AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈನುಗಾರಿಕೆ ನಂಬಿದ ಜಿಲ್ಲೆ ರೈತರಿಗೆ ಪ್ರೋತ್ಸಾಹ ಧನ ನೀಡದ ‘ರಾಬಕೊ’ ಒಕ್ಕೂಟ

ಕೊಪ್ಪಳ: ಆ ಮೂರು ಜಿಲ್ಲೆಯ ಬಹುತೇಕ ರೈತರು ಹೈನುಗಾರಿಕೆ ನಂಬಿ ಜೀವನ ಕಟ್ಟಿಕೊಂಡಿದ್ದಾರೆ. ಹೈನುಗಾರಿಕೆಯಿಂದಲೇ ಕುಟುಂಬ ಸಾಗಿಸುತ್ತಿದ್ದಾರೆ. ಆದ್ರೆ ಆ ಮೂರು ಜಿಲ್ಲೆಯ ರೈತರಿಗೆ ಕಳೆದ ಮೂರು ತಿಂಗಳಿಂದ ಪ್ರೋತ್ಸಾಹ ಧನ ಸಿಕ್ಕಿಲ್ಲ. ಕಳೆದ ಮೂರು ತಿಂಗಳಿಂದ ಒಕ್ಕೂಟ ಪ್ರೋತ್ಸಾಹ ಧನ ನೀಡದೆ ರೈತರ ಹೊಟ್ಟೆ ಮೇಲೆ ಬರೆ ಎಳೆದಿದೆ. ಹೈನುಗಾರಿಕೆ ನಂಬಿದ ರೈತರು ಕಂಗಾಲು: ರಾ.ಬ.ಕೊ ಅಂದ್ರೆ ರಾಯಚೂರು, ಬಳ್ಳಾರಿ ಹಾಗೂ ಕೊಪ್ಪಳ ಹಾಲು ಒಕ್ಕೂಟ. ಸದ್ಯ ಈ ಹಾಲು ಒಕ್ಕೂಟ ರೈತರಿಗೆ ಶಾಕ್ ನೀಡಿದೆ. […]

ಹೈನುಗಾರಿಕೆ ನಂಬಿದ ಜಿಲ್ಲೆ ರೈತರಿಗೆ ಪ್ರೋತ್ಸಾಹ ಧನ ನೀಡದ ‘ರಾಬಕೊ’ ಒಕ್ಕೂಟ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 20, 2020 | 7:29 PM

Share

ಕೊಪ್ಪಳ: ಆ ಮೂರು ಜಿಲ್ಲೆಯ ಬಹುತೇಕ ರೈತರು ಹೈನುಗಾರಿಕೆ ನಂಬಿ ಜೀವನ ಕಟ್ಟಿಕೊಂಡಿದ್ದಾರೆ. ಹೈನುಗಾರಿಕೆಯಿಂದಲೇ ಕುಟುಂಬ ಸಾಗಿಸುತ್ತಿದ್ದಾರೆ. ಆದ್ರೆ ಆ ಮೂರು ಜಿಲ್ಲೆಯ ರೈತರಿಗೆ ಕಳೆದ ಮೂರು ತಿಂಗಳಿಂದ ಪ್ರೋತ್ಸಾಹ ಧನ ಸಿಕ್ಕಿಲ್ಲ. ಕಳೆದ ಮೂರು ತಿಂಗಳಿಂದ ಒಕ್ಕೂಟ ಪ್ರೋತ್ಸಾಹ ಧನ ನೀಡದೆ ರೈತರ ಹೊಟ್ಟೆ ಮೇಲೆ ಬರೆ ಎಳೆದಿದೆ.

ಹೈನುಗಾರಿಕೆ ನಂಬಿದ ರೈತರು ಕಂಗಾಲು: ರಾ.ಬ.ಕೊ ಅಂದ್ರೆ ರಾಯಚೂರು, ಬಳ್ಳಾರಿ ಹಾಗೂ ಕೊಪ್ಪಳ ಹಾಲು ಒಕ್ಕೂಟ. ಸದ್ಯ ಈ ಹಾಲು ಒಕ್ಕೂಟ ರೈತರಿಗೆ ಶಾಕ್ ನೀಡಿದೆ. ಕೊಪ್ಪಳ ಬಳ್ಳಾರಿ ಹಾಗೂ ರಾಯಚೂರ ಜಿಲ್ಲೆಯ ಹೈನುಗಾರಿಕೆ ನಂಬಿದ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಯಾಕಂದ್ರೆ ಮೂರು ತಿಂಗಳಿಂದ ರಾ.ಬ.ಕೊ ಹಾಲು ಒಕ್ಕೂಟ ರೈತರಿಗೆ ಪ್ರೋತ್ಸಾಹ ಧನ ನೀಡಿಲ್ಲ. ಸರ್ಕಾರದಿಂದ ಎರಡು ರೂಪಾಯಿ ಪ್ರೋತ್ಸಾಹ ಧನ ಬರಬೇಕಾದ ಹಣವನ್ನು ರೈತರ ಖಾತೆಗೆ ಜಮೆ ಮಾಡಿಲ್ಲ. ಮೂರು ಜಿಲ್ಲೆಯು ರೈತರಿಗೆ ಕಳೆದ ಸಪ್ಟೆಂಬರ್ ಹಣ ಜಮೆಯಾಗಿದ್ದು ಬಿಟ್ರೆ ಹೊಸ ವರ್ಷ ಬಂದ್ರೂ ಪ್ರೋತ್ಸಾಹ ಧನ ಮರಿಚೀಕೆಯಾಗಿದೆ.

ಪ್ರೋತ್ಸಾಹ ಧನಕ್ಕೆ ಒಕ್ಕೂಟ ಬ್ರೇಕ್: ಹೀಗಾಗಿ ಮೂರು ಜಿಲ್ಲೆಯ ಹೈನುಗಾರಿಕೆ ನಂಬಿದ ರೈತರು ಪ್ರೋತ್ಸಾಹ ಧನ ಯಾವಾಗ ಬರುತ್ತೆ ಎಂದು ಕಾಯುತ್ತಿದ್ದಾರೆ. ಸುಮಾರು 6 ಕೋಟಿ ಅಷ್ಟು ಹಣವನ್ನು ರಾ.ಬ.ಕೊ. ಒಕ್ಕೂಟ ಪ್ರೋತ್ಸಾಹ ಧನ ನೀಡಿಲ್ಲ. ತ್ರಿವಳಿ ಜಿಲ್ಲೆಯ ಮೂರು ಜಿಲ್ಲೆಯಲ್ಲಿ 32 ಸಾವಿರ ಹಾಲು ಉತ್ಪಾದಕರಿದ್ದು ಪ್ರೋತ್ಸಾಹ ಧನಕ್ಕೆ ಬ್ರೇಕ್ ಹಾಕಲಾಗಿದೆ. ಇದರಿಂದ ನಿತ್ಯ ಹಾಲು ಮಾರಿ ಜೀವನ ನಡೆಸುತ್ತಿರೋ ರೈತ ಕುಟುಂಬಗಳು ಕಂಗಾಲಾಗಿವೆ.

ಹಾಲು ಉತ್ಪಾದಕರ ಆಕ್ರೋಶ: ತ್ರಿವಳಿ ಜಿಲ್ಲೆಯಲ್ಲಿ ನಿತ್ಯ ಒಟ್ಟು 2 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತದೆ. ಕೊಪ್ಪಳದಿಂದ 70 ಸಾವಿರ, ರಾಯಚೂರಿನಿಂದ 30 ಸಾವಿರ ಹಾಗೂ ಬಳ್ಳಾರಿ ಇಂದ ಒಂದು ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತದೆ. ಇಷ್ಟೊಂದು ಪ್ರಮಾಣದಲ್ಲಿ ತ್ರಿವಳಿ ಜಿಲ್ಲೆಯಲ್ಲಿ ಹೈನುಗಾರಿಕೆ ಇದ್ರೂ ಒಕ್ಕೂಟ ಮಾತ್ರ ಹಣ ಬಿಡುಗಡೆ ಮಾಡದೆ ಇರೋದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಹೈನುಗಾರಿಕೆ ಮಾಡೋ ಸಣ್ಣ ಪುಟ್ಟ ಕುಟಂಬಗಳಿಗೆ ಪ್ರೋತ್ಸಾಹ ಧನವೇ ಆಸರೆಯಾಗಿದ್ದು, ಒಕ್ಕೂಟ ಮೂರು ತಿಂಗಳಿಂದ ಹಣ ಬಿಡುಗಡೆ ಮಾಡದೆ ಇರೋದು ಬಡ ರೈತರನ್ನು ಬೀದಿಗೆ ತಳ್ಳಿದಂತಾಗಿದೆ.

ಒಟ್ಟಾರೆ ಸರ್ಕಾರ ಹಾಗೂ ಒಕ್ಕೂಟ ಮಾಡಿದ ಯುಡವಟ್ಟಿಗೆ ತ್ರಿವಳಿ ಜಿಲ್ಲೆಯ ರೈತರು ಬೀದಿಗೆ ಬಂದಿದ್ದಾರೆ. ಒಕ್ಕೂಟ ಲಾಭದಲ್ಲಿದ್ರೂ ಅಧಿಕಾರಿಗಳು ಮಾತ್ರ ಸರ್ಕಾರ ನೀಡೋ ಪ್ರೋತ್ಸಾಹ ಧನಕ್ಕೆ ಕಡಿವಾಣ ಹಾಕಿ ರೈತರ ಹೊಟ್ಟೆ ಮೇಲೆ ಬರೆ ಎಳೆದಿದ್ದು ಮಾತ್ರ ದುರಂತ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ