AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲುಷಿತ ನೀರು ಕುಡಿದು 60 ಜನ ಅಸ್ವಸ್ಥ ಕೇಸ್: ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಹಣವಿಲ್ಲದೇ ಹೋಮ್ ಐಸೋಲೇಷನ್

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸರಿಯಿಲ್ಲ ಅನ್ನೋ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಮನೆಯಲ್ಲೇ ಹೋಮ್ ಐಸೋಲೇಶನ್ ಆಗಿ ಚಿಕಿತ್ಸೆ ಮಾಡಲಾಗುತ್ತಿದೆ. ಅಂದ್ರೂನ್ ಖಿಲ್ಲಾ ಏರಿಯಾದ ಬಹುತೇಕ ಅಸ್ವಸ್ಥರು ಮನೆಯಲ್ಲೇ‌ ಡ್ರಿಪ್ಸ್ ಹಾಕಿಸಿಕೊಂಡಿದ್ದಾರೆ.

ಕಲುಷಿತ ನೀರು ಕುಡಿದು 60 ಜನ ಅಸ್ವಸ್ಥ ಕೇಸ್: ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಹಣವಿಲ್ಲದೇ ಹೋಮ್ ಐಸೋಲೇಷನ್
ಕಲುಷಿತ ನೀರು
TV9 Web
| Edited By: |

Updated on: Jun 04, 2022 | 8:11 AM

Share

ರಾಯಚೂರು: ಕಲುಷಿತ ನೀರು ಕುಡಿದು 60 ಜನ ಅಸ್ವಸ್ಥ ಕೇಸ್ ಹಿನ್ನೆಲೆ ಇಬ್ಬರು ಸಾವನ್ನಪ್ಪಿದ್ದಾರೆ. ಕರೋನಾ ರೀತಿ ಆ ಏರಿಯಾದ ಜನರನ್ನ ಹೋಮ್ ಐಸೋಲೇಶನ್ ಮಾಡಲಾಗಿದೆ. ಕಲುಷಿತ ನೀರಿನಿಂದ ನಗರ ನಿವಾಸಿಗಳ ಸ್ಥಿತಿ ಭಯಾನಕವಾಗುತ್ತಿದೆ. ಕಾಲರಾ ರೀತಿ ಸಾಂಕ್ರಾಮಿಕ ರೋಗವಾಗುತ್ತಿದ್ದು, ಎಚ್ಚರ ವಹಿಸಿ ಅಂತ ಜನ ಕೇಳ್ಕೊಂಡ್ರು ಡೋಂಟ್ ಕೇರ್ ಎನ್ನಲಾಗುತ್ತಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಹಣವಿಲ್ಲದೇ ಹೋಮ್ ಐಸೋಲೇಶನ್ ಮಾಡಿದ್ದು, ಈಗಾಗಲೇ ಕಲುಷಿತ ನೀರು ಕುಡಿದು ಮಲ್ಲಮ್ಮ ಹಾಗೂ ಅಬ್ದುಲ್ ಗಫೂರ್ ಸಾವನ್ನಪ್ಪಿದ್ದಾರೆ. 60 ಕ್ಕೂ ಹೆಚ್ಚು ಜನ ಕಲುಷಿತ ನೀರಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮಾವಿನಕೆರೆ, ಸ್ಟೇಶನ್ ಸರ್ಕಲ್, ಇಂದಿರಾನಗರ, ಶಿಯಾತಲಾಬ್ ಸೇರಿ ಹಲವು ಏರಿಯಾಗಳಲ್ಲಿ ಇದೇ ಆತಂಕ ಉಂಟಾಗಿದ್ದು, ನಗರದ 7ನೇ ವಾರ್ಡ್ ಅಂದ್ರೂನ್ ಖಿಲ್ಲಾದಲ್ಲಿ ಅತೀ ಹೆಚ್ಚು ಎಫೆಕ್ಟ್ ಆಗಿದೆ.

ಇದನ್ನೂ ಓದಿ: ENG vs NZ, 1st Test: ನ್ಯೂಜಿಲೆಂಡ್​ಗೆ ಮಿಚೆಲ್-ಬ್ಲಂಡೆಲ್ ಆಸರೆ: ಇಂಗ್ಲೆಂಡ್​ಗೆ ತಿರುಗೇಟು ನೀಡುತ್ತಿರುವ ಕೇನ್ ಪಡೆ

ಇದೊಂದೇ ಏರಿಯಾದಲ್ಲಿ ಸುಮಾರು 25ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. ಬಡ ಕುಟುಂಬದ ಜನ ಖಾಸಗಿ ಆಸ್ಪತ್ರೆಗೆ ಹಣ ಕಟ್ಟಲಾಗದೇ ಕಂಗಾಲಾಗಿದ್ದಾರೆ. ಕಲುಷಿತ ನೀರಿನಿಂದ ಮೂತ್ರಪಿಂಡಕ್ಕೂ ಹಾನಿಯಾಗುತ್ತಿರುವ ಹಿನ್ನೆಲೆ ನಿತ್ಯ 20-30 ಸಾವಿರ ರೂ.ವರೆಗೆ ಆಸ್ಪತ್ರೆ ಖರ್ಚಾಗುತ್ತಿದೆ. 4 ಜನರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಡಯಾಲಿಸಿಸ್ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸರಿಯಿಲ್ಲ ಅನ್ನೋ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಮನೆಯಲ್ಲೇ ಹೋಮ್ ಐಸೋಲೇಶನ್ ಆಗಿ ಚಿಕಿತ್ಸೆ ಮಾಡಲಾಗುತ್ತಿದೆ. ಅಂದ್ರೂನ್ ಖಿಲ್ಲಾ ಏರಿಯಾದ ಬಹುತೇಕ ಅಸ್ವಸ್ಥರು ಮನೆಯಲ್ಲೇ‌ ಡ್ರಿಪ್ಸ್ ಹಾಕಿಸಿಕೊಂಡಿದ್ದಾರೆ. ಇಷ್ಟೆಲ್ಲಾ ಅನಾಹುತ ಆದ್ರೂ ನಗರಸಭೆ ಕಮಿಷನರ್ ಮಾತ್ರ ಬುದ್ಧಿ ಕಲಿತಿಲ್ಲ. ಮತ್ತೆ ಅದೇ ನೀರು ಕುದಿಸಿಕೊಂಡು ಕುಡಿಯಿರಿ ಅಂತ ಬೇಜವಾಬ್ದಾರಿತನದ ಹೇಳಿಕೆ ನೀಡುತ್ತಿದ್ದಾರೆ. ಇದೇ ವೇಳೆ, ಮೃತರಿಗೆ ಪರಿಹಾರವಿಲ್ಲ ಎಂದು ಕೂಡ ನಗರಸಭೆ ಕಮಿಷನರ್ ಹೇಳಿದ್ದು, ನನ್ನ ಕೈಯಲ್ಲೇನು ಇಲ್ಲ. ಸರ್ಕಾರದ‌ ಗಮನಕ್ಕೆ‌ ತರಲಾಗುತ್ತೆ ಅಂತ ಉದ್ಧಟತನದ ಹೇಳಿಕೆಯನ್ನ ನಗರಸಭೆ ಕಮಿಷನರ್ ಗುರುಲಿಂಗಪ್ಪ ನೀಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ