AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಬೆಟ್ಟಿಂಗ್: 3 ಲಕ್ಷ ರೂ. ಬೇಡಿಕೆ ಆರೋಪ, ಗಬ್ಬೂರು ಪಿಎಸ್​​ಐ, ಕಾನ್ಸ್​ಟೇಬಲ್ ಬಂಧನ

ಐಪಿಎಲ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟ ಆರೋಪ ಹಿನ್ನೆಲೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಠಾಣೆ ಮೇಲೆ‌ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಿ ಠಾಣೆ PSI ಮಂಜುನಾಥ್​ ಮತ್ತು ಕಾನ್ಸ್​ಟೇಬಲ್​ ರಮೇಶ್​ರನ್ನು ಬಂಧಿಸಿದ್ದಾರೆ. ಫಾರೂಖ್​ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

ಐಪಿಎಲ್ ಬೆಟ್ಟಿಂಗ್: 3 ಲಕ್ಷ ರೂ. ಬೇಡಿಕೆ ಆರೋಪ, ಗಬ್ಬೂರು ಪಿಎಸ್​​ಐ, ಕಾನ್ಸ್​ಟೇಬಲ್ ಬಂಧನ
ಐಪಿಎಲ್ ಬೆಟ್ಟಿಂಗ್: 3 ಲಕ್ಷ ರೂ. ಬೇಡಿಕೆ ಆರೋಪ, ಗಬ್ಬೂರು ಪಿಎಸ್​​ಐ, ಕಾನ್ಸ್​ಟೇಬಲ್ ಬಂಧನ
ಭೀಮೇಶ್​​ ಪೂಜಾರ್
| Edited By: |

Updated on: May 24, 2024 | 9:55 PM

Share

ರಾಯಚೂರು, ಮೇ 24: ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಠಾಣೆ ಮೇಲೆ‌ ಲೋಕಾಯುಕ್ತ (Lokayukta) ಅಧಿಕಾರಿಗಳ ದಾಳಿ ಮಾಡಿ ಠಾಣೆ PSI ಮಂಜುನಾಥ್​ ಮತ್ತು ಕಾನ್ಸ್​ಟೇಬಲ್​ ರಮೇಶ್ ಬಂಧನ ಮಾಡಿದ್ದಾರೆ. ಐಪಿಎಲ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ PSI ಮಂಜುನಾಥ್​​​ ವಿರುದ್ಧ ಹಣಕ್ಕೆ ಬೇಡಿಕೆ ಆರೋಪ ಹಿನ್ನಲೆ ಬಂಧಿಸಿರುವುದಾಗಿ ಟಿವಿ9ಗೆ ಲೋಕಾಯುಕ್ತ ಉನ್ನತ ಮೂಲಗಳ ಮಾಹಿತಿ ನೀಡಿದೆ. ಫಾರೂಖ್​​ ಎಂಬಾತನ ಬಳಿ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿದೆ.

ಈ ಬಗ್ಗೆ ಪಿಎಸ್​ಐ ಮಂಜುನಾಥ್​​ ವಿರುದ್ಧ ಫಾರೂಖ್​ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಮೊದಲ ಕಂತಿನಲ್ಲಿ​​ 1 ಲಕ್ಷ ರೂ. ಹಣ ಪಡೆದಿದ್ದು, ನಂತರ 70 ಸಾವಿರ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಫಾರೂಖ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದು ಪೊಲೀಸ್​ ಪೇದೆ ಎಸ್ಕೇಫ್​

ಇಂದು ಕಾನ್ಸ್​ಟೇಬಲ್ ರಮೇಶ್ 50 ಸಾವಿರ ರೂ. ಹಣ ಪಡೆಯುತ್ತಿದ್ದಾಗ ಅವರು ಕೂಡ ಲೋಕಾ ಬಲೆಗೆ ಬಿದಿದ್ದಾರೆ.​ ವಿಚಾರಣೆ ವೇಳೆ ಪಿಎಸ್​ಐ ಮಂಜುನಾಥ್ ವಿರುದ್ಧವೂ ಆರೋಪ ಮಾಡಿದ್ದಾರೆ. ಹೀಗಾಗಿ ಪ್ರಕರಣ ಸಂಬಂಧ ಇಬ್ಬರನ್ನು ಲೋಕಾ ಪೊಲೀಸರು ಬಂಧಿಸಿದ್ದಾರೆ.

ಐಪಿಎಲ್ ಬೆಟ್ಟಿಂಗ್: ನಾಲ್ವರ ಪೈಕಿ ಓರ್ವ ಅರೆಸ್ಟ್​

ಕೋಲಾರ: ನಗರದಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ವರ ಪೈಕಿ ಓರ್ವನನ್ನ ಬಂಧಿಸಿದ್ದು, ಮೂವರು  ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೊಲಾರದ ಗಲ್‌ಪೇಟೆ ಠಾಣೆಯ ಪೊಲೀಸರ ಕಾರ್ಯಾಚರಣೆ ನಡೆಸಿ, ಕೋಲಾರ ನಗರದ ರೆಹಮತ್ ನಗರದ ಉರ್ದು ಶಾಲೆಯ ಬಳಿ ಆನ್ ಲೈನ್ ಮೂಲಕ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸಲಾಗುತಿತ್ತು.

ಇದನ್ನೂ ಓದಿ: ಕೋಲಾರ: ಮಳಿಗೆ ನೋಂದಣಿ ಮಾಡಿಸಲು ಲಂಚಕ್ಕೆ ಬೇಡಿಕೆ ಆರೋಪ: ಎಪಿಎಂಸಿ ಕಾರ್ಯದರ್ಶಿ ವಿಡಿಯೋ ವೈರಲ್

ನಾಲ್ಕು ಜನ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ತಂಡದ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ನಾಲ್ವರಿಗಾಗಿ ಶೋಧ ನಡೆಸುತ್ತಿದ್ದಾರೆ. ಇನ್ನೂ ಸ್ಥಳದಲ್ಲಿ 1 ಮೋಬೈಲ್ ಫೋನ್, 3400 ರೂ ನಗದು ಹಣ ವಶಕ್ಕೆ ಪಡೆಯಲಾಗಿದ್ದು, ಕೋಲಾರದ ಮಹಾಲಕ್ಷ್ಮಿ ಲೇಔಟ್ ನಿವಾಸಿ ಮುಜಾಮಿಲ್ ಕ್ರಿಕೆಟ್ ಬೆಟ್ಟಿಂಗ್ ಕಿಂಗ್ ಪಿನ್ ಎನ್ನಲಾಗಿದೆ. ಆಪ್ ವೊಂದನ್ನ ಬಳಿಸಿಕೊಂಡು ಆನ್ ಲೈನ್ ಮೂಲಕ ಬೆಟ್ಟಿಂಗ್ ನಡೆಸುತಿತ್ತು ಎನ್ನಲಾಗಿದ್ದು, ಮುಜಮಿಲ್, ಕುತುಬ್ ಪಾಷಾ, ಇಮ್ರಾನ್ ಪರಾರಿಯಾಗಿದ್ದಾರೆ, ಆದ್ರೆ ನಿಜಾಮುದ್ದಿನ್ ಬಂಧಿಸಿ ವಿಚಾರಣೆ ಕೈಗೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..