AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿ ರಾಯಚೂರು ರೈತರು: ನೀರು ಬಿಡುಗಡೆಗೆ ರೈತರ ಆಗ್ರಹ

ಮಾನವಿ ತಾಲೂಕಿನಾದ್ಯಂತ ತುಂಗಭದ್ರಾ ಎಡದಂಡೆ ಕಾಲುವೆ ನೀರನ್ನೆ ನಂಬಿ ಸಾವಿರಾರು ಜನ ರೈತರು ಅಪಾರ ಪ್ರಮಾಣದಲ್ಲಿ ಭತ್ತ ನಾಟಿ ಮಾಡಿದ್ದಾರೆ. ಜಿಲ್ಲಾಡಳಿತ ಜೋಳ, ಹತ್ತಿ, ಮೆಣಸಿನಕಾಯಿ ಸೇರಿದಂತೆ ಹಲವು ಮಿತ ಬೆಳೆ ಬೆಳೆಯುವಂತೆ ಎಷ್ಟೇ ಬೇಡಿಕೊಂಡರೂ ಕಿವಿಗೊಡದ ರೈತರು ಭತ್ತ ಬೆಳೆದಿದ್ದಾರೆ.

ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿ ರಾಯಚೂರು ರೈತರು: ನೀರು ಬಿಡುಗಡೆಗೆ ರೈತರ ಆಗ್ರಹ
ಒಣಗಿ ಹೋಗಿರುವ ಮೆಣಸು
sandhya thejappa
|

Updated on: Mar 09, 2021 | 10:58 AM

Share

ರಾಯಚೂರು: ಜಿಲ್ಲೆಯಲ್ಲಿ ಬೇಸಿಗೆಗೂ ಮುನ್ನವೇ ಅನ್ನದಾತರು ಭಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಕೈಗೆ ಬಂದಿರುವ ಅಪಾರ ಪ್ರಮಾಣದ ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ತುಂಗಭದ್ರಾ ಎಡದಂಡೆ ಕಾಲುವೆ ಕೊನೆ ಭಾಗದ ರೈತರು ಸದ್ಯ ಹನಿ ಹನಿ ನೀರಿಗೂ ಪರದಾಡುತ್ತಿದ್ದಾರೆ. ಇಷ್ಟೆಲ್ಲಾ ಗೊತ್ತಿದ್ದರೂ ರೈತರ ಕೂಗಿಗೆ ನೀರಾವರಿ ಇಲಾಖೆಯ ಅಧಿಕಾರಿಗಳು ಸ್ಪಂದಿಸದೇ ಇರುವುದರಿಂದ ಲಕ್ಷಾಂತರ ಅನ್ನದಾತರ ಬದುಕು ಬೀದಿಗೆ ಬೀಳುವ ಆತಂಕ ಎದುರಾಗಿದೆ. ಅದರಲ್ಲೂ ಸದ್ಯ ಕಾಲುವೆಗೆ ನೀರು ಹರಿಸದೇ ಇದ್ದಲ್ಲಿ 1,000 ಕೋಟಿಗೂ ಅಧಿಕ ಮೌಲ್ಯದ ಭತ್ತದ ಬೆಳೆ ನಷ್ಟವಾಗುವ ಭೀತಿ ಎದುರಾಗಿದೆ.

1,000 ಕೋಟಿಗೂ ಅಧಿಕ ಮೌಲ್ಯದ ಭತ್ತ ಬೆಳೆ ನಷ್ಟದ ಭೀತಿ ತುಂಗಭದ್ರಾ ಎಡದಂಡೆ ಕಾಲುವೆಯ ನೀರನ್ನೆ ನಂಬಿ ಜಿಲ್ಲೆಯ ಸಿಂಧನೂರು, ಮಾನವಿ, ಸಿರವಾರ, ಮಸ್ಕಿ ಮತ್ತು ರಾಯಚೂರು ತಾಲೂಕಿನಾದ್ಯಂತ ಲಕ್ಷಾಂತರ ರೈತರು ಅಪಾರ ಪ್ರಮಾಣ ಬೆಳೆ ಬೆಳೆದಿದ್ದಾರೆ. ಅದರಲ್ಲೂ ವಿಶೇಷವಾಗಿ ಬೆಳೆದು ನಿಂತಿರುವ ಜೋಳ, ಹತ್ತಿ ಮತ್ತು ಮೆಣಸಿನಕಾಯಿ ಬೆಳೆಗಳಿಗೆ ನೀರಿನ ಅಗತ್ಯವಿದೆ. ಆದರೆ ತುಂಗಭದ್ರಾ ಜಲಾಶಯದಲ್ಲಿ ನೀರಿನ ಕೊರತೆ ಇರುವುದರಿಂದ ರೈತರು ಕೈಗೆ ಬಂದಿರುವ ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಸದ್ಯ ತುಂಗಭದ್ರಾ ಜಲಾಶಯದಲ್ಲಿ 7 ಟಿಎಂಸಿ ನೀರಿನ ಕೊರತೆ ಎದುರಾಗಿದ್ದು, ರಾಯಚೂರು ಜಿಲ್ಲೆಯಾದ್ಯಂತ ಬೆಳೆದು ನಿಂತಿರುವ ಬೆಳೆಗೆ ಅಗತ್ಯ ನೀರು ಪೂರೈಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣಗೊಂಡಿದೆ. ಹೀಗಾಗಿ ಕಾಲುವೆ ಕೊನೆ ಭಾಗದ ರೈತರು ಹನಿ ಹನಿ ನೀರಿಗೂ ಹರಸಾಹಸ ಪಡುತ್ತಿದ್ದಾರೆ. ಇನ್ನು ಸಿರವಾರ, ಮಸ್ಕಿ ಮತ್ತು ಮಾನವಿ ತಾಲೂಕಿನ ವ್ಯಾಪ್ತಿಯಲ್ಲಿ ರೈತರು ಅಪಾರ ಪ್ರಮಾಣದ ಭತ್ತ ಬೆಳೆದಿದ್ದಾರೆ. ಹೀಗಾಗಿ ಕಾಲುವೆಗೆ ನೀರು ಬಿಡದೇ ಇದ್ದರೆ 1,000 ಕೋಟಿಗೂ ಅಧಿಕ ಮೌಲ್ಯದ ಭತ್ತ ಒಣಗಿ ನಷ್ಟವಾಗುವ ಭೀತಿ ಹೆಚ್ಚಾಗಿದೆ.

ತುಂಗಭದ್ರಾ ಎಡದಂಡೆ ಕಾಲುವೆ

ಒಣಗಿ ಹೋಗಿದ ಬೆಳೆ

ಹನಿ ಹನಿ ನೀರಿಗೂ ತುಂಗಭದ್ರಾ ಕಾಲುವೆ ರೈತರ ಪರದಾಟ ಮಾನವಿ ತಾಲೂಕಿನಾದ್ಯಂತ ತುಂಗಭದ್ರಾ ಎಡದಂಡೆ ಕಾಲುವೆ ನೀರನ್ನೆ ನಂಬಿ ಸಾವಿರಾರು ಜನ ರೈತರು ಅಪಾರ ಪ್ರಮಾಣದಲ್ಲಿ ಭತ್ತ ನಾಟಿ ಮಾಡಿದ್ದಾರೆ. ಜಿಲ್ಲಾಡಳಿತ ಜೋಳ, ಹತ್ತಿ, ಮೆಣಸಿನಕಾಯಿ ಸೇರಿದಂತೆ ಹಲವು ಮಿತ ಬೆಳೆ ಬೆಳೆಯುವಂತೆ ಎಷ್ಟೇ ಬೇಡಿಕೊಂಡರೂ ಕಿವಿಗೊಡದ ರೈತರು ಭತ್ತ ಬೆಳೆದಿದ್ದಾರೆ. ಹೀಗಾಗಿ ಮಿತ ಬೆಳೆಗೆ ನೀರಿನ ಕೊರತೆಯಾಗಿದ್ದು, ಅತಿಯಾದ ನೀರು ನುಂಗುವ ಭತ್ತಕ್ಕೆ ನೀರು ಪೂರೈಕೆ ಮಾಡುವುದು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಭಾರಿ ಕಗ್ಗಂಟಾಗಿ ಪರಿಣಮಿಸಿದೆ.

ಈಗಾಗಲೇ ರಾಯಚೂರು ಮತ್ತು ಮಾನವಿ ತಾಲೂಕಿನ ವ್ಯಾಪ್ತಿಯ ಕಾಲುವೆ ಕೊನೆ ಭಾಗದಲ್ಲಿ ರೈತರು ಬೆಳೆದಿರುವ ಜೋಳ, ಹತ್ತಿ ಮತ್ತಿತರ ಬೆಳೆಗಳು ನೀರಿಲ್ಲದೆ ಒಣಗಿ ಹೋಗುತ್ತಿದ್ದು, ಲಕ್ಷಾಂತರ ರೈತರು ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಹೀಗಾಗಿ ಜಿಲ್ಲಾಡಳಿತ ರೈತರ ಬೆಳೆ ರಕ್ಷಣೆ ಮಾಡುವ ನಿಟ್ಟಿನಲ್ಲಿ ತುಂಗಭದ್ರ ಎಡದಂಡೆ ಕಾಲುವೆಗೆ ಅಗತ್ಯ ನೀರು ಬಿಡುಗಡೆಗೆ ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಬಳಿ ಕೇಳಿದಾಗ 7 ಟಿಎಂಸಿ ನೀರಿನ ಕೊರತೆ ಇದೆ. ರೈತರು ನೀರು ಕೇಳುತ್ತಿದ್ದಾರೆ. ಈ ಬಗ್ಗೆ ತುಂಗಭದ್ರಾ ನೀರಾವರಿ ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಜಿಲ್ಲೆಯಾದ್ಯಂತ ರೈತರ ಕೈಗೆ ಬಂದಿರುವ ಬೆಳೆಗಳ ರಕ್ಷಣೆಗೆ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ರೈತರು ಈಗಾಗಲೇ ಹಲವಡೆ ಪ್ರತಿಭಟನೆಗಳನ್ನ ಆರಂಭಿಸಿದ್ದಾರೆ. ಇದರಿಂದ ನೀರಾವರಿ ಇಲಾಖೆಯ ಅಧಿಕಾರಿಗಳು ಭಾರಿ ಇಕ್ಕಟ್ಟಿಗೆ ಸಿಲುಕಿದ್ದಾರೆ. ಇದರಿಂದಾಗಿ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ತುಂಗಭದ್ರ ಜಲಾಶಯಕ್ಕೆ ಕೊರತೆಯಾಗಿರುವ ನೀರನ್ನ ಭದ್ರ ಜಲಾಶದಿಂದ ಬಿಡುಗಡೆ ಮಾಡುವತ್ತ ತನ್ನ ಚಿತ್ತ ಹರಿಸಬೇಕಿದೆ.

ಇದನ್ನೂ ಓದಿ

ಶುಂಠಿ ಧಾರಣೆ ಕುಸಿತ.. ಬೆಳೆಗಾರರು ಕಂಗಾಲು; ವಾಣಿಜ್ಯ ಬೆಳೆಯ ಹಿಂದೆ ಬಿದ್ದು ಕೈ ಸುಟ್ಟುಕೊಂಡ ಚಿಕ್ಕಬಳ್ಳಾಪುರ ರೈತರು

Karnataka Budget 2021: ಕೃಷಿ ಮತ್ತು ಪೂರಕ ಚಟುವಟಿಕೆಗೆ ₹ 31,028 ಕೋಟಿ ಅನುದಾನ, ರೈತ ಸಮುದಾಯಕ್ಕೆ ಶಕ್ತಿ ತುಂಬಲು ಹಲವು ಯೋಜನೆ

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!