AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲುಷಿತ ನೀರು ಕುಡಿದು 60 ಜನ ಅಸ್ವಸ್ಥ ಕೇಸ್: ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಹಣವಿಲ್ಲದೇ ಹೋಮ್ ಐಸೋಲೇಷನ್

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸರಿಯಿಲ್ಲ ಅನ್ನೋ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಮನೆಯಲ್ಲೇ ಹೋಮ್ ಐಸೋಲೇಶನ್ ಆಗಿ ಚಿಕಿತ್ಸೆ ಮಾಡಲಾಗುತ್ತಿದೆ. ಅಂದ್ರೂನ್ ಖಿಲ್ಲಾ ಏರಿಯಾದ ಬಹುತೇಕ ಅಸ್ವಸ್ಥರು ಮನೆಯಲ್ಲೇ‌ ಡ್ರಿಪ್ಸ್ ಹಾಕಿಸಿಕೊಂಡಿದ್ದಾರೆ.

ಕಲುಷಿತ ನೀರು ಕುಡಿದು 60 ಜನ ಅಸ್ವಸ್ಥ ಕೇಸ್: ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಹಣವಿಲ್ಲದೇ ಹೋಮ್ ಐಸೋಲೇಷನ್
ಕಲುಷಿತ ನೀರು
TV9 Web
| Edited By: |

Updated on: Jun 04, 2022 | 8:11 AM

Share

ರಾಯಚೂರು: ಕಲುಷಿತ ನೀರು ಕುಡಿದು 60 ಜನ ಅಸ್ವಸ್ಥ ಕೇಸ್ ಹಿನ್ನೆಲೆ ಇಬ್ಬರು ಸಾವನ್ನಪ್ಪಿದ್ದಾರೆ. ಕರೋನಾ ರೀತಿ ಆ ಏರಿಯಾದ ಜನರನ್ನ ಹೋಮ್ ಐಸೋಲೇಶನ್ ಮಾಡಲಾಗಿದೆ. ಕಲುಷಿತ ನೀರಿನಿಂದ ನಗರ ನಿವಾಸಿಗಳ ಸ್ಥಿತಿ ಭಯಾನಕವಾಗುತ್ತಿದೆ. ಕಾಲರಾ ರೀತಿ ಸಾಂಕ್ರಾಮಿಕ ರೋಗವಾಗುತ್ತಿದ್ದು, ಎಚ್ಚರ ವಹಿಸಿ ಅಂತ ಜನ ಕೇಳ್ಕೊಂಡ್ರು ಡೋಂಟ್ ಕೇರ್ ಎನ್ನಲಾಗುತ್ತಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಹಣವಿಲ್ಲದೇ ಹೋಮ್ ಐಸೋಲೇಶನ್ ಮಾಡಿದ್ದು, ಈಗಾಗಲೇ ಕಲುಷಿತ ನೀರು ಕುಡಿದು ಮಲ್ಲಮ್ಮ ಹಾಗೂ ಅಬ್ದುಲ್ ಗಫೂರ್ ಸಾವನ್ನಪ್ಪಿದ್ದಾರೆ. 60 ಕ್ಕೂ ಹೆಚ್ಚು ಜನ ಕಲುಷಿತ ನೀರಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮಾವಿನಕೆರೆ, ಸ್ಟೇಶನ್ ಸರ್ಕಲ್, ಇಂದಿರಾನಗರ, ಶಿಯಾತಲಾಬ್ ಸೇರಿ ಹಲವು ಏರಿಯಾಗಳಲ್ಲಿ ಇದೇ ಆತಂಕ ಉಂಟಾಗಿದ್ದು, ನಗರದ 7ನೇ ವಾರ್ಡ್ ಅಂದ್ರೂನ್ ಖಿಲ್ಲಾದಲ್ಲಿ ಅತೀ ಹೆಚ್ಚು ಎಫೆಕ್ಟ್ ಆಗಿದೆ.

ಇದನ್ನೂ ಓದಿ: ENG vs NZ, 1st Test: ನ್ಯೂಜಿಲೆಂಡ್​ಗೆ ಮಿಚೆಲ್-ಬ್ಲಂಡೆಲ್ ಆಸರೆ: ಇಂಗ್ಲೆಂಡ್​ಗೆ ತಿರುಗೇಟು ನೀಡುತ್ತಿರುವ ಕೇನ್ ಪಡೆ

ಇದೊಂದೇ ಏರಿಯಾದಲ್ಲಿ ಸುಮಾರು 25ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. ಬಡ ಕುಟುಂಬದ ಜನ ಖಾಸಗಿ ಆಸ್ಪತ್ರೆಗೆ ಹಣ ಕಟ್ಟಲಾಗದೇ ಕಂಗಾಲಾಗಿದ್ದಾರೆ. ಕಲುಷಿತ ನೀರಿನಿಂದ ಮೂತ್ರಪಿಂಡಕ್ಕೂ ಹಾನಿಯಾಗುತ್ತಿರುವ ಹಿನ್ನೆಲೆ ನಿತ್ಯ 20-30 ಸಾವಿರ ರೂ.ವರೆಗೆ ಆಸ್ಪತ್ರೆ ಖರ್ಚಾಗುತ್ತಿದೆ. 4 ಜನರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಡಯಾಲಿಸಿಸ್ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸರಿಯಿಲ್ಲ ಅನ್ನೋ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಮನೆಯಲ್ಲೇ ಹೋಮ್ ಐಸೋಲೇಶನ್ ಆಗಿ ಚಿಕಿತ್ಸೆ ಮಾಡಲಾಗುತ್ತಿದೆ. ಅಂದ್ರೂನ್ ಖಿಲ್ಲಾ ಏರಿಯಾದ ಬಹುತೇಕ ಅಸ್ವಸ್ಥರು ಮನೆಯಲ್ಲೇ‌ ಡ್ರಿಪ್ಸ್ ಹಾಕಿಸಿಕೊಂಡಿದ್ದಾರೆ. ಇಷ್ಟೆಲ್ಲಾ ಅನಾಹುತ ಆದ್ರೂ ನಗರಸಭೆ ಕಮಿಷನರ್ ಮಾತ್ರ ಬುದ್ಧಿ ಕಲಿತಿಲ್ಲ. ಮತ್ತೆ ಅದೇ ನೀರು ಕುದಿಸಿಕೊಂಡು ಕುಡಿಯಿರಿ ಅಂತ ಬೇಜವಾಬ್ದಾರಿತನದ ಹೇಳಿಕೆ ನೀಡುತ್ತಿದ್ದಾರೆ. ಇದೇ ವೇಳೆ, ಮೃತರಿಗೆ ಪರಿಹಾರವಿಲ್ಲ ಎಂದು ಕೂಡ ನಗರಸಭೆ ಕಮಿಷನರ್ ಹೇಳಿದ್ದು, ನನ್ನ ಕೈಯಲ್ಲೇನು ಇಲ್ಲ. ಸರ್ಕಾರದ‌ ಗಮನಕ್ಕೆ‌ ತರಲಾಗುತ್ತೆ ಅಂತ ಉದ್ಧಟತನದ ಹೇಳಿಕೆಯನ್ನ ನಗರಸಭೆ ಕಮಿಷನರ್ ಗುರುಲಿಂಗಪ್ಪ ನೀಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ