AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯದಲ್ಲಿ ರಾಯರ ಆರಾಧನೆಯ ಸಪ್ತರಾತ್ರೋತ್ಸವ ಶುರು, ಮಠದಲ್ಲಿ ಮನೆಮಾಡಿದ ಸಂಭ್ರಮ

Mantralaya Raghavendra Swamy Aradhana Mahotsava: ಭಕ್ತರ ಆರಾಧ್ಯ ದೈವ ಮಂತ್ರಾಲಯದ ರಾಯರ ಸನ್ನಿಧಿ ಮಧುವನಗಿತ್ತಿಯಂತೆ ಶೃಂಗಾರಗೊಂಡಿದೆ‌‌. ಕಲಿಯುಗದ ಕಾಮಧೇನುವಾಗಿರೊ ರಾಯರ ಆರಾಧನಾ ಮಹೋತ್ಸವ ಶುರುವಾಗಿದೆ. ಧ್ವಜಾರೋಹಣ ಮಾಡುವ ಮೂಲಕ ಶ್ರೀಗಳು 352ನೇ ರಾಯರ ಮಹೋತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಹಾಗಾದ್ರೆ, ಏಳು ದಿನಗಳ ಕಾಲ ರಾಯರ ಸನ್ನಿಧಿಯಲ್ಲಿ ಏನೆಲ್ಲಾ ಕಾರ್ಯಕ್ರಮಗಳ ನಡೆಯಲಿವೆ ಎನ್ನುವ ವಿವರ ಇಲ್ಲಿದೆ.

ಮಂತ್ರಾಲಯದಲ್ಲಿ ರಾಯರ ಆರಾಧನೆಯ ಸಪ್ತರಾತ್ರೋತ್ಸವ ಶುರು, ಮಠದಲ್ಲಿ ಮನೆಮಾಡಿದ ಸಂಭ್ರಮ
ಮಂತ್ರಾಲಯದಲ್ಲಿ ರಾಯರ ಆರಾಧನೆ
ಭೀಮೇಶ್​​ ಪೂಜಾರ್
| Updated By: ರಮೇಶ್ ಬಿ. ಜವಳಗೇರಾ|

Updated on: Aug 30, 2023 | 6:45 PM

Share

ರಾಯಚೂರು, (ಆಗಸ್ಟ್ 30): ಮಂತ್ರಾಲಯದ(mantralaya)  ಶ್ರೀ ರಾಘವೇಂದ್ರ ಮಹಾಸ್ವಾಮಿಗಳ 352ನೇ ಆರಾಧನಾ ಮಹೋತ್ಸವಕ್ಕೆ (Raghavendra Swamy Aradhana Mahotsava) ಚಾಲನೆ ಸಿಕ್ಕಿದೆ. ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಮೊದಲು ಅಶ್ವ ಪೂಜೆ, ಗೋ ಪೂಜೆ,ಲಕ್ಷ್ಮೀ ಪೂಜೆ ನೆರವೇರಿಸಿದ್ರು. ನಂತರ ಶ್ರೀಗಳು ಧ್ವಜಾರೋಹಣ ನೇರವೇರಿಸುವ ಮೂಲಕ ರಾಯರ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಿದ್ದು, ಇಂದಿನಿಂದ ಮಂತ್ರಾಲಯ ರಾಯರ ಮಠದಲ್ಲಿ ಏಳು ದಿನಗಳ ಕಾಲ ನಡೆಯಲಿರುವ ರಾಯರ ಆರಾಧನೆಯ ಸಪ್ತರಾತ್ರೋತ್ಸವ ಕೂಡ ಇಂದಿನಿಂದ ಶುರುವಾಗಿದ್ದು, ಮಠದಲ್ಲಿ ಸಂಭ್ರಮ ಮನೆಮಾಡಿದೆ.

ಏನೆಲ್ಲಾ ಕಾರ್ಯಕ್ರಮಗಳ ನಡೆಯಲಿವೆ?

ಸಪ್ತರಾತ್ರೋತ್ಸವದ ಪೈಕಿ ಆಗಸ್ಟ್ 31ರಂದು ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆಯ ಮೊದಲ ದಿನ. ಅಂದು ರಾಯರ ಉತ್ಸವ ಮೂರ್ತಿಯ ರಜತ ಸಿಂಹ ವಾಹನೋತ್ಸವ ಜರುಗಲಿದೆ. ಸೆಪ್ಟೆಂಬರ್1 ಮಧ್ಯರಾಧನೆ ನಡರಯಲಿದೆ. ಅಂದು ತಿರುಪತಿಯ ವೆಂಕಟೇಶ ದೇವರ ಶೇಷವಸ್ತ್ರ ಸಮರ್ಪಣೆ ನಡೆಯಲಿದೆ. ನಂತರ ರಾಯರ ಮೂಲ ಬೃಂದಾವನಕ್ಕೆ ಮಹಾಪಂಚಾಮೃತ ಅಭಿಷೇಕ,ಪ್ರಾಕಾರದಲ್ಲಿ ಸ್ವರ್ಣ ರಥೋತ್ಸವ ನಡೆಯಲಿದೆ. ಸೆಪ್ಟೆಂಬರ್2 ಕ್ಕೆ ಉತ್ತರಾಧನೆ ಜರುಗಲಿದೆ..ಆ ದಿನದಂದು ರಾಯರ ವಸಂತೋತ್ಸವ ಹಾಗೂ ಮಹಾ ರಥೋತ್ಸವ ಜರುಗಲಿದೆ.

ವಸಂತೋತ್ಸವದ ದಿನ ಮೊದಲು ರಾಯರ ಬೃಂದಾವನಕ್ಕೆ ಬಣ್ಣಗಳನ್ನ ಅರ್ಪಿಸುತ್ತಾರೆ. ಬಳಿಕ ಸ್ವಾಮಿಗಳು ಒಬ್ಬರಿಗೊಬ್ಬರ ಬಣ್ಣಗಳನ್ನ ಎರಚಿ ಸಂಭ್ರಮಿಸುತ್ತಾರೆ. ನಂತರ ಭಕ್ತರಿಗೂ ಆ ಬಣ್ಣಗಳನ್ನ ಎರಚಿ ತಮ್ಮ ಧಾರ್ಮಿಕ ವಿಧಿವಿಧಾನಗಳಂತೆ ಆಚರಣೆ ನಡೆಸಲಾಗುತ್ತೆ. ಅದೇ ದಿನ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುದೇಂದ್ರ ತೀರ್ಥರು ಹೆಲಿಕಾಫ್ಟರ್​ ಮೂಲಕ ಮೇಲಿನಿಂದ ರಥೋತ್ಸವಕ್ಕೆ ಪುಷ್ಪ ನಮನ ಸಲ್ಲಿಸಲಿದ್ದಾರೆ.

ರಾಯರ ಆರಾಧನಾ ಮಹೋತ್ಸವ ಹಿನ್ನೆಲೆ ದೇಶದ ವಿವಿಧ ಭಾಗಗಳಿಂದ ಸಹಸ್ರಾರು ಭಕ್ತರ ದಂಡುಂತ್ರಾಲಯದತ್ತ ಆಗಮಿಸುತ್ತಿದೆ. ಸಕಲ ಸಿದ್ಧಿಗಾಗಿ ಅಪಾರ ಭಕ್ತರು ರಾಯರ ಸನ್ನಿಧಿಗೆ ಆಗಮಿಸುವ ಸಾಧ್ಯತೆ ಇದ್ದು, ಭಕ್ತರಿಗೆ ವಸತಿ ಜೊತೆ ಮೂಲಭೂತ ಸೌಕರ್ಯವನ್ನ ಮಂತ್ರಾಲಯದ ರಾಯರ ಆಡಳಿತ ಮಂಡಳಿ ನೀಡಿ ಸತ್ಕರಿಸುತ್ತಿದೆ. ಕೊರೋನಾದಿಂದಾಗಿ ಎರಡು ವರ್ಷ ರಾಯರ ಆರಾಧನೆಯನ್ನು ಮಿಸ್ ಮಾಡ್ಕೊಂಡಿದ್ದ ಭಕ್ತರು ಈ ಬಾರೀ ರಾಯರ ಸಪ್ತರಾತ್ರೋತ್ಸವ ಕಣ್ತುಂಬಿಕೊಳ್ಳುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!