AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಮಂತ್ರಾಲಯದಲ್ಲಿ 36 ಅಡಿ ಎತ್ತರದ ಶ್ರೀರಾಮನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆ

ರಾಯಚೂರು ಮೂಲಕ ಮಂತ್ರಾಲಯಕ್ಕೆ ಮಾರ್ಗ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂತ್ರಾಲಯ ಪ್ರವೇಶದ ಮುಖ್ಯ ದ್ವಾರದ ಬಳಿ ಇಂದು ಶ್ರೀ ಅಭಯ ರಾಮನ 36 ಅಡಿ ಎತ್ತರದ ಏಕಶಿಲಾ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಅಭಯ ರಾಮನ ವಿಗ್ರಹದ ಎದುರೇ ಅಭಯಾಂಜನೇಯ ಸ್ವಾಮಿಯ 32 ಅಡಿಯ ಏಕಶಿಲಾ ವಿಗ್ರಹವಿದೆ. ಇದರ ಎದುರಿಗಿನ ಸುಮಾರು ಆರು ಎಕರೆ ಪ್ರದೇಶದಲ್ಲಿ ಶ್ರೀಅಭಯ ರಾಮನ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ.

ರಾಯಚೂರು: ಮಂತ್ರಾಲಯದಲ್ಲಿ 36 ಅಡಿ ಎತ್ತರದ ಶ್ರೀರಾಮನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆ
ರಾಯಚೂರಿನ ಮಂತ್ರಾಲಯದಲ್ಲಿ 32 ಅಡಿ ಎತ್ತರದ ಅಭಯಾಂಜನೇಯ ಸ್ವಾಮಿಯ ಪ್ರತಿಮೆ ಎದುರು 36 ಅಡಿ ಎತ್ತರದ ಶ್ರೀ ಅಭಯ ರಾಮನ ಪ್ರತಿಮೆ ಪ್ರತಿಷ್ಠಾಪನೆ
ಭೀಮೇಶ್​​ ಪೂಜಾರ್
| Edited By: |

Updated on: Jan 20, 2024 | 4:15 PM

Share

ರಾಯಚೂರು, ಜ.20: ಮಂತ್ರಾಲಯ (Mantralaya) ಪ್ರವೇಶದ ಮುಖ್ಯ ದ್ವಾರದ ಬಳಿ ಇಂದು ಶ್ರೀ ಅಭಯ ರಾಮನ (Sri Abhaya Ram) 36 ಅಡಿ ಎತ್ತರದ ಏಕಶಿಲಾ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಅಭಯ ರಾಮನ ವಿಗ್ರಹದ ಎದುರೇ ಅಭಯಾಂಜನೇಯ ಸ್ವಾಮಿಯ 32 ಅಡಿಯ ಏಕಶಿಲಾ ವಿಗ್ರಹವಿದೆ. ಇದರ ಎದುರಿಗಿನ ಸುಮಾರು ಆರು ಎಕರೆ ಪ್ರದೇಶದಲ್ಲಿ ಶ್ರೀಅಭಯ ರಾಮನ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ.

2021ರ ಮಾರ್ಚ್​ ತಿಂಗಳಲ್ಲಿ ಶ್ರೀ ಅಭಯ ರಾಮನ ವಿಗ್ರಹ ಕೆತ್ತನೆ ಆರಂಭವಾಗಿತ್ತು. ವಿಗ್ರಹ ಕೆತ್ತನ ಕಾರ್ಯದ ವೇಳೆಯೇ ಆಯೋಧ್ಯೆಯಲ್ಲಿ ಶ್ರೀರಾಮ ದೇವಸ್ಥಾನ ಉದ್ಘಾಟನೆ ವೇಳೆ ಈ ರಾಮನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತದೆ ಅಂತ ಮಂತ್ರಾಲಯ ಪೀಠಾಧಿಪತಿ ಶ್ರೀ ಡಾ.ಸುಬುಧೇಂದ್ರ ತೀರ್ಥರು ಹೇಳಿದ್ದರು. ಅದರಂತೆ ಮಂತ್ರಾಲಯದ ಅಭಯರಾಮನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆಗೊಂಡಿದೆ.

ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಪ್ರತಿಷ್ಠಾಪನೆ

ಇಂದು ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಅಭಯರಾಮನ ವಿಗ್ರಹ ಪ್ರತಿಷ್ಠಾಪನೆ ನಡೆಯಿತು. 36 ಅಡಿ ಎತ್ತರದ ಭವ್ಯವಾದ ಶ್ರೀ ಅಭಯ ರಾಮ ಮೂರ್ತಿಯ ಕೆತ್ತನೆ ಪ್ರಕ್ರಿಯೆ ವರ್ಷಗಳ ಬಳಿಕ ಪೂರ್ಣಗೊಂಡಿದೆ. ಹೀಗಾಗಿ ಮೇರುಕೃತಿಯನ್ನು ಶ್ರೀ ಕ್ಷೇತ್ರ ಮಂತ್ರಾಲಯದಲ್ಲಿ ಹೋರಭಾಗದ ಪೀಠದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಈ ಮಹತ್ವದ ಸಂದರ್ಭದಲ್ಲಿ ಸ್ವಾಮೀಜಿ ಅವರು ಪೀಠದ ಮೇಲೆ ವಿಗ್ರಹವನ್ನು ಪ್ರತಿಷ್ಠಾಪಿಸಿದರು. ಇದಕ್ಕೂ ಮೊದಲು ಶ್ರೀಗಳು ಆಧ್ಯಾತ್ಮಿಕ ಮಹತ್ವದ ಕೆಲವು ಆಚರಣೆಗಳನ್ನು ನಡೆಸಿ ನಂತರ ಪ್ರತಿಷ್ಠಾಪನೆ ಮಾಡಿದರು.

ಇದನ್ನೂ ಓದಿ: ಏಕಾಶಿಲಾ‌ ಹನುಮ.. ಅದೂ ಸಹ ಶಿಲ್ಪಿ ಅರುಣ್ ಯೋಗಿರಾಜ್ ಅವರದ್ದೇ ಕೆತ್ತನೆ, ಇಲ್ಲಿದೆ ನೋಡಿ

ಕುಪ್ಪಂ ಮೂಲದ ಶಿಲ್ಪಿಗಳಿಂದ ಅಭಯ ರಾಮನ ವಿಗ್ರಹ ಕೆತ್ತನೆ

ಶ್ರೀ ಅಭಯ ರಾಮನ 36 ಅಡಿ ಎತ್ತರದ ಏಕಶಿಲಾ ಮೂರ್ತಿ ಕೆತ್ತನೆ ಕಾರ್ಯದ ಹಿಂದೆ 10 ಜನ ಶಿಲ್ಪಿಗಳ ತಂಡದ ಶ್ರಮವಿದೆ. ಆಂಧ್ರಪ್ರದೇಶದ ಕುಪ್ಪಂನ 10 ಮಂದಿ ಶಿಲ್ಪಿಗಳ ತಂಡ ಶ್ರೀರಾಮನ ಏಕಶಿಲಾ ವಿಗ್ರಹವನ್ನು ಕೆತ್ತನೆ ಮಾಡಿದೆ.

108 ಅಡಿ ಎತ್ತರದ ಪಂಚಲೋಹದ ರಾಮನ ಪ್ರತಿಮೆ ಸ್ಥಾಪನೆ

ಮಂತ್ರಾಲಯ ಹೊರಭಾಗದ ಯಮಿಗನೂರು ರಸ್ತೆಯ ಬಳಿ ಜುಲೈ 23 ರಂದು ಆಂಧ್ರಪ್ರದೇಶದ ಜೈ ಶ್ರೀ ರಾಮ್‌ ಫೌಂಡೇಶನ್‌ ವತಿಯಿಂದ 108 ಅಡಿ ಎತ್ತರದ ಬೃಹತ್‌ ಪಂಚಲೋಹದ ರಾಮನ ಮೂರ್ತಿ ಸ್ಥಾಪನೆಗೆ ಭೂಮಿಪೂಜೆ ಸಲ್ಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ವರ್ಚುವಲ್ ಮೂಲಕ ಈ ಪವಿತ್ರ ಕಾರ್ಯಕ್ಕೆ ಶಂಕು ಸ್ಥಾಪನೆ ನೆರವೇರಿಸಿದ್ದರು. ಮಂತ್ರಾಲಯ ಆಡಳಿತ ಮಂಡಳಿ ಶೀಘ್ರದಲ್ಲೇ ಈ ಕಾರ್ಯವನ್ನ ಮುಗಿಸುವ ಚಿಂತನೆಯಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ