AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯದಲ್ಲಿ ರಾಯರ ಆರಾಧನೆಯ ಸಪ್ತರಾತ್ರೋತ್ಸವ ಶುರು, ಮಠದಲ್ಲಿ ಮನೆಮಾಡಿದ ಸಂಭ್ರಮ

Mantralaya Raghavendra Swamy Aradhana Mahotsava: ಭಕ್ತರ ಆರಾಧ್ಯ ದೈವ ಮಂತ್ರಾಲಯದ ರಾಯರ ಸನ್ನಿಧಿ ಮಧುವನಗಿತ್ತಿಯಂತೆ ಶೃಂಗಾರಗೊಂಡಿದೆ‌‌. ಕಲಿಯುಗದ ಕಾಮಧೇನುವಾಗಿರೊ ರಾಯರ ಆರಾಧನಾ ಮಹೋತ್ಸವ ಶುರುವಾಗಿದೆ. ಧ್ವಜಾರೋಹಣ ಮಾಡುವ ಮೂಲಕ ಶ್ರೀಗಳು 352ನೇ ರಾಯರ ಮಹೋತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಹಾಗಾದ್ರೆ, ಏಳು ದಿನಗಳ ಕಾಲ ರಾಯರ ಸನ್ನಿಧಿಯಲ್ಲಿ ಏನೆಲ್ಲಾ ಕಾರ್ಯಕ್ರಮಗಳ ನಡೆಯಲಿವೆ ಎನ್ನುವ ವಿವರ ಇಲ್ಲಿದೆ.

ಮಂತ್ರಾಲಯದಲ್ಲಿ ರಾಯರ ಆರಾಧನೆಯ ಸಪ್ತರಾತ್ರೋತ್ಸವ ಶುರು, ಮಠದಲ್ಲಿ ಮನೆಮಾಡಿದ ಸಂಭ್ರಮ
ಮಂತ್ರಾಲಯದಲ್ಲಿ ರಾಯರ ಆರಾಧನೆ
ಭೀಮೇಶ್​​ ಪೂಜಾರ್
| Edited By: |

Updated on: Aug 30, 2023 | 6:45 PM

Share

ರಾಯಚೂರು, (ಆಗಸ್ಟ್ 30): ಮಂತ್ರಾಲಯದ(mantralaya)  ಶ್ರೀ ರಾಘವೇಂದ್ರ ಮಹಾಸ್ವಾಮಿಗಳ 352ನೇ ಆರಾಧನಾ ಮಹೋತ್ಸವಕ್ಕೆ (Raghavendra Swamy Aradhana Mahotsava) ಚಾಲನೆ ಸಿಕ್ಕಿದೆ. ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಮೊದಲು ಅಶ್ವ ಪೂಜೆ, ಗೋ ಪೂಜೆ,ಲಕ್ಷ್ಮೀ ಪೂಜೆ ನೆರವೇರಿಸಿದ್ರು. ನಂತರ ಶ್ರೀಗಳು ಧ್ವಜಾರೋಹಣ ನೇರವೇರಿಸುವ ಮೂಲಕ ರಾಯರ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಿದ್ದು, ಇಂದಿನಿಂದ ಮಂತ್ರಾಲಯ ರಾಯರ ಮಠದಲ್ಲಿ ಏಳು ದಿನಗಳ ಕಾಲ ನಡೆಯಲಿರುವ ರಾಯರ ಆರಾಧನೆಯ ಸಪ್ತರಾತ್ರೋತ್ಸವ ಕೂಡ ಇಂದಿನಿಂದ ಶುರುವಾಗಿದ್ದು, ಮಠದಲ್ಲಿ ಸಂಭ್ರಮ ಮನೆಮಾಡಿದೆ.

ಏನೆಲ್ಲಾ ಕಾರ್ಯಕ್ರಮಗಳ ನಡೆಯಲಿವೆ?

ಸಪ್ತರಾತ್ರೋತ್ಸವದ ಪೈಕಿ ಆಗಸ್ಟ್ 31ರಂದು ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆಯ ಮೊದಲ ದಿನ. ಅಂದು ರಾಯರ ಉತ್ಸವ ಮೂರ್ತಿಯ ರಜತ ಸಿಂಹ ವಾಹನೋತ್ಸವ ಜರುಗಲಿದೆ. ಸೆಪ್ಟೆಂಬರ್1 ಮಧ್ಯರಾಧನೆ ನಡರಯಲಿದೆ. ಅಂದು ತಿರುಪತಿಯ ವೆಂಕಟೇಶ ದೇವರ ಶೇಷವಸ್ತ್ರ ಸಮರ್ಪಣೆ ನಡೆಯಲಿದೆ. ನಂತರ ರಾಯರ ಮೂಲ ಬೃಂದಾವನಕ್ಕೆ ಮಹಾಪಂಚಾಮೃತ ಅಭಿಷೇಕ,ಪ್ರಾಕಾರದಲ್ಲಿ ಸ್ವರ್ಣ ರಥೋತ್ಸವ ನಡೆಯಲಿದೆ. ಸೆಪ್ಟೆಂಬರ್2 ಕ್ಕೆ ಉತ್ತರಾಧನೆ ಜರುಗಲಿದೆ..ಆ ದಿನದಂದು ರಾಯರ ವಸಂತೋತ್ಸವ ಹಾಗೂ ಮಹಾ ರಥೋತ್ಸವ ಜರುಗಲಿದೆ.

ವಸಂತೋತ್ಸವದ ದಿನ ಮೊದಲು ರಾಯರ ಬೃಂದಾವನಕ್ಕೆ ಬಣ್ಣಗಳನ್ನ ಅರ್ಪಿಸುತ್ತಾರೆ. ಬಳಿಕ ಸ್ವಾಮಿಗಳು ಒಬ್ಬರಿಗೊಬ್ಬರ ಬಣ್ಣಗಳನ್ನ ಎರಚಿ ಸಂಭ್ರಮಿಸುತ್ತಾರೆ. ನಂತರ ಭಕ್ತರಿಗೂ ಆ ಬಣ್ಣಗಳನ್ನ ಎರಚಿ ತಮ್ಮ ಧಾರ್ಮಿಕ ವಿಧಿವಿಧಾನಗಳಂತೆ ಆಚರಣೆ ನಡೆಸಲಾಗುತ್ತೆ. ಅದೇ ದಿನ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುದೇಂದ್ರ ತೀರ್ಥರು ಹೆಲಿಕಾಫ್ಟರ್​ ಮೂಲಕ ಮೇಲಿನಿಂದ ರಥೋತ್ಸವಕ್ಕೆ ಪುಷ್ಪ ನಮನ ಸಲ್ಲಿಸಲಿದ್ದಾರೆ.

ರಾಯರ ಆರಾಧನಾ ಮಹೋತ್ಸವ ಹಿನ್ನೆಲೆ ದೇಶದ ವಿವಿಧ ಭಾಗಗಳಿಂದ ಸಹಸ್ರಾರು ಭಕ್ತರ ದಂಡುಂತ್ರಾಲಯದತ್ತ ಆಗಮಿಸುತ್ತಿದೆ. ಸಕಲ ಸಿದ್ಧಿಗಾಗಿ ಅಪಾರ ಭಕ್ತರು ರಾಯರ ಸನ್ನಿಧಿಗೆ ಆಗಮಿಸುವ ಸಾಧ್ಯತೆ ಇದ್ದು, ಭಕ್ತರಿಗೆ ವಸತಿ ಜೊತೆ ಮೂಲಭೂತ ಸೌಕರ್ಯವನ್ನ ಮಂತ್ರಾಲಯದ ರಾಯರ ಆಡಳಿತ ಮಂಡಳಿ ನೀಡಿ ಸತ್ಕರಿಸುತ್ತಿದೆ. ಕೊರೋನಾದಿಂದಾಗಿ ಎರಡು ವರ್ಷ ರಾಯರ ಆರಾಧನೆಯನ್ನು ಮಿಸ್ ಮಾಡ್ಕೊಂಡಿದ್ದ ಭಕ್ತರು ಈ ಬಾರೀ ರಾಯರ ಸಪ್ತರಾತ್ರೋತ್ಸವ ಕಣ್ತುಂಬಿಕೊಳ್ಳುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ