AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ; 24 ಕುಟುಂಬಗಳಿಗೆ ಪರಿಹಾರ, ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ ಎಂದು ಆರ್.ಧ್ರುವನಾರಾಯಣ

24 ಕುಟುಂಬಗಳಿಗೆ ಮಾತ್ರ ತಲಾ 2 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಉಳಿದ 12 ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಲಾಗಿದೆ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಸಾವಿನಲ್ಲೂ ತಾರತಮ್ಯ ಮಾಡುವುದನ್ನ ಸರ್ಕಾರ ನಿಲ್ಲಸಬೇಕು ಎಂದು ಚಾಮರಾಜನಗರದಲ್ಲಿ ಆರ್.ಧ್ರುವನಾರಾಯಣ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ; 24 ಕುಟುಂಬಗಳಿಗೆ ಪರಿಹಾರ, ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ ಎಂದು ಆರ್.ಧ್ರುವನಾರಾಯಣ
ಕಾಂಗ್ರೆಸ್ ನಾಯಕ ಧ್ರುವ ನಾರಾಯಣ
ಆಯೇಷಾ ಬಾನು
|

Updated on: May 23, 2021 | 1:13 PM

Share

ಚಾಮರಾಜನಗರ: ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನೇಮಿಸಿದ ತಜ್ಞರ ಸಮಿತಿ 36 ಜನರ ಮೃತಪಟ್ಟಿರುವುದಾಗಿ ವರದಿ ನೀಡಿತ್ತು. ಆದರೆ ಈಗ ರಾಜ್ಯ ಸರ್ಕಾರದಿಂದ 24 ಕುಟುಂಬಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ. 24 ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ. ಆದರೆ ಉಳಿದ 12 ಕುಟುಂಬಗಳಿಗೆ ಪರಿಹಾರ ಬಿಡುಗಡೆ ಮಾಡಿಲ್ಲ.

ಮೇ 2ರಂದು ಆಕ್ಸಿಜನ್ ಖಾಲಿಯಾಗಿ 24 ಜನ ಮೃತಪಟ್ಟಿದ್ದರು. ಹೈಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಕೆ ಅನ್ವಯ ಕುಟುಂಬದ ವಾರಸುದಾರರ ಖಾತೆಗಳಿಗೆ ಹಣ ಜಮೆ ಆಗಲಿದೆ. ಹೀಗಾಗಿ ಪರಿಹಾರ ವಿತರಣೆಗಾಗಿ ₹48 ಲಕ್ಷ ಡಿಸಿ ಖಾತೆಗೆ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ ಉಳಿದ 12 ಜನ ಆಕ್ಸಿಜನ್ ಸಿಗದೆ ಮೃತಪಟ್ಟಿಲ್ವಾ? 12 ಜನ ಮೃತರ ಕುಟುಂಬಗಳಿಗೆ ಪರಿಹಾರ ಏಕೆ ವಿತರಿಸಿಲ್ಲ? ಎಂಬ ಪ್ರಶ್ನೆ ಎದ್ದಿದೆ. ಹೈಕೋರ್ಟ್ ನೇಮಿಸಿದ ತಜ್ಞರ ಸಮಿತಿ 36 ಜನರ ಮೃತಪಟ್ಟಿರುವುದಾಗಿ ವರದಿ ನೀಡಿದ್ದರೂ ರಾಜ್ಯ ಸರ್ಕಾರ ವರದಿಯನ್ನು ಪರಿಗಣಿಸದೆ ಕೇವಲ 24 ಕುಟುಂಬಗಳಿಗೆ ಮಾತ್ರ ಪರಿಹಾರ ಬಿಡುಗಡೆ ಮಾಡಲಾಗಿದೆ.

ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ ಇನ್ನು ರಾಜ್ಯ ಸರ್ಕಾರ ಕೇವಲ 24 ಕುಟುಂಬಗಳಿಗೆ ಮಾತ್ರ ಪರಿಹಾರ ಬಿಡುಗಡೆ ಮಾಡಿರುವುದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಜ್ಞರ ಸಮಿತಿ 36 ಜನ ಮೃತಪಟ್ಟಿರುವುದಾಗಿ ವರದಿ ನೀಡಿತ್ತು. ಆದೆರ 24 ಕುಟುಂಬಗಳಿಗೆ ಮಾತ್ರ ತಲಾ 2 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಉಳಿದ 12 ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಲಾಗಿದೆ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಸಾವಿನಲ್ಲೂ ತಾರತಮ್ಯ ಮಾಡುವುದನ್ನ ಸರ್ಕಾರ ನಿಲ್ಲಸಬೇಕು ಎಂದು ಚಾಮರಾಜನಗರದಲ್ಲಿ ಆರ್.ಧ್ರುವನಾರಾಯಣ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ಪ್ರಕರಣ; ತನಿಖಾ ತಂಡ ವರದಿ ನೀಡಿದ್ರೂ ಸರ್ಕಾರ ಸೈಲೆಂಟ್, ಜೀವ ಹಿಂಡಿದವರಿಗೆ ಶಿಕ್ಷೆ ಯಾವಾಗ?

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್