AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್ ಪೇ ಮೂಲಕ ಪರಿಚಯವಾಗಿ ಲವ್ವಿ ಡವ್ವಿ: ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ

ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಪ್ರೀತಿ-ಪ್ರೇಮದ ಬಲೆಗೆ ಬಿದ್ದು ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ನಾಪತ್ತೆಯಾಗಿದ್ದ ಬಾಲಕಿಯ ಪತ್ತೆ ನಂತರ ಈ ಪ್ರಕರಣ ಬೆಳಕಿಗೆ ಬಂದಿದ್ದು, ಸಂತ್ರಸ್ತೆಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಫೋನ್ ಪೇ ಮೂಲಕ ಪರಿಚಯವಾಗಿ ಲವ್ವಿ ಡವ್ವಿ: ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ
ಬಂಧಿತ ಆರೋಪಿ
ಭೀಮೇಶ್​​ ಪೂಜಾರ್
| Edited By: |

Updated on:Nov 07, 2025 | 1:59 PM

Share

ರಾಯಚೂರು/ ಕೊಪ್ಪಳ, ನವೆಂಬರ್​ 07: ಪ್ರೀತಿ-ಪ್ರೇಮದ ಬಲೆಗೆ ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಯುವತಿಗೆ ರಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿ ಶಿವಮೂರ್ತಿ(25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಸಂತ್ರಸ್ತ ವಿದ್ಯಾರ್ಥಿನಿಯ ತಂದೆ ಚಿಕನ್​ ಶಾಪ್​ ಹೊಂದಿದ್ದು, ಇಲ್ಲಿ ಮಾಂಸ ಖರೀದಿಗೆ ಬಂದಿದ್ದ ಆರೋಪಿ ಶಿವಮೂರ್ತಿ ಫೋನ್ ಪೇ ಮೂಲಕ ಹಣ ಪಾವತಿಸಿದ್ದ. ಬಳಿಕ ಫೋನ್​ ಪೇ ಮಾಡಿರುವ ಮೊಬೈಲ್​ ಸಂಖ್ಯೆಯನ್ನ ಆತ ಸಂಪರ್ಕಿಸಿದ್ದು, ಸಂತ್ರಸ್ತೆಯ ಪರಿಚಯವಾಗಿದೆ. ಬಳಿಕ ಇಬ್ಬರ ನಡುವೆ ಪ್ರೀತಿ ಆರಂಭವಾಗಿದ್ದು, ದೈಹಿಕ ಸಂಪರ್ಕದವರೆಗೂ ಹೋಗಿದೆ. ಈ ನಡುವೆ ಅಕ್ಟೋಬರ್​ 30ರ ರಾತ್ರಿ ಸಂತ್ರಸ್ತೆ ನಾಪತ್ತೆಯಾಗಿದ್ದು, ಮನೆಯವರೆಲ್ಲ ಸೇರಿ ಹುಡುಕಿದರೂ ಆಕೆಯ ಸುಳಿವು ಸಿಕ್ಕಿರುವುದಿಲ್ಲ. ಈ ಹಿನ್ನಲೆ ಪೋಷಕರು ಮಗಳು ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದರು. ಪೊಲೀಸರು ಕೇಸ್​ ಬೆನ್ನುಹತ್ತಿದಾಗ ನಾಪತ್ತೆಯಾಗಿರೋ ಬಾಲಕಿ ಗರ್ಭಿಣಿ ಎಂಬ ವಿಷಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಅಪ್ರಾಪ್ತೆ ತಂಗಿಗೆ ಮಗು ಕರುಣಿಸಿ ಜೈಲುಪಾಲಾದ ಭೂಪ!

ಆಟೋ ಪಲ್ಟಿಯಾಗಿ ವಿದ್ಯಾರ್ಥಿನಿ ಸಾವು

Kpl Auto Accident

ಅಪಘಾತವಾದ ಆಟೋ

ಆಟೋ ಪಲ್ಟಿಯಾಗಿ ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಬಳಿ ನಡೆದಿದೆ. ಬಸಾಪಟ್ಟಣದ ನಿವಾಸಿ ಪ್ರೇಮಾ(18) ಮೃತ ವಿದ್ಯಾರ್ಥಿನಿಯಾಗಿದ್ದು, ಬಸಾಪಟ್ಟಣದಿಂದ ಗಂಗಾವತಿ ಕಾಲೇಜಿಗೆ ಪ್ರೇಮಾ ತೆರಳುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:55 pm, Fri, 7 November 25

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ