾಜ್ಯ ಸರ್ಕಾರದಿಂದ 24 ಕುಟುಂಬಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ. 24 ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ. ಆದರೆ ಉಳಿದ 12 ಕುಟುಂಬಗಳಿಗೆ ಪರಿಹಾರ ಬಿಡುಗಡೆ ಮಾಡಿಲ್ಲ.

ಮೇ 2ರಂದು ಆಕ್ಸಿಜನ್ ಖಾಲಿಯಾಗಿ 24 ಜನ ಮೃತಪಟ್ಟಿದ್ದರು. ಹೈಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಕೆ ಅನ್ವಯ ಕುಟುಂಬದ ವಾರಸುದಾರರ ಖಾತೆಗಳಿಗೆ ಹಣ ಜಮೆ ಆಗಲಿದೆ. ಹೀಗಾಗಿ ಪರಿಹಾರ ವಿತರಣೆಗಾಗಿ ₹48 ಲಕ್ಷ ಡಿಸಿ ಖಾತೆಗೆ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ ಉಳಿದ 12 ಜನ ಆಕ್ಸಿಜನ್ ಸಿಗದೆ ಮೃತಪಟ್ಟಿಲ್ವಾ? 12 ಜನ ಮೃತರ ಕುಟುಂಬಗಳಿಗೆ ಪರಿಹಾರ ಏಕೆ ವಿತರಿಸಿಲ್ಲ? ಎಂಬ ಪ್ರಶ್ನೆ ಎದ್ದಿದೆ. ಹೈಕೋರ್ಟ್ ನೇಮಿಸಿದ ತಜ್ಞರ ಸಮಿತಿ 36 ಜನರ ಮೃತಪಟ್ಟಿರುವುದಾಗಿ ವರದಿ ನೀಡಿದ್ದರೂ ರಾಜ್ಯ ಸರ್ಕಾರ ವರದಿಯನ್ನು ಪರಿಗಣಿಸದೆ ಕೇವಲ 24 ಕುಟುಂಬಗಳಿಗೆ ಮಾತ್ರ ಪರಿಹಾರ ಬಿಡುಗಡೆ ಮಾಡಲಾಗಿದೆ.

ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ ಇನ್ನು ರಾಜ್ಯ ಸರ್ಕಾರ ಕೇವಲ 24 ಕುಟುಂಬಗಳಿಗೆ ಮಾತ್ರ ಪರಿಹಾರ ಬಿಡುಗಡೆ ಮಾಡಿರುವುದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಜ್ಞರ ಸಮಿತಿ 36 ಜನ ಮೃತಪಟ್ಟಿರುವುದಾಗಿ ವರದಿ ನೀಡಿತ್ತು. ಆದೆರ 24 ಕುಟುಂಬಗಳಿಗೆ ಮಾತ್ರ ತಲಾ 2 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಉಳಿದ 12 ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಲಾಗಿದೆ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಸಾವಿನಲ್ಲೂ ತಾರತಮ್ಯ ಮಾಡುವುದನ್ನ ಸರ್ಕಾರ ನಿಲ್ಲಸಬೇಕು ಎಂದು ಚಾಮರಾಜನಗರದಲ್ಲಿ ಆರ್.ಧ್ರುವನಾರಾಯಣ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ಪ್ರಕರಣ; ತನಿಖಾ ತಂಡ ವರದಿ ನೀಡಿದ್ರೂ ಸರ್ಕಾರ ಸೈಲೆಂಟ್, ಜೀವ ಹಿಂಡಿದವರಿಗೆ ಶಿಕ್ಷೆ ಯಾವಾಗ?

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು