ರಾಯಚೂರು: ಕಲುಷಿತ ನೀರು ಸೇವಿಸಿ 30 ಜನರು ಅಸ್ವಸ್ಥ

ಸಿಂಧನೂರು ತಾಲೂಕಿನ ಭೂತಲದಿನ್ನಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ್ದರಿಂದ 30 ಜನರು ಅಸ್ವಸ್ಥರಾಗಿದ್ದಾರೆ. ಟ್ಯಾಂಕರ್‌ನಿಂದ ಪೂರೈಕೆಯಾದ ನೀರು ಕುಡಿದು ಅನೇಕರಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ. ಗ್ರಾಮ ಪಂಚಾಯಿತಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರು ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಟ್ಯಾಂಕರ್ ಸ್ವಚ್ಛತೆ ಕುರಿತು ಪ್ರಶ್ನೆಗಳು ಎದ್ದಿವೆ.

ರಾಯಚೂರು: ಕಲುಷಿತ ನೀರು ಸೇವಿಸಿ 30 ಜನರು ಅಸ್ವಸ್ಥ
ಗ್ರಾಮದಲ್ಲಿ ವೈದ್ಯರ ತಪಾಸಣೆ
Edited By: ವಿವೇಕ ಬಿರಾದಾರ

Updated on: Jun 14, 2025 | 3:23 PM

ರಾಯಚೂರು, ಜೂನ್​ 14: ಕಲುಷಿತ ನೀರು (Polluted water) ಸೇವಿಸಿ 30 ಜನರು ಅಸ್ವಸ್ಥಗೊಂಡಿರುವ ಘಟನೆ ಸಿಂಧನೂರು (Sindhanur) ತಾಲೂಕಿನ ಭೂತಲದಿನ್ನಿ ಗ್ರಾಮದಲ್ಲಿ ನಡೆದಿದೆ. ಟ್ಯಾಂಕರ್​ನಿಂದ​ ಪೂರೈಕೆಯಾದ ನೀರು ಕುಡಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಲುಷಿತ ನೀರು ಕುಡಿದು 25ಕ್ಕೂ ಹೆಚ್ಚು ಜನರು ವಾಂತಿ ಭೇದಿಯಿಂದ ಬಳಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್ ಸ್ವಚ್ಛಗೊಳಿಸದೆ ನೀರು ಪೂರೈಕೆ ಮಾಡಿರುವ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿ ವಿರುದ್ಧ ಭೂತಲದಿನ್ನಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರ ಆರೋಗ್ಯ ತಪಾಸಣೆ ಮಾಡಿದರು.

ಪಿಡಿಒ ಅಮಾನತು

ಕರ್ತವ್ಯ ಲೋಪ ಹಾಗೂ ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಇಬ್ಬರು ಗ್ರಾಮ ಪಂಚಾಯಿತಿ ಪಿಡಿಒಗಳನ್ನು ಅಮಾನತು ಮಾಡಲಾಗಿದೆ. ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮ ಪಂಚಾಯಿತಿ ಪಿಡಿಒ ಶಿವರಾಜು ಮತ್ತು ಲಿಂಗಸುಗೂರು ತಾಲೂಕಿನ ಕೋಠಾ ಗ್ರಾಮ ಪಂಚಾಯಿತಿ ಪಿಡಿಒ ಗಂಗಮ್ಮ ಅವರನ್ನು ಅಮಾನತು ಮಾಡಲಾಗಿದೆ.

ಇದನ್ನೂ ನೋಡಿ: ರಾಯಚೂರಿನಲ್ಲಿ ಸುರಿದ ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ

ಇದನ್ನೂ ಓದಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಆರ್​ಸಿಬಿ ಫೈನಲ್​ಗೇರಿದ ಖುಷಿಯಲ್ಲಿ ಪೆಟ್ರೋಲ್ ಚೀಲ ಸಿಡಿಸಿದ 8 ಯುವಕರ ಬಂಧನ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ

ಕೋಠಾ ಗ್ರಾಮ ಪಂಚಾಯಿತಿ ಪಿಡಿಒ ಗಂಗಮ್ಮ ಅವರು 26,71,303 ರೂ. ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಅಮಾನತು ಮಾಡಲಾಗಿದೆ.  52.81 ಲಕ್ಷ ಮೊತ್ತದ ಅಪೂರ್ಣ ದಾಖಲೆ ನೀಡಿದ್ದ ಪಿಡಿಒ ಶಿವರಾಜ ಅವರನ್ನು ಅಮಾನತು ಮಾಡಿ ರಾಯಚೂರು ಜಿಲ್ಲಾ ಪಂಚಾಯಿತಿ ಸಿಇಒ ಪಾಂಡ್ವೇ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
Follow Us