AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ತಡೆಗೆ ಹಳ್ಳಿಗಳತ್ತ ಮುಖ ಮಾಡಿದ ಜಿಲ್ಲಾಡಳಿತ; ಕೊವಿಡ್ ನಿಯಂತ್ರಣಕ್ಕೆ ಮನೆ ಮನೆಯ ಸಮೀಕ್ಷೆ

ಪರೀಕ್ಷೆ ವೇಳೆಯಲ್ಲಿ ಸೊಂಕು ದೃಢವಾದರೆ ಕೊರೊನಾ ಕೇರ್ ಸೆಂಟರ್​ಗೆ ಶಿಫ್ಟ್ ಮಾಡಲಾಗುತ್ತಿದೆ. ಈ ಮೂಲಕ ಕ್ರೂರಿ ಕೊರೊನಾ ಸೋಂಕು ಹರಡದಂತೆ ಜಿಲ್ಲಾಡಳಿತ ದಿಟ್ಟ ಹೆಜ್ಜೆ ಮುಂದಿಟ್ಟಿದೆ ಎಂದು ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಹೇಳಿದ್ದಾರೆ.

ಕೊರೊನಾ ತಡೆಗೆ ಹಳ್ಳಿಗಳತ್ತ ಮುಖ ಮಾಡಿದ ಜಿಲ್ಲಾಡಳಿತ; ಕೊವಿಡ್ ನಿಯಂತ್ರಣಕ್ಕೆ ಮನೆ ಮನೆಯ ಸಮೀಕ್ಷೆ
ಹಳ್ಳಿಗಳಿಗೆ ಭೇಟಿ ನೀಡಿದ ರಾಯಚೂರು ಡಿಸಿ
preethi shettigar
|

Updated on: May 26, 2021 | 8:53 AM

Share

ರಾಯಚೂರು: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಸಾವು-ನೋವುಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಆ ಮೂಲಕ ಪರಿಸ್ಥಿತಿಯನನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದೆ. ಅದರಂತೆ ಪ್ರತಿಯೊಂದು ಜಿಲ್ಲೆಯಲ್ಲೂ ಕೂಡ ಕಟ್ಟುನಿಟ್ಟಿನ ಕ್ರಮಗಳನ್ನು ಚಾಲ್ತಿಗೆ ತರಲಾಗಿದೆ. ಸದ್ಯ ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ. ರಾಯಚೂರು ಜಿಲ್ಲಾಡಳಿತ ಕೂಡ ಇದೇ ಪ್ರಯತ್ನದಲ್ಲಿದ್ದು, ಹಳ್ಳಿಗಾಡಿನತ್ತ ಹೆಜ್ಜೆ ಇಟ್ಟಿದೆ. ಗ್ರಾಮೀಣ ಪ್ರದೇಶದಲ್ಲಿ ಭೀತಿ ಹುಟ್ಟಿಸಿದ್ದ ಕೊರೊನಾ ಸೋಂಕಿಗೆ ತಡೆವೊಡ್ಡಲು ಮನೆ ಮನೆಗೆ ತೆರಳಿ ಕೊವಿಡ್ ಪರೀಕ್ಷೆ ಮಾಡಲಾಗುತ್ತಿದ್ದು, ಸೊಂಕಿತರನ್ನು ಮುಲಾಜಿಲ್ಲದೇ ಪೊಲೀಸ್ ಬಲ ಬಳಸಿ ಕೊವಿಡ್ ಕೇರ್ ಸೆಂಟರ್​ ಶಿಫ್ಟ್​ ಮಾಡಲಾಗುತ್ತಿದೆ.

ಹಳ್ಳಿಗಳತ್ತ ದಾಂಗುಡಿ ಇಟ್ಟ ಅಧಿಕಾರಿಗಳು ರಾಯಚೂರು ಜಿಲ್ಲೆಯಲ್ಲಿ ಸದ್ಯ ಹಳ್ಳಿಗಳಲ್ಲಿ ಕೊರೊನಾ ಸೋಂಕು ಶರವೇಗದಲ್ಲಿ ಹಬ್ಬುತ್ತಿದೆ. ಇನ್ನು ಎಷ್ಟೇ ಲಾಕ್​ಡೌನ್ ಮಾಡಿದರು ನಗರದಲ್ಲಿ ಮಾತ್ರ ಜನಸಂದಣಿಗೆ ತಡೆ ಹಾಕಬಹುದು. ಆದರೆ ಹಳ್ಳಿಗಳಲ್ಲಿ ಜನಜೀವನ ಎಂದಿನಂತೆ ಇರಲಿದೆ. ಈ ನಡುವೆ ಹಳ್ಳಿಗಳಿಂದ ಜನ ಗಂಟಲು ದ್ರವ ಪರೀಕ್ಷೆಗೆ ಮುಂದಾಗದೇ ಇರುವುದು ಜಿಲ್ಲಾಡಳಿಕ್ಕೆ ದೊಡ್ಡ ತಲೆ ನೋವಾಗಿತ್ತು. ಹೀಗಾಗಿ ಆರೋಗ್ಯ, ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳ ತಂಡಗಳು ಪ್ರತಿ ಹಳ್ಳಿಗಳಿಗೂ ತೆರಳಿ ಮನೆ ಮನೆಗೆ ಭೇಟಿ ನೀಡಿ ಕೊವಿಡ್ ಟೆಸ್ಟ್ ಮಾಡುತ್ತಿದ್ದಾರೆ.

ಪರೀಕ್ಷೆ ವೇಳೆಯಲ್ಲಿ ಸೊಂಕು ದೃಢವಾದರೆ ಕೊರೊನಾ ಕೇರ್ ಸೆಂಟರ್​ಗೆ ಶಿಫ್ಟ್ ಮಾಡಲಾಗುತ್ತಿದೆ. ಈ ಮೂಲಕ ಕ್ರೂರಿ ಕೊರೊನಾ ಸೋಂಕು ಹರಡದಂತೆ ಜಿಲ್ಲಾಡಳಿತ ದಿಟ್ಟ ಹೆಜ್ಜೆ ಮುಂದಿಟ್ಟಿದೆ ಎಂದು ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಹೇಳಿದ್ದಾರೆ.

ಬ್ಲ್ಯಾಕ್ ಫಂಗಸ್ ಆತಂಕ ಇನ್ನು ಇದೆಲ್ಲದರ ಮಧ್ಯೆ ರಾಯಚೂರು ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಮತ್ತಷ್ಟು ಆತಂಕ ಸೃಷ್ಟಿಸಿದೆ. ಈಗಾಗಲೇ ಜಿಲ್ಲೆಯಲ್ಲಿ 7 ಜನಕ್ಕೆ ಬ್ಲ್ಯಾಕ್ ಫಂಗಸ್ ದೃಢವಾಗಿದ್ದು, ಓರ್ವರು ಬಲಿಯಾಗಿದ್ದಾರೆ. ಹೀಗಾಗಿ ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ರಾಯಚೂರಿನ ರಿಮ್ಸ್ ವೈದ್ಯಕೀಯ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್​ ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ತಿಳಿಸಿದ್ದಾರೆ.

ಮಹಿಳೆಯರು ಮತ್ತು ಪುರುಷರಿಗಾಗಿ ಪ್ರತ್ಯೇಕ 28 ಬೆಡ್​ಗಳ ವಾರ್ಡ್ ಸಿದ್ಧಪಡಿಸಲಾಗಿದೆ. ಚಿಕಿತ್ಸೆಗೆ ಬೇಕಾದ ಎಲ್ಲಾ ವೈದ್ಯಕೀಯ ಉಪಕರಣಗಳ ಖರೀದಿ ಕೂಡ ಮಾಡಲಾಗಿದೆ. ಇನ್ನು ಬ್ಲ್ಯಾಕ್ ಫಂಗಸ್​ ರೋಗ ನಿವಾರಣೆಗೆ ಬಳಸುವ ಇಂಜಕ್ಷನ್ ಪೂರೈಕೆಗೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಈಗಾಗಲೇ ಸರ್ಕಾರ 50 ವೈಲ್ಸ್​ಗಳ ಮಂಜೂರು ಕೂಡ ಮಾಡಿದೆ. ಒಬ್ಬ ರೋಗಿಗೆ ಕನಿಷ್ಟ 50 ವೈಲ್ಸ್​ಗಳು ಬೇಕಾಗಲಿದೆ. ಸಧ್ಯಕ್ಕೆ 350 ವೈಲ್ಸ್​ಗಳ ಬೇಡಿಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಹೇಳಿದ್ದಾರೆ.

ಒಟ್ಟಿನಲ್ಲಿ ರಾಯಚೂರು ಜಿಲ್ಲೆಯಾದ್ಯಂತ ನಿತ್ಯವೂ ಆತಂಕ ಹುಟ್ಟಿಸುತ್ತಿರುವ ಮಹಾಮಾರಿ ಕೊರೊನಾ ಕಟ್ಟಿ ಹಾಕಲು ಜಿಲ್ಲಾಡಳಿತ ಭಾರಿ ಪ್ರಯತ್ನ ನಡೆಸುತ್ತಿದೆ. ಅದರಲ್ಲೂ ವಿಶೇಷವಾಗಿ ಹಳ್ಳಿಗಳಲ್ಲಿ ಮನೆ ಮನೆಗೆ ತೆರಳಿ ಕೊವಿಡ್ ಟೆಸ್ಟ್ ಮಾಡುತ್ತಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಿಗೆ ಹರಡದಂತೆ ಜಿಲ್ಲಾಡಳಿತ ಮುಂಜಾಗ್ರತ ಕ್ರಮ ಕೈಗೊಂಡಿದ್ದು, ಹಳ್ಳಿಗಾಡಿನ ಜನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಇದನ್ನೂ ಓದಿ:

ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ: ಹೊಸಹಳ್ಳಿ ಕೆರೆ ವೀಕ್ಷಣೆ ಮಾಡಿದ ಸಚಿವ ಆರ್.ಅಶೋಕ್

ಕಾಂಗ್ರೆಸ್​ನಿಂದ ಬೀದಿಗಿಳಿಯಲಿದೆ ವೈದ್ಯರ ಟೀಮ್, ಮನೆ ಮನೆಗೂ ತೆರಳಿ ನಡೆಸ್ತಾರೆ ಕೊವಿಡ್ ಟೆಸ್ಟ್!

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?