AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡ್ ಭೇಟಿಗೂ ಮುನ್ನ ಇಂದು ರಾತ್ರಿ ಬೆಂಗಳೂರಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ

Priyanka and Rahul Gandhi in Bengaluru: ಬೆಂಗಳೂರಿನಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಅವರು ಕಾಂಗ್ರೆಸ್​ನ ಯಾವುದೇ ಅಧಿಕೃತ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮಾಹಿತಿ ಇಲ್ಲ. ಮತದಾರರಿಗೆ ಕೃತಜ್ಞತೆ ಅರ್ಪಿಸುವ ಸಲುವಾಗಿ ವಯನಾಡ್​​​ಗೆ ತೆರಳಲಿರುವ ಅವರು ಮಾರ್ಗ ಮಧ್ಯೆ ಬೆಂಗಳೂರು ವಿಮಾನ ನಿಲ್ದಾಣ ಬಳಿ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ವಯನಾಡ್ ಭೇಟಿಗೂ ಮುನ್ನ ಇಂದು ರಾತ್ರಿ ಬೆಂಗಳೂರಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ
ಇಂದು ರಾತ್ರಿ ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ
Anil Kalkere
| Edited By: |

Updated on: Jun 11, 2024 | 11:08 AM

Share

ಬೆಂಗಳೂರು, ಜೂನ್ 11: ಕಾಂಗ್ರೆಸ್ (Congress) ಸಂಸದ ರಾಹುಲ್ ಗಾಂಧಿ (Rahul Gandhi) ಮತ್ತು ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi Vadra) ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾತ್ರಿ 9 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ರಾಹುಲ್​​, ಪ್ರಿಯಾಂಕಾರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬರಮಾಡಿಕೊಳ್ಳಲಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಖಾಸಗಿ ಹೋಟೆಲ್​ನಲ್ಲಿ ರಾತ್ರಿ ವಾಸ್ತವ್ಯ ಹೂಡಲಿರುವ ಉಭಯ ನಾಯಕರು ನಾಳೆ ಬೆಳಗ್ಗೆ ಕೇರಳದ ವಯನಾಡ್​​ಗೆ ತೆರಳಲಿದ್ದಾರೆ.

ಬೆಂಗಳೂರಿನಲ್ಲಿ ಯಾವುದೇ ಅಧಿಕೃತ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮಾಹಿತಿ ಇಲ್ಲ. ಮತದಾರರಿಗೆ ಕೃತಜ್ಞತೆ ಅರ್ಪಿಸುವ ಸಲುವಾಗಿ ವಯನಾಡ್​​​ಗೆ ತೆರಳಲಿರುವ ಅವರು ಮಾರ್ಗ ಮಧ್ಯೆ ಬೆಂಗಳೂರು ವಿಮಾನ ನಿಲ್ದಾಣ ಬಳಿ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ರಾಹುಲ್ ಹಾಗೂ ಪ್ರಿಯಾಂಕಾ ಕೇರಳದ ಮಲಪ್ಪುರಂ ಜಿಲ್ಲೆ ಹಾಗೂ ಕಲ್ಪಟ್ಟಾದಲ್ಲಿ ಬುಧವಾರ ಮತದಾರರನ್ನು ಭೇಟಿ ಮಾಡಲಿದ್ದಾರೆ. ರಾಹುಲ್ ಗಾಂಧಿ ವಯನಾಡ್ ತೊರೆದು ರಾಯ್​ಬರೇಲಿ ಉಳಿಸಿಕೊಂಡರೆ ಅವರ ಸ್ಥಾನಕ್ಕೆ ಯಾರು ಅಭ್ಯರ್ಥಿಯಾಗಲಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಿದೆ. ರಾಯಬರೇಲಿಯನ್ನು ಉಳಿಸಿಕೊಂಡು ಹಾಲಿ ಕ್ಷೇತ್ರವಾದ ವಯನಾಡನ್ನು ಹೊರಗಿಡುವ ಬಗ್ಗೆ ರಾಹುಲ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶದಲ್ಲಿ ಬದಲಾಗುತ್ತಿರುವ ರಾಜಕೀಯ ವಾತಾವರಣವನ್ನು ಗಮನಿಸಿ, ಅಲ್ಲಿ ರಾಹುಲ್ ಉಪಸ್ಥಿತಿಯು ಅವಕಾಶವನ್ನು ಬಳಸಿಕೊಳ್ಳಲು ಪಕ್ಷ ಬಯಸುತ್ತಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ಇದನ್ನೂ ಓದಿ: ವಯನಾಡು ತೊರೆದು ರಾಯ್​ಬರೇಲಿ ಸಂಸದರಾಗಿ ಉಳಿಯಲಿದ್ದಾರಾ ರಾಹುಲ್ ಗಾಂಧಿ?

ಮಲಪ್ಪುರಂ ಮತ್ತು ಕೋಯಿಕ್ಕೋಡ್ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಹೈ-ವೋಲ್ಟೇಜ್ ಕ್ಷೇತ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಹುಲ್ ಗಾಂಧಿ 3.6 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ವಿಜಯೋತ್ಸವ ಆಚರಿಸಲು ಸಿದ್ಧತೆ ನಡೆಸಲಾಗಿದೆ. 2019 ರಲ್ಲಿ, ರಾಹುಲ್ ಈ ಕ್ಷೇತ್ರದಲ್ಲಿ 4.3 ಲಕ್ಷ ಮತಗಳ ದಾಖಲೆಯ ಅಂತರದಿಂದ ಗೆಲುವು ಸಾಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?