AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ನೀರಾವರಿ ಇಲಾಖೆ ಮೇಲೆ ಲೋಕಾಯುಕ್ತ ದಾಳಿ ಕೇಸ್: ಆರೋಗ್ಯ ಸರಿಯಿಲ್ಲವೆಂದು ಆಸ್ಪತ್ರೆಗೆ ದಾಖಲಾದ ಅಧಿಕಾರಿಗಳ ನಾಟಕ ಬಯಲು

ಲೋಕಾಯುಕ್ತ ದಾಳಿ ನಡೆದ ನಂತರ ಆರೋಗ್ಯ ಸರಿಯಿಲ್ಲವೆಂದು ಆಸ್ಪತ್ರೆಗೆ ದಾಖಲಾದ ನೀರಾವರಿ ಇಲಾಖೆಯ ಎಇಗಳ ನಾಟಕ ಬಯಲಾಗಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ರಾಯಚೂರು ನೀರಾವರಿ ಇಲಾಖೆ ಮೇಲೆ ಲೋಕಾಯುಕ್ತ ದಾಳಿ ಕೇಸ್: ಆರೋಗ್ಯ ಸರಿಯಿಲ್ಲವೆಂದು ಆಸ್ಪತ್ರೆಗೆ ದಾಖಲಾದ ಅಧಿಕಾರಿಗಳ ನಾಟಕ ಬಯಲು
ನೀರಾವರಿ ಇಲಾಖೆ ಮೇಲೆ ಲೋಕಾಯುಕ್ತ ದಾಳಿ ಕೇಸ್: ಆರೋಗ್ಯ ಸರಿಯಿಲ್ಲವೆಂದು ಆಸ್ಪತ್ರೆಗೆ ದಾಖಲಾದ ಅಧಿಕಾರಿಗಳ ನಾಟಕ ಬಯಲು
TV9 Web
| Edited By: |

Updated on:Nov 12, 2022 | 10:03 AM

Share

ರಾಯಚೂರು: ನೀರಾವರಿ ಇಲಾಖೆ ಮೇಲೆ ದಾಳಿ ನಡೆಸಿದ್ದ ವೇಳೆ ನಾಲ್ವರು ಇಂಜಿನಿಯರ್​ಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಈ ವೇಳೆ ತಮಗೆ ಎದೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಎಇಗಳ ಅನಾರೋಗ್ಯದ ನಾಟಕವನ್ನು ವೈದ್ಯರು ಬಯಲಿಗೆಳೆದಿದ್ದಾರೆ. ಎಸ್​ಇ ಸೂರ್ಯಕಾಂತ್, ಎಇಇ ನರಸಿಂಹರಾವ್ ದೇಶಪಾಂಡೆ, ಎಇಗಳಾದ ಭಾವನಾ, ತುಕಾರಾಂ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಇದರಲ್ಲಿ ಭಾವನಾ, ತುಕಾರಾಮ್ ಅವರ ಅನಾರೋಗ್ಯದ ನಾಟಕವನ್ನು ರಿಮ್ಸ್ ಆಸ್ಪತ್ರೆ ವೈದ್ಯರು ಬಯಲು ಮಾಡಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿ ನೀರಾವರಿ ಇಲಾಖೆ ಮೇಲೆ ದಾಳಿ ನಡೆಸಲಾಗಿತ್ತು. ಇಲಾಖೆಯ ಅಧಿಕಾರಿಗಳು ಮಹಾ ಭ್ರಷ್ಟಾಚಾರದಲ್ಲಿ ತೊಡಗಿದ್ದರು. ಅಟೆಂಡರ್ ಅವರಿಂದ ಹಿಡಿದು ಸುಪರಿಡೆಂಟ್ ಇಂಜಿನಿಯರ್​ವರೆಗೂ ಹಣ ಕೊಡಲೇಬೇಕು. ಟೇಬಲ್ ಪ್ರಕಾರ ಲಂಚ ನೀಡಲೇಬೇಕು ಎಂದು ಲೇಬರ್ ಕಾಂಟ್ರಾಕ್ಟರ್ ಈಶ್ವರಯ್ಯಗೆ ಅಧಿಕಾರಿಗಳು ನಿತ್ಯ ಕಿರುಕುಳ ನೀಡಿದ್ದರು. ಹಣ ಕೊಡದಿದ್ದರೆ ಪೈಲ್ ಅನ್ನು ಮುಂದಕ್ಕೆ ಕಳುಹಿಸುವುದಿಲ್ಲ, ಏನ್ ಮಾಡ್ಕೋತಿರಾ ಮಾಡಿಕೊಳ್ಳಿ ಎಂದು ಬೆದರಿಕೆ ಹಾಕುತ್ತಿದ್ದರು. ಅದರಂತೆ ಹಣ ಪಾವತಿಸುವಂತೆ ಅಧಿಕಾರಿಗಳು ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ತಿಂಗಳಿನ ಲೇಬರ್ ಬಿಲ್ ಬಾಕಿ ಉಳಿಸಿದ್ದರು. ದುಡ್ಡು ಕೊಟ್ಟರೆಷ್ಟೇ ಬಿಲ್ ಕ್ಲಿಯರ್ ಮಾಡುತ್ತೇವೆ ಎಂದಿದ್ದಾರೆ.

ಸಿಂಧನೂರು ತಾಲ್ಲೂಕಿನ ಸಿಂಧನೂರು ಉಪಕಾಲುವೆ ನೀರು ನಿರ್ವಹಣೆ ಕಾರ್ಯದ ಲೇಬರ್ ಬಿಲ್ ಕುರಿತು ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಸೂಪರಿಡೆಂಟ್ ಇಂಜಿನಿಯರ್ ಸೂರ್ಯಕಾಂತ್ 10 ಸಾವಿರ ರೂ. ಲಂಚ, ಎಇಇ ನರಸಿಂಹ ರಾವ್ ದೇಶಪಾಂಡೆಗೆ 8 ಸಾವಿರ, ಎಇ ಭಾವನಾ ಹಾಗೂ ಎಇ ತುಕಾರಾಮ್​ಗೆ ತಲಾ 5 ಸಾವಿರ ನೀಡಲಾಗುತ್ತಿತ್ತು. ನಿತ್ಯ ಇಂತಿಷ್ಟು ಹಣ ಅಂತ ಜೇಬು ತುಂಬಿಸಿಕೊಂಡೇ ಅಧಿಕಾರಿಗಳು ಮನೆಗೆ ತೆರಳುತ್ತಿದ್ದರು.

ಮನಸೋ ಇಚ್ಛೆ ಹಣ ಪೀಕುತ್ತಿದ್ದ ಭಾವನಾ, ನರಸಿಂಹ ರಾವ್ ಮತ್ತಿತರ ಭ್ರಷ್ಟರಿಗೆ ಬುದ್ದಿ ಕಲಿಸಲೇಬೇಕು ಎಂದು ಈಶ್ವರಯ್ಯ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು, ರಾಯಚೂರು ನೀರಾವರಿ ಇಲಾಖೆ ಮೇಲೆ ದಾಳಿ ನಡೆಸಿ ಭ್ರಷ್ಟಾಚಾರದಲ್ಲಿ ತೊಡಗಿದ್ದ ನಾಲ್ಕು ಜನ ಆರೋಪಿಗಳನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:02 am, Sat, 12 November 22

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ