AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಪೋಷಕರಿಂದಲೇ 28 ವರ್ಷದ ಮಗನ ಗೃಹ ಬಂಧನ! ಹೆತ್ತವರ ಕಣ್ಣೀರ ಕಥೆ

ಅದು ಕಲ್ಲು ಹೃದಯವನ್ನು ಕರಗಿಸುವ ಪ್ರಕರಣ. ಅಲ್ಲಿ ಹೆಗಲೆತ್ತರಕ್ಕೆ ಬೆಳೆದಿದ್ದ ಮಗ ಹೆತ್ತವರಿಂದಲೇ ಗೃಹ ಬಂಧನಕ್ಕೊಳಲಾಗಿ, ಕೈ ಕಾಲುಗಳಿಗೆ ಕೋಳ ಹಾಕಲಾಗಿತ್ತು. ಹಡೆದ ತಪ್ಪಿಗೆ ಆ ತಾಯಿ ಪಡುತ್ತಿರುವ ಕಷ್ಟ, ನೋವು ಅಷ್ಟಿಷ್ಟಲ್ಲ, ಆ ತಾಯಿ-ಮಗನ  ಕರುಣಾಜನಕ ಕಥೆ ಇಲ್ಲಿದೆ.

ರಾಯಚೂರಿನಲ್ಲಿ ಪೋಷಕರಿಂದಲೇ 28 ವರ್ಷದ ಮಗನ ಗೃಹ ಬಂಧನ! ಹೆತ್ತವರ ಕಣ್ಣೀರ ಕಥೆ
ರಾಯಚೂರು
ಭೀಮೇಶ್​​ ಪೂಜಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 07, 2023 | 7:36 PM

Share

ರಾಯಚೂರು, ಅ.07: ಜಿಲ್ಲೆಯ ಲಿಂಗಸುಗೂರು(Lingasugur) ತಾಲ್ಲೂಕಿನ ದೇವರಭೂಪುರ ದೊಡ್ಡಿಯ ನೀಲಮ್ಮ ಹಾಗೂ ರಂಗಪ್ಪ ದಂಪತಿಗೆ ಇಬ್ಬರು ಮಕ್ಳಳು. ಆ ಪೈಕಿ ಮೊದಲನೇ ಮಗನೇ ಹೆಸರು ಹನುಮಂತ. ಆತನಿಗೆ ಅಂದಾಜು 28 ವರ್ಷ. ಆದ್ರೆ , ಎಲ್ಲರಂತೆ ಆಡಿ, ಓಡಾಡಿಕೊಂಡು ಇರಬೇಕಿದ್ದ ಹನುಮಂತ ಗೃಹ ಬಂಧನದಲ್ಲಿದ್ದಾನೆ. ಅಷ್ಟಕ್ಕೂ ಈತನನ್ನ ಗೃಹ ಬಂಧನದಲ್ಲಿರಿಸಿರುವುದು ಇತನ ಹೆತ್ತವರೇ. ಹೌದು, ಹನುಮಂತ ಮಾನಸಿಕ ಅಸ್ವಸ್ಥ ಆಗಿರುವುದರಿಂದ ಈತ ಕಳೆದ 8 ವರ್ಷಗಳಿಂದ ತಮ್ಮ ಮನೆಯಲ್ಲೇ ಗೃಹ ಬಂಧನದಲ್ಲಿದ್ದಾನೆ.

ಇನ್ನು ಹನುಮಂತನ ಕೈಕಾಲುಗಳಿಗೆ ಕೋಳ ಹಾಕಲಾಗಿದೆ. ಈತನನ್ನ ಮನೆಯ ಒಂದು ಕೋಣೆಯಲ್ಲಿರಿಸಿದ್ರೆ, ತಾಯಿ ನೀಲಮ್ಮ, ತಂದೆ ರಂಗಮ್ಮ ಹಾಗೂ ತಮ್ಮ ವೆಂಕಟೇಶ್ ಮತ್ತೊಂದು ಕೋಣೆಯಲ್ಲಿ ಇರುತ್ತಾರೆ. ಹಸಿದಾಗ ಹನುಮಂತುಗೆ ಆತನ ಕೋಣೆಗೆ ತಟ್ಟೆಯಲ್ಲಿ ಊಟ, ನೀರು ಕೊಡಲಾಗುತ್ತೆ. ಪಾಪ ಹನುಮಂತುಗೆ ಏನಾಗ್ತಿದೆ, ತನಗೇನಾಗಿದೆ ಅನ್ನೋದೇ ಗೊತ್ತಿಲ್ಲ. ಅಷ್ಟಕ್ಕೂ ಈ ಹನುಮಂತ ಶಿಕ್ಷಣ ಕೂಡ ಪಡೆದಿದ್ದು, ಪಿಯುಸಿಯಲ್ಲಿ ಒಂದೆರಡು ವಿಷಯದಲ್ಲಿ ಫೇಲ್ ಆಗಿದ್ದ. ಇದಾದ ಬಳಿಕ ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದ ಹಿನ್ನಲೆ ಹೊಲಕ್ಕೆ‌ ದುಡಿಯಲು ಹೋಗಿದ್ದ ವೇಳೆ ಮರದಿಂದ ಬಿದ್ದು ಗಾಯಗೊಂಡಿದ್ದ.

ಇದನ್ನೂ ಓದಿ:ಬಡ್ಡಿ ಹಣಕ್ಕಾಗಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ, ಕೂಡು ಹಾಕಿದ್ದ ಬಡ್ಡಿ ದಂಧೆಕೋರರು; ಯುವಕನ ಸ್ಥಿತಿ ಚಿಂತಾಜನಕ, ತಾಯಿ ಕಣ್ಣೀರು

ಮಾನಸಿಕ ಅಸ್ವಸ್ಥ ಮಗನ ಕೈ ಕಾಲುಗಳಿಗೆ ಕೋಳ; ಹೆತ್ತವರ ಕಣ್ಣೀರು

ಅಷ್ಟೇ, ಇದಾದ ಬಳಿಕ ಹನುಮಂತ ಮಾನಸಿಕವಾಗಿ ನೊಂದುಹೋಗಿದ್ದ. ನಂತರ ಹನುಮಂತನ ಸ್ಥಿತಿ ಏರುಪೇರಾದಾಗ ಆತ ಊರವರ ಮೇಲೆ ಹಲ್ಲೆ ನಡೆಸುತ್ತಿದ್ದು, ಜೊತೆಗೆ ಸಾಕು ಪ್ರಾಣಿಗಳನ್ನೂ ಕೊಂದಿದ್ದ. ಹೀಗಾಗಿ ಊರವರ ದೂರುಗಳು ಹೆಚ್ಚಾಗಿದ್ದವು. ಅದೆಷ್ಟೋ ಜನ ಹನುಮಂತನನನ್ನ ಆಸ್ಪತ್ರೆಗೆ ಸೇರಿಸಿ, ಇಲ್ಲ ಜನರಿಗೆ ಹಾನಿ ಮಾಡುತ್ತಾನೆ ಎಂದು ಎಚ್ಚರಿಸಿದ್ದರು. ಹೀಗಾಗಿ ಜನರಿಗೆ ಏನಾದ್ರು, ಮಾಡಿಯಾನು ಎನ್ನುವ ಭಯದಲ್ಲಿ ಹನುಮಂತನ ಪೋಷಕರು ಆತನ ಕೈಕಾಲುಗಳಿಗೆ ಕೋಳ ಹಾಕಿ ಗೃಹ ಬಂಧನದಲ್ಲಿರಿಸಿದ್ದಾರೆ‌. ಇದನ್ನು ನೋಡಿ ಹೆತ್ತವರು ಕಣ್ಣೀರಿಡುತ್ತಿದ್ದಾರೆ.

ಇತ್ತ ಕಳೆದ ಎಂಟು ವರ್ಷಗಳಿಂದ ಆತನಿಗೆ ವಿವಿಧ ಅಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆದ್ರೆ, ದುರದೃಷ್ಟವಶಾತ್ ಆತ ಮಾತ್ರ ಚೇತರಿಕೆಯಾಗಿಲ್ಲ. ಹನುಮಂತ ಕೆಲವೊಮ್ಮೆ ಕಲ್ಲು, ಗಾಜು, ಕಟ್ಟಿಗೆಗಳನ್ನು ತಿನ್ನುತ್ತಾನಂತೆ. ಸದ್ಯ ಇಳಿ ವಯಸ್ಸಲ್ಲಿ ತಂದೆ-ತಾಯಿ ಸಲುಹಬೇಕಿದ್ದ ಮಗ, ಗೃಹ ಬಂಧನದಲ್ಲಿ ನರಳುತ್ತಿರುವುದು ದುರಂತ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!