Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕ ಹುದ್ದೆಗೆ ಆಯ್ಕೆಯಾಗಿದ್ದರೂ ದಾಖಲಾತಿಯಲ್ಲಿ ಪರಿಶೀಲನೆಯಲ್ಲಿ ರಿಜೆಕ್ಟ್, ವ್ಯವಸ್ಥೆ ವಿರುದ್ಧ ಬೇಸತ್ತು ಯುವಕ ಆತ್ಮಹತ್ಯೆ

25 ವರ್ಷದ ಯುವಕನೋರ್ವ 2022ರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿದ್ದ. ಇನ್ನೇನು ಶಿಕ್ಷಕ ಆಗುತ್ತೇನೆ ಎಂದು ಸಂತೋಷದಲ್ಲಿದ್ದ. ಆದ್ರೆ, ಯಾವುದೋ ದಾಖಲಾತಿಯಿಂದಾಗಿ ಕೊನೆ ಹಂತದಲ್ಲಿ ಸರ್ಕಾರಿ ಶಾಲೆ ಶಿಕ್ಷಕ ಹುದ್ದೆ ಕೈ ತಪ್ಪಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ. ಇದರಿಂದ ಮನನೊಂದು ಪ್ರಾಣಬಿಟ್ಟಿದ್ದಾನೆ.

ಶಿಕ್ಷಕ ಹುದ್ದೆಗೆ ಆಯ್ಕೆಯಾಗಿದ್ದರೂ ದಾಖಲಾತಿಯಲ್ಲಿ ಪರಿಶೀಲನೆಯಲ್ಲಿ ರಿಜೆಕ್ಟ್, ವ್ಯವಸ್ಥೆ ವಿರುದ್ಧ ಬೇಸತ್ತು ಯುವಕ ಆತ್ಮಹತ್ಯೆ
ಚನ್ನಬಸವ ((25) ಮೃತ ಯುವಕ
Follow us
ಭೀಮೇಶ್​​ ಪೂಜಾರ್
| Updated By: ರಮೇಶ್ ಬಿ. ಜವಳಗೇರಾ

Updated on:Aug 25, 2023 | 2:41 PM

ರಾಯಚೂರು, (ಆಗಸ್ಟ್ 25): ಆಡಳಿತ ವ್ಯವಸ್ಥೆ ವಿರುದ್ಧ ಬೇಸತ್ತು ಯುವಕನೋರ್ವ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ರಾಯಚೂರು(Raichur) ಜಿಲ್ಲೆ ದೇವದುರ್ಗ ತಾಲ್ಲೂಕಿನ ಚಿಕ್ಕಬೂದುರು ಗ್ರಾಮದಲ್ಲಿ ನಡೆದಿದೆ. ಚನ್ನಬಸವ ((25) ಮೃತ ಯುವಕ. 2022ರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿದ್ದ. ಆದ್ರೆ, ಯಾವುದೋ ದಾಖಲಾತಿಯಿಂದಾಗಿ ಕೊನೆ ಹಂತದಲ್ಲಿ ಸರ್ಕಾರಿ ಶಾಲೆ ಶಿಕ್ಷಕ ಹುದ್ದೆ ಕೈ ತಪ್ಪಿತ್ತು. ಈ ಹಿನ್ನೆಲೆ ಕಳೆದ ಕೆಲ ತಿಂಗಳುಗಳಿಂದ ಮನನೊಂದು, ಇಂದು (ಆಗಸ್ಟ್ 25) ಚಿಕ್ಕಬೂದುರು ಗ್ರಾಮದ ಖಾಸಗಿ ಶಾಲೆ ಪಕ್ಕದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ಸಾವಿಗೂ ಮುನ್ನ ಡೆತ್ ನೋಟ್ ನಲ್ಲಿ ವ್ಯವಸ್ಥೆ ವಿರುದ್ಧ ಬೇಸರ ವ್ಯಕ್ತಪಡಿಸಿರುವ ಚೆನ್ನಬಸವ, ಸಾವಿಗೆ ನಾನೇ ಕಾರಣ, ತನ್ನ ಪೋಷಕರು ಅಮಾಯಕರು. ಅವರು ದೂರು ಕೊಡಲು ಬಂದರೆ ಸ್ಬೀಕರಿಸಬೇಡಿ ಎಂದು ಡೆತ್ ನೋಟ್​ನಲ್ಲಿ ಬರೆದಿದ್ದಾನೆ.

ಇದನ್ನೂ ಓದಿ: ರಾಯಚೂರು: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ SSLC ವಿದ್ಯಾರ್ಥಿನಿ ಆತ್ಮಹತ್ಯೆ

ಸರಿಯಾಗಿ ಓದು ಎಂದಿದ್ದಕ್ಕೆ ಪ್ರಾಣ ಕಳೆದುಕೊಂಡ ವಿದ್ಯಾರ್ಥಿನಿ

ಕಲಬುರಗಿ, (ಆಗಸ್ಟ್ 25): ಕಾಲೇಜಿಗೆ (Collège) ಹೋಗಿ ಚೆನ್ನಾಗಿ ಓದು ಎಂದು ಬುದ್ಧಿವಾದ ಹೇಳಿದ್ದಕ್ಕೆ ಪಿಯು ವಿದ್ಯಾರ್ಥಿನಿ(Student) ಕೆರೆಗೆ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದಲ್ಲಿ ನಡೆದಿದೆ. ಕಾವೇರಿ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಪ್ರತಿದಿನ ತಪ್ಪದೇ ಕಾಲೇಜಿಗೆ ಹೋಗಿ ಚೆನ್ನಾಗಿ ಓದುವಂತೆ ಪೋಷಕರು ಬೈದು ಬುದ್ಧಿವಾದ ಹೇಳಿದ್ದಕ್ಕೆ ಕಾವೇರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯ ಹೋರಾಟಗಾರ ಜಿಗಣಿ ಶಂಕರ್ ಹೃದಯಾಘಾತದಿಂದ ನಿಧನ

ಆನೇಕಲ್: ಹಿರಿಯ ಹೋರಾಟಗಾರ ಜಿಗಣಿ ಶಂಕರ್(66) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕರ್ನಾಟಕ ರಿಪಬ್ಲಿಕ್ ಸೇನೆ ಸಂಘಟನೆ ರಾಜ್ಯಾಧ್ಯಕ್ಷರಾಗಿದ್ದ ಜಿಗಣಿ ಶಂಕರ್​, ಇಂದು(ಆಗಸ್ಟ್ 25) ಖಾಸಗಿ ಕಾರ್ಯಕ್ರಮದ ನಿಮಿತ್ತ ಕೋಲಾರಕ್ಕೆ ತೆರಳಿದ್ದಾಗ ಹೃದಯಾಘಾತವಾಗಿದೆ, ದಲಿತ ಪರ ಹೋರಾಟದಲ್ಲಿ ಜಿಗಣಿ ಶಂಕರ್ ಮುಂಚೂಣಿಯಲ್ಲಿರುತ್ತಿದ್ದರು. ಇನ್ನು ಜಿಗಣಿ ಬಳಿಯ ಬಂಡೇನಲ್ಲಸಂದ್ರ ಗ್ರಾಮದ ನಿವಾಸದ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4 ಗಂಟೆಗೆ ಬಂಡೇನಲ್ಲಸಂದ್ರ ಬಳಿ ಜಮೀನಿನಲ್ಲಿ ಶಂಕರ್ ಅವರ​ ಅಂತ್ಯಕ್ರಿಯೆ ನಡೆಯಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:36 pm, Fri, 25 August 23

ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ