AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಪತ್ನಿ ಜೊತೆಗೆ ಮತ್ತೋರ್ವ ವ್ಯಕ್ತಿಯ ಅನೈತಿಕ ಸಂಬಂಧ: ಕೊಲೆಗೈದ ಪತಿ

ಹಿಂದೂ ಮಹಿಳೆ ಜೊತೆಗೆ ಮುಸ್ಲಿಂ ವ್ಯಕ್ತಿ ಅನೈತಿಕ ಸಂಬಂಧ ಹಿನ್ನೆಲೆ ಮುಸ್ಲಿಂ ವ್ಯಕ್ತಿಯನ್ನು ಮಹಿಳೆ ಪತಿ ಕೊಚ್ಚಿ ಕೊಲೆಗೈದಿರುವಂತಹ ಘಟನೆ ರಾಯಚೂರು ಜಿಲ್ಲೆಯ ‌ಮಸ್ಕಿ ತಾಲ್ಲೂಕಿನ ಬಳಗನೂರು ಪಟ್ಟಣದಲ್ಲಿ ನಡೆದಿದೆ. ಸ್ಥಳಕ್ಕೆ ಬಳಗನೂರು ಪೊಲೀಸರು ಭೇಟಿ ಮಾಡಿ ಪರಿಶೀಲನೆ ಮಾಡಿದ್ದು, ಸದ್ಯ ಆರೋಪಿ ಮಾರುತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಗನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

ರಾಯಚೂರು: ಪತ್ನಿ ಜೊತೆಗೆ ಮತ್ತೋರ್ವ ವ್ಯಕ್ತಿಯ ಅನೈತಿಕ ಸಂಬಂಧ: ಕೊಲೆಗೈದ ಪತಿ
ಮೃತ ಖಾದರ್ ಬಾಬಾಸಾಬ್
ಭೀಮೇಶ್​​ ಪೂಜಾರ್
| Edited By: |

Updated on: Apr 23, 2024 | 3:08 PM

Share

ರಾಯಚೂರು, ಏಪ್ರಿಲ್ 23: ರಾಜ್ಯದಲ್ಲಿ ಕೋಮು, ಸಂಘರ್ಷ ಸೇರಿದಂತೆ ಹತ್ಯೆಗಳು ಹೆಚ್ಚಾದಂತೆ ಕಾಣುತ್ತಿದೆ. ಈಗಾಗಲೇ ಹುಬ್ಬಳ್ಳಿಯ ನೇಹ ಕೊಲೆ (Neha Murder) ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ನಿನ್ನೆ ಯಾದಗಿರಿಯಲ್ಲಿ ಮುಸ್ಲಿಂ (Muslim) ಯುವಕನಿಂದ ದಲಿತ ಯುವಕನ ಹತ್ಯೆ ಮಾಡಲಾಗಿತ್ತು. ಇದೀಗ ಅದೇ ರೀತಿಯಾಗಿ ರಾಯಚೂರಿನಲ್ಲೊಂದು ಘಟನೆ ನಡೆದಿದೆ. ತನ್ನ ಪತ್ನಿಯೊಂದಿಗೆ ಮುಸ್ಲಿಂ ವ್ಯಕ್ತಿ ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆ ಮುಸ್ಲಿಂ ವ್ಯಕ್ತಿಯನ್ನು ಪತಿ ಕೊಚ್ಚಿ ಕೊಲೆಗೈದಿರುವಂತಹ ಘಟನೆ ಜಿಲ್ಲೆಯ ‌ಮಸ್ಕಿ ತಾಲ್ಲೂಕಿನ ಬಳಗನೂರು ಪಟ್ಟಣದಲ್ಲಿ ನಡೆದಿದೆ.

ಮಾರುತಿ(29) ಎಂಬಾತನಿಂದ ಡ್ರೈವರ್​​ ಆಗಿದ್ದ ಖಾದರ್ ಬಾಬಾಸಾಬ್ (32) ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಬಳಗನೂರು ಪೊಲೀಸರು ಭೇಟಿ ಮಾಡಿ ಪರಿಶೀಲನೆ ಮಾಡಿದ್ದು, ಸದ್ಯ ಆರೋಪಿ ಮಾರುತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಗನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಯಾದಗಿರಿ ಮುಸ್ಲಿಂ ಯುವಕನಿಂದ ದಲಿತ ಯುವಕ ಕೊಲೆ

ಯಾದಗಿರಿ: ನಗರದಲ್ಲಿ ನಿನ್ನೆ ರಾತ್ರಿ ವೇಳೆ ನಗರದ ಶಹಾಪುರಪೇಟ ಬಡಾವಣೆಯಲ್ಲಿ ದಲಿತ ಸಮುದಾಯದ ಯುವಕ 22 ವರ್ಷದ ರಾಕೇಶ್ ಕೊಲೆಯಾಗಿದ್ದ. ಈ ಕೊಲೆ ಮಾಡಿದ್ದು ಬೇರೆ ಯಾರು ಅಲ್ಲ ಬದಲಿಗೆ ಇದೆ ಬಡಾವಣೆಯ ನಿವಾಸಿ ಮುಸ್ಲಿಂ ಸಮುದಾಯದ ಯುವಕ ಫಯಾಜ್ ಅಂಡ್ ಗ್ಯಾಂಗ್. ಈ ರಾಕೇಶ್ ನಿನ್ನೆ ಬೆಳಗ್ಗೆಯಿಂದ ಸಂಜೆ ತನಕ ಕಿರಾಣಾ ಅಂಗಡಿಯಲ್ಲಿ ಕೆಲಸ ಮಾಡಿದ್ದಾನೆ.

ಇದನ್ನೂ ಓದಿ: ಕೊನೆಗೂ ಗದಗ ಕೊಲೆ ಪ್ರಕರಣದ ರಹಸ್ಯ ಭೇದಿಸಿದ ಪೊಲೀಸರು: ಹತ್ಯೆಗಿದೆ ರೋಚಕ ಹಿನ್ನೆಲೆ

ಬಳಿಕ ಸಂಜೆ ವೇಳೆ ಮನೆಗೆ ಬಂದಿದ್ದಾನೆ. ಮನೆಗೆ ಬಂದು ಊಟ ಮಾಡಬೇಕು ಅಂತ ಅಂದುಕೊಂಡಿದ್ದಾನೆ. ಆದರೆ ಮನೆಯಲ್ಲಿ ಜೋಳದ ರೊಟ್ಟಿ ಮಾಡದ ಕಾರಣಕ್ಕೆ ರಾಕೇಶ್ ಪಕ್ಕದಲ್ಲೇ ಇರುವ ಆರೋಪಿ ಫಯಾಜ್ ಅವರ ರೊಟ್ಟಿ ಕೇಂದ್ರಕ್ಕೆ ಹೋಗಿದ್ದಾನೆ.

ಇದನ್ನೂ ಓದಿ: Hubballi: ಹುಬ್ಬಳ್ಳಿಯಲ್ಲಿ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಆರೋಪ: ಬಂಧನ

ರಾತ್ರಿ 10 ಗಂಟೆಗೆ ಹೋಗಿ ರೊಟ್ಟಿ ಕೇಂದ್ರದ ಬಾಗಿಲು ಬಡಿದು ರೊಟ್ಟಿ ಕೇಳಿದ್ದಾನೆ. ಇದೆ ವೇಳೆ ಆರೋಪಿ ಫಯಾಜ್ ಸಹೋದರಿ ಬಾಗಿಲು ಓಪನ್ ಮಾಡಿ ರೊಟ್ಟಿ ಇಲ್ಲ ಅಂತ ಹೇಳಿ ರಾತ್ರಿ ವೇಳೆ ಬಂದಿದ್ದಕ್ಕೆ ಬೈದಿದ್ದಾಳೆ. ಇದೆ ವೇಳೆ ರಾಕೇಶ್ ಕೂಡ ಫಯಾಜ್ ಸಹೋದರಿಗೆ ಬೈದು ವಾಪಸ್ ಮನೆಗೆ ಬಂದಿದ್ದಾನೆ. ಬಳಿಕ ಫಯಾಜ್ ತನ್ನ ಮೂರು ಜನ ಸ್ನೇಹಿತರೊಂದಿಗೆ ರಾಕೇಶ್ ಮನೆಗೆ ಬಂದು ಜಗಳ ಮಾಡಿಕೊಂಡಿದ್ದಾನೆ. ಇದೆ ವೇಳೆ ಫಯಾಜ್ ಮತ್ತು ಗ್ಯಾಂಗ್ ರಾಕೇಶ್ ಗುಪ್ತಾಂಗಕ್ಕೆ ಕಾಲಿನಿಂದ ಒದ್ದು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ