AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಜೊತೆ ಹೋಗುವಾಗ ಉಸಿರುಗಟ್ಟಿ ಮಗು ಸಾವನ್ನಪ್ಪಿದ್ದ ಪ್ರಕರಣ: ತನಿಖೆ ವೇಳೆ ಭಯಾನಕ ಸತ್ಯ ಬಯಲು

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ (Lingsugur taluk in Raichur) ಕನಸಾವಿ ಗ್ರಾಮದಲ್ಲಿ ನಡೆದಿದ್ದ ಘಟನೆ ಇದಾಗಿತ್ತು. ಮುದಗಲ್ ಪೊಲೀಸರಿಂದ ವಿಚಾರಣೆ ವೇಳೆ ಅಸಲಿ ತಂದೆ ಮಹಾಂತೇಶ್ ತನ್ನ ಕುಕೃತ್ಯದ ಬಗ್ಗೆ ಸತ್ಯ ಬಾಯ್ಬಿಟ್ಟಿದ್ದಾನೆ. ಇದೇ ಸೆಪ್ಟೆಂಬರ್ 3 ರಾತ್ರಿ ಪತ್ನಿ ಭೀಮಮ್ಮಳ ಊರು ಕನಸಾವಿಗೆ ಆರೋಪಿ ತಂದೆ ಮಹಾಂತೇಶ್ ಬಾಗಲಕೋಟೆಯಿಂದ ಬಂದಿದ್ದ.

ತಂದೆ ಜೊತೆ ಹೋಗುವಾಗ ಉಸಿರುಗಟ್ಟಿ ಮಗು ಸಾವನ್ನಪ್ಪಿದ್ದ ಪ್ರಕರಣ: ತನಿಖೆ ವೇಳೆ ಭಯಾನಕ ಸತ್ಯ ಬಯಲು
ಮಗು ಸಾವನ್ನಪ್ಪಿದ್ದ ಪ್ರಕರಣ: ತನಿಖೆ ವೇಳೆ ಭಯಾನಕ ಸತ್ಯ ಬಯಲು
ಭೀಮೇಶ್​​ ಪೂಜಾರ್
| Edited By: ಸಾಧು ಶ್ರೀನಾಥ್​|

Updated on: Sep 07, 2023 | 1:49 PM

Share

ರಾಯಚೂರು: ಜನ್ಮ ನೀಡಿದ ತಂದೆಯ ಜೊತೆ ಹೋಗುವಾಗ ಉಸಿರುಗಟ್ಟಿ (suffocation) ಮಗು ಸಾವನ್ನಪ್ಪಿದ್ದ ಪ್ರಕರಣದಲ್ಲಿ ಪೊಲೀಸರ ತನಿಖೆಯ ವೇಳೆ ಭಯಾನಕ ಸತ್ಯ ಬಯಲಾಗಿದೆ. ಮಗುವಿನ ತಂದೆ ತನ್ನ ಪತ್ನಿಯನ್ನು ಕೊಲೆಗೈಯುವ ಸ್ಕೆಚ್ ಗೆ ಹಸುಗೂಸು ಅಡ್ಡಿಪಡಿಸುತ್ತಿದ್ದ ಹಿನ್ನೆಲೆಯಲ್ಲಿ 14 ತಿಂಗಳ ತನ್ನದೇ ಮಗುವನ್ನು (Son) ತಂದೆ (father) ಕೊಲೆಗೈದು (Murder), ಕಲ್ಲುಗಳ ಸಂದಿಯಲ್ಲಿ ಹೂತಿಟ್ಟಿದ್ದ ವಿಷಯ ಬೆಳಕಿಗೆ ಬಂದಿದೆ.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ (Lingsugur taluk in Raichur) ಕನಸಾವಿ ಗ್ರಾಮದಲ್ಲಿ ನಡೆದಿದ್ದ ಘಟನೆ ಇದಾಗಿತ್ತು. ಮುದಗಲ್ ಪೊಲೀಸರಿಂದ ವಿಚಾರಣೆ ವೇಳೆ ಅಸಲಿ ತಂದೆ ಮಹಾಂತೇಶ್ ತನ್ನ ಕುಕೃತ್ಯದ ಬಗ್ಗೆ ಸತ್ಯ ಬಾಯ್ಬಿಟ್ಟಿದ್ದಾನೆ. ಇದೇ ಸೆಪ್ಟೆಂಬರ್ 3 ರಾತ್ರಿ ಪತ್ನಿ ಭೀಮಮ್ಮಳ ಊರು ಕನಸಾವಿಗೆ ಆರೋಪಿ ತಂದೆ ಮಹಾಂತೇಶ್ ಬಾಗಲಕೋಟೆಯಿಂದ ಬಂದಿದ್ದ.

Also Read: Viral Video: ಈ ಕೊಕ್ಕರೆಯಮ್ಮ ಯಾಕೆ ತನ್ನ ಮಗುವನ್ನು ಕುಕ್ಕಿ ಕುಕ್ಕಿ ಕೆಳಗೆಸೆದಳೋ?

ಈ ವೇಳೆ ಪತ್ನಿ ಜೊತೆ ಜಗಳವಾಡಿ 14 ತಿಂಗಳ ಹಸುಗೂಸು ಅಭಿನವನನ್ನು ಆರೋಪಿ ಮಹಾಂತೇಶ್ ತನ್ನ ಜೊತೆರ ಕರೆದೊಯ್ದಿದ್ದ. ಮಾರನೇ ದಿನ ಮಗುವಿನ ಸುಳಿವು ಸಿಗದೇ ಇದ್ದಾಗ ಮುದಗಲ್ ಪೊಲೀಸರಿಗೆ ದೂರು ನಿಡಲಾಗಿತ್ತು. ಬಳಿಕ ಮುದಗಲ್ ಪೊಲೀಸರು ಆರೋಪಿ ತಂದೆ ಮಹಾಂತೇಶನ ವಿಚಾರಣೆ ನಡೆಸಿದ್ದರು. ಈ ವೇಳೆ ಪತ್ನಿ ಹತ್ಯೆಗೆ ಎರಡು ಮೂರು ಬಾರಿ ಪ್ರಯತ್ನಿಸಿದ್ದೆ. ಆಗ ಆಕೆಯ ಪಕ್ಕದಲ್ಲಿ ಮಲಗಿದ್ದ 14 ತಿಂಗಳ ಮಗ ಅಡ್ಡಿಪಡಿಸುತ್ತಿದ್ದ ಎಂದು ಪತ್ನಿಯ ಕೊಲೆ ಮಾಡಲಾಗದ ಹಿನ್ನೆಲೆ ಮೊದಲು ಮಗನನ್ನು ಕೊಂದು, ನಂತರ ಪತ್ನಿಯನ್ನೂ ಕೊಲ್ಲಲು ಮುಂದಾಗಿದ್ದೆ. ಮಗುವನ್ನು ಕೊಂದು ಕನಸಾವಿ ಗ್ರಾಮದ ಹೊರಭಾಗದಲ್ಲಿ ಹೂತಿಟ್ಟಿದ್ದೆ ಎಂದು ಆರೋಪಿ ತಂದೆ ಮಹಾಂತೇಶ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ