AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಪತ್ನಿ ಜೊತೆಗೆ ಮತ್ತೋರ್ವ ವ್ಯಕ್ತಿಯ ಅನೈತಿಕ ಸಂಬಂಧ: ಕೊಲೆಗೈದ ಪತಿ

ಹಿಂದೂ ಮಹಿಳೆ ಜೊತೆಗೆ ಮುಸ್ಲಿಂ ವ್ಯಕ್ತಿ ಅನೈತಿಕ ಸಂಬಂಧ ಹಿನ್ನೆಲೆ ಮುಸ್ಲಿಂ ವ್ಯಕ್ತಿಯನ್ನು ಮಹಿಳೆ ಪತಿ ಕೊಚ್ಚಿ ಕೊಲೆಗೈದಿರುವಂತಹ ಘಟನೆ ರಾಯಚೂರು ಜಿಲ್ಲೆಯ ‌ಮಸ್ಕಿ ತಾಲ್ಲೂಕಿನ ಬಳಗನೂರು ಪಟ್ಟಣದಲ್ಲಿ ನಡೆದಿದೆ. ಸ್ಥಳಕ್ಕೆ ಬಳಗನೂರು ಪೊಲೀಸರು ಭೇಟಿ ಮಾಡಿ ಪರಿಶೀಲನೆ ಮಾಡಿದ್ದು, ಸದ್ಯ ಆರೋಪಿ ಮಾರುತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಗನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

ರಾಯಚೂರು: ಪತ್ನಿ ಜೊತೆಗೆ ಮತ್ತೋರ್ವ ವ್ಯಕ್ತಿಯ ಅನೈತಿಕ ಸಂಬಂಧ: ಕೊಲೆಗೈದ ಪತಿ
ಮೃತ ಖಾದರ್ ಬಾಬಾಸಾಬ್
ಭೀಮೇಶ್​​ ಪೂಜಾರ್
| Edited By: |

Updated on: Apr 23, 2024 | 3:08 PM

Share

ರಾಯಚೂರು, ಏಪ್ರಿಲ್ 23: ರಾಜ್ಯದಲ್ಲಿ ಕೋಮು, ಸಂಘರ್ಷ ಸೇರಿದಂತೆ ಹತ್ಯೆಗಳು ಹೆಚ್ಚಾದಂತೆ ಕಾಣುತ್ತಿದೆ. ಈಗಾಗಲೇ ಹುಬ್ಬಳ್ಳಿಯ ನೇಹ ಕೊಲೆ (Neha Murder) ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ನಿನ್ನೆ ಯಾದಗಿರಿಯಲ್ಲಿ ಮುಸ್ಲಿಂ (Muslim) ಯುವಕನಿಂದ ದಲಿತ ಯುವಕನ ಹತ್ಯೆ ಮಾಡಲಾಗಿತ್ತು. ಇದೀಗ ಅದೇ ರೀತಿಯಾಗಿ ರಾಯಚೂರಿನಲ್ಲೊಂದು ಘಟನೆ ನಡೆದಿದೆ. ತನ್ನ ಪತ್ನಿಯೊಂದಿಗೆ ಮುಸ್ಲಿಂ ವ್ಯಕ್ತಿ ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆ ಮುಸ್ಲಿಂ ವ್ಯಕ್ತಿಯನ್ನು ಪತಿ ಕೊಚ್ಚಿ ಕೊಲೆಗೈದಿರುವಂತಹ ಘಟನೆ ಜಿಲ್ಲೆಯ ‌ಮಸ್ಕಿ ತಾಲ್ಲೂಕಿನ ಬಳಗನೂರು ಪಟ್ಟಣದಲ್ಲಿ ನಡೆದಿದೆ.

ಮಾರುತಿ(29) ಎಂಬಾತನಿಂದ ಡ್ರೈವರ್​​ ಆಗಿದ್ದ ಖಾದರ್ ಬಾಬಾಸಾಬ್ (32) ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಬಳಗನೂರು ಪೊಲೀಸರು ಭೇಟಿ ಮಾಡಿ ಪರಿಶೀಲನೆ ಮಾಡಿದ್ದು, ಸದ್ಯ ಆರೋಪಿ ಮಾರುತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಗನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಯಾದಗಿರಿ ಮುಸ್ಲಿಂ ಯುವಕನಿಂದ ದಲಿತ ಯುವಕ ಕೊಲೆ

ಯಾದಗಿರಿ: ನಗರದಲ್ಲಿ ನಿನ್ನೆ ರಾತ್ರಿ ವೇಳೆ ನಗರದ ಶಹಾಪುರಪೇಟ ಬಡಾವಣೆಯಲ್ಲಿ ದಲಿತ ಸಮುದಾಯದ ಯುವಕ 22 ವರ್ಷದ ರಾಕೇಶ್ ಕೊಲೆಯಾಗಿದ್ದ. ಈ ಕೊಲೆ ಮಾಡಿದ್ದು ಬೇರೆ ಯಾರು ಅಲ್ಲ ಬದಲಿಗೆ ಇದೆ ಬಡಾವಣೆಯ ನಿವಾಸಿ ಮುಸ್ಲಿಂ ಸಮುದಾಯದ ಯುವಕ ಫಯಾಜ್ ಅಂಡ್ ಗ್ಯಾಂಗ್. ಈ ರಾಕೇಶ್ ನಿನ್ನೆ ಬೆಳಗ್ಗೆಯಿಂದ ಸಂಜೆ ತನಕ ಕಿರಾಣಾ ಅಂಗಡಿಯಲ್ಲಿ ಕೆಲಸ ಮಾಡಿದ್ದಾನೆ.

ಇದನ್ನೂ ಓದಿ: ಕೊನೆಗೂ ಗದಗ ಕೊಲೆ ಪ್ರಕರಣದ ರಹಸ್ಯ ಭೇದಿಸಿದ ಪೊಲೀಸರು: ಹತ್ಯೆಗಿದೆ ರೋಚಕ ಹಿನ್ನೆಲೆ

ಬಳಿಕ ಸಂಜೆ ವೇಳೆ ಮನೆಗೆ ಬಂದಿದ್ದಾನೆ. ಮನೆಗೆ ಬಂದು ಊಟ ಮಾಡಬೇಕು ಅಂತ ಅಂದುಕೊಂಡಿದ್ದಾನೆ. ಆದರೆ ಮನೆಯಲ್ಲಿ ಜೋಳದ ರೊಟ್ಟಿ ಮಾಡದ ಕಾರಣಕ್ಕೆ ರಾಕೇಶ್ ಪಕ್ಕದಲ್ಲೇ ಇರುವ ಆರೋಪಿ ಫಯಾಜ್ ಅವರ ರೊಟ್ಟಿ ಕೇಂದ್ರಕ್ಕೆ ಹೋಗಿದ್ದಾನೆ.

ಇದನ್ನೂ ಓದಿ: Hubballi: ಹುಬ್ಬಳ್ಳಿಯಲ್ಲಿ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಆರೋಪ: ಬಂಧನ

ರಾತ್ರಿ 10 ಗಂಟೆಗೆ ಹೋಗಿ ರೊಟ್ಟಿ ಕೇಂದ್ರದ ಬಾಗಿಲು ಬಡಿದು ರೊಟ್ಟಿ ಕೇಳಿದ್ದಾನೆ. ಇದೆ ವೇಳೆ ಆರೋಪಿ ಫಯಾಜ್ ಸಹೋದರಿ ಬಾಗಿಲು ಓಪನ್ ಮಾಡಿ ರೊಟ್ಟಿ ಇಲ್ಲ ಅಂತ ಹೇಳಿ ರಾತ್ರಿ ವೇಳೆ ಬಂದಿದ್ದಕ್ಕೆ ಬೈದಿದ್ದಾಳೆ. ಇದೆ ವೇಳೆ ರಾಕೇಶ್ ಕೂಡ ಫಯಾಜ್ ಸಹೋದರಿಗೆ ಬೈದು ವಾಪಸ್ ಮನೆಗೆ ಬಂದಿದ್ದಾನೆ. ಬಳಿಕ ಫಯಾಜ್ ತನ್ನ ಮೂರು ಜನ ಸ್ನೇಹಿತರೊಂದಿಗೆ ರಾಕೇಶ್ ಮನೆಗೆ ಬಂದು ಜಗಳ ಮಾಡಿಕೊಂಡಿದ್ದಾನೆ. ಇದೆ ವೇಳೆ ಫಯಾಜ್ ಮತ್ತು ಗ್ಯಾಂಗ್ ರಾಕೇಶ್ ಗುಪ್ತಾಂಗಕ್ಕೆ ಕಾಲಿನಿಂದ ಒದ್ದು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ