AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಜಿಲ್ಲೆ 3 ದಿನಗಳ ಕಾಲ ಸಂಪೂರ್ಣ ಬಂದ್; ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಕ್ರಮ

ಮೂರು ದಿನಗಳ ಕಾಲ, ಅಂದರೆ ಮೇ 16, 17 ಮತ್ತು 18ರಂದು ಆಸ್ಪತ್ರೆ, ಮೆಡಿಕಲ್ಸ್​, ಪೆಟ್ರೋಲ್ ಬಂಕ್​ಗಳು​ ಮಾತ್ರ ಓಪನ್ ಇರಲಿವೆ. ಈ ಅವಧಿಯಲ್ಲಿ ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಮಾರಾಟಕ್ಕೂ ತಡೆ ಹೇರಲಾಗಿದೆ.

ರಾಯಚೂರು ಜಿಲ್ಲೆ 3 ದಿನಗಳ ಕಾಲ ಸಂಪೂರ್ಣ ಬಂದ್; ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಕ್ರಮ
ಲಾಕ್​ಡೌನ್​
TV9 Web
| Edited By: |

Updated on:Aug 23, 2021 | 12:33 PM

Share

ರಾಯಚೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 3 ದಿನಗಳ ಕಾಲ ಸಂಪೂರ್ಣ ಬಂದ್ ನಡೆಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಮೇ 16, 17 ಮತ್ತು 18ರಂದು ಇಡೀ ಜಿಲ್ಲೆ ಸಂಪೂರ್ಣ ಬಂದ್ ಮಾಡುವಂತೆ ಸೂಚಿಸಲಾಗಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಡಿಸಿ ತಿಳಿಸಿದ್ದಾರೆ.

ಮೂರು ದಿನಗಳ ಕಾಲ, ಅಂದರೆ ಮೇ 16, 17 ಮತ್ತು 18ರಂದು ಆಸ್ಪತ್ರೆ, ಮೆಡಿಕಲ್ಸ್​, ಪೆಟ್ರೋಲ್ ಬಂಕ್​ಗಳು​ ಮಾತ್ರ ಓಪನ್ ಇರಲಿವೆ. ಈ ಅವಧಿಯಲ್ಲಿ ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಮಾರಾಟಕ್ಕೂ ತಡೆ ಹೇರಲಾಗಿದೆ. ಈ ಬಗ್ಗೆ ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಆದೇಶ ನೀಡಿದ್ದಾರೆ.

ರಾಜ್ಯದ ಕೊವಿಡ್ ಪ್ರಕರಣಗಳ ವಿವರ ಕಳೆದ 24 ಗಂಟೆಗಳಲ್ಲಿ ಕರ್ನಾಟಕ ರಾಜ್ಯದಲ್ಲಿ  41,779 ಜನರಿಗೆ ಕೊವಿಡ್ ಸೋಂಕು ಖಚಿತಪಟ್ಟಿದೆ. ಇದೇ ಅವಧಿಯಲ್ಲಿ ರಾಜ್ಯದಲ್ಲಿ ಕೊರೊನಾದಿಂದ 373 ಜನರು ನಿಧನರಾಗಿದ್ದಾರೆ.ಬೆಂಗಳೂರು ನಗರ ಜಿಲ್ಲೆಯಲ್ಲಿ  ಕಳೆದ 24 ಗಂಟೆಗಳಲ್ಲಿ 14,316 ಜನರಿಗೆ ಸೋಂಕು ತಗುಲಿದ್ದು ಖಚಿತಪಟ್ಟಿದ್ದು, 121 ಜನರು ಅಸು ನೀಗಿದ್ದಾರೆ. ಇಂದಿನ ಸೋಂಕಿತರ ಮೂಲಕ ರಾಜ್ಯದಲ್ಲಿ ಈವರೆಗೆ ಕೊರೊನಾಕ್ಕೆ ತುತ್ತಾದವರ ಸಂಖ್ಯೆ 21,30,267ಕ್ಕೆ ಏರಿಕೆಯಾಗಿದೆ. ಜತೆಗೆ ಈವರೆಗೆ 15,10,557 ಜನರು ಗುಣಮುಖರಾಗಿದ್ದಾರೆ.  5,98,605 ಸೋಂಕಿತರಿಗೆ ರಾಜ್ಯದ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಎಲ್ಲದರ ಜತೆಗೆ ಪ್ರಮುಖವಾಗಿ ಹೇಳಲೇಬೇಕಾದ ಅಂಶವೆಂದರೆ ಕಳೆದ 24 ಗಂಟೆಗಳಲ್ಲಿ 35,879 ಜನರು ಕೊವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ.

ಜಿಲ್ಲಾವಾರು ಸೋಂಕಿತರ ವಿವರ ಬೆಂಗಳೂರು ನಗರ ಜಿಲ್ಲೆ 14,316, ತುಮಕೂರು 2,668,  ಬಳ್ಳಾರಿ 2,421, ಮೈಸೂರು 2,340, ಬೆಳಗಾವಿ 1,592, ಮಂಡ್ಯ 1,385, ಹಾಸನ 1,339, ಉಡುಪಿ 1,219, ದಕ್ಷಿಣ ಕನ್ನಡ 1,215, ರಾಯಚೂರು 1,063, ಕಲಬುರಗಿ 929, ಧಾರವಾಡ 829, ಚಿಕ್ಕಮಗಳೂರು 835, ಉತ್ತರ ಕನ್ನಡ 78, ಬಾಗಲಕೋಟೆ 773, ಚಾಮರಾಜನಗರ ಜಿಲ್ಲೆ 713, ಬೆಂಗಳೂರು ಗ್ರಾಮಾಂತರ 707, ಯಾದಗಿರಿ 68,  ಚಿಕ್ಕಬಳ್ಳಾಪುರ 676, ಗದಗ 591, ದಾವಣಗೆರೆ 581, ಕೊಡಗು 539, ಕೊಪ್ಪಳ 495, ರಾಮನಗರ 459, ಶಿವಮೊಗ್ಗ 459, ವಿಜಯಪುರ 444, ಚಿತ್ರದುರ್ಗ 314,​ ಕೋಲಾರ 306, ಹಾವೇರಿ 292, ಬೀದರ್ 223 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಲಾಕ್​ಡೌನ್​ ಮುಂದುವರೆಸುವಂತೆ ಮುಖ್ಯಮಂತ್ರಿಗೆ ಸಲಹೆ ನೀಡಿದ ಸಚಿವರು

ರಾಜ್ಯದ 28 ಜಿಲ್ಲೆಗಳಲ್ಲಿ ಶೇ.10ಕ್ಕಿಂತ ಹೆಚ್ಚು ಕೊರೊನಾ ಪಾಸಿಟಿವಿಟಿ ಪ್ರಮಾಣ; ಮೇ.24ಕ್ಕೆ ಲಾಕ್​ಡೌನ್​ ಮುಗಿಯುವುದು ಅನುಮಾನ

Published On - 10:25 pm, Fri, 14 May 21

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್