AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಘೋರ ದುರಂತ: ದಂಪತಿಯನ್ನು ಬಲಿಪಡೆದ ಕನಸಿನ ಮನೆ!

ಪ್ರತಿಯೊಬ್ಬರು ಒಂದೊಂದು ಆಸೆಗಳು ಇರುತ್ತವೆ. ಅದರಂತೆ ಈ ದಂಪತಿಗೆ ಮನೆ ಕಟ್ಟಬೇಕಂಬ ಆಸೆ ಇತ್ತು. ಇನ್ನೇನು ಕನಸು ನನಸು ಮಾಡಿಕೊಳ್ಳಲು ಮನೆ ಕಟ್ಟಲು ಶುರು ಮಾಡಿತ್ತು. ಆದ್ರೆ, ದುರಂತ ಅಂದ್ರೆ ಕನಸಿನ ಮನೆಯೇ ದಂಪತಿಯನ್ನು ಬಲಿಪಡೆದುಕೊಂಡಿದೆ. ಪ್ರೀತಿ ಮತ್ತು ಬಾಳಿನಲ್ಲಿ ಒಂದಾಗಿದ್ದ ದಂಪತಿ ಸಾವಿನಲ್ಲೂ ಬೇರ್ಪಡದೆ, ಒಂದಾಗಿದ್ದಾರೆ.

ರಾಯಚೂರಿನಲ್ಲಿ ಘೋರ ದುರಂತ: ದಂಪತಿಯನ್ನು ಬಲಿಪಡೆದ ಕನಸಿನ ಮನೆ!
Dyavappa And Shivamma
ಭೀಮೇಶ್​​ ಪೂಜಾರ್
| Edited By: |

Updated on: Mar 09, 2026 | 8:22 PM

Share

ರಾಯಚೂರು, (ಮಾರ್ಚ್ 09): ಕನಸಿನ ಮನೆಯಲ್ಲೇ ದಂಪತಿ (Couple) ದುರಂತ ಸಾವು ಕಂಡಿರುವ ಘಟನೆ ರಾಯಚೂರಿನ (Raichur) ಲಿಂಗಸುಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ನಡೆದಿದೆ. ಹೌದು…ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ಗಂಡ ಹೆಂಡತಿ ದುರಂತ ಸಾವುಕಂಡಿದ್ದಾರೆ. ದ್ಯಾವಪ್ಪ ಸುಗೂರು(35), ಶಿವಮ್ಮ(33) ಮೃತ ದಂಪತಿ. ತಮಗೊಂದು ಸೂರು ಬೇಕೆಂದು ಈ ದಂಪತಿ ಕನಸು ಕಂಡಿದ್ದು, ಅದರಂತೆ ಮನೆ ನಿರ್ಮಿಸಲು ಹಗಲಿರುಳು ಪರಿಶ್ರಮಿಸುತ್ತಿದ್ದ ಈ ಜೋಡಿ ಮೇಲೆ ಮೆಟ್ಟಿಲು ಕುಸಿದು ಬಿದ್ದಿದೆ. ಪರಿಣಾಮ ಅವಶೇಷಗಳಡಿ ಸಿಲುಕಿ ದಂಪತಿ ಸಾವನ್ನಪ್ಪಿದೆ.

ದ್ಯಾವಪ್ಪ ಹಾಗೂ ಶಿವಮ್ಮ ದಂಪತಿ ಮನೆ ಕಟ್ಟುವ ಕನಸು ಕಂಡಿದ್ದು, ಅದರಂತೆ ಹಣ ಹೊಂದಿಸಿ ಮನೆ ನಿರ್ಮಾಣ ಮಾಡಲು ಶುರು ಮಾಡಿದ್ದರು. ಸ್ವತಃ ತಾವೇ ಮನೆ ನಿರ್ಮಿಸಿಕೊಳ್ಳುತ್ತಿದ್ದು, ಅರ್ಧ ಮನೆ ಸಹ ಕಟ್ಟಲಾಗಿತ್ತು. ಆದರೆ, ಇಂದು (ಮಾರ್ಚ್ 09) ಮನೆ ಗೋಡೆ ಪ್ಲಾಸ್ಟರಿಂಗ್ ಮಾಡುತ್ತಿದ್ದ ವೇಳೆ ದಂಪತಿ ಮೇಲೆ ಏಕಾಏಕಿ ಮೆಟ್ಟಿಲುಗಳ ಪಿಲ್ಲರ್ ಕುಸಿದು ಬಿದ್ದಿದೆ. ಪರಿಣಾಮ ಅವಶೇಷಗಳಡಿ ಸಿಲುಕಿ ದಂಪತಿ ದ್ಯಾವಪ್ಪ, ಶಿವಮ್ಮ ಕನಸಿನ ಮನೆಯಲ್ಲೇ ದುರಂತ ಅಂತ್ಯಕಂಡಿದ್ದಾರೆ.

ಇದನ್ನೂ ಓದಿ: ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು

ಮಾಹಿತಿ ತಿಳಿದು ಸ್ಥಳಕ್ಕೆ ಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ದಂಪತಿಯ ಮೃತದೇಹವನ್ನು ಲಿಂಗಸೂಗೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮದುವೆ ಮಾಡಿಕೊಂಡು ನೇರವಾಗಿ ದರ್ಶನ್ ಮನೆ ಮುಂದೆ ಬಂದ ನವ ಜೋಡಿ
ಮದುವೆ ಮಾಡಿಕೊಂಡು ನೇರವಾಗಿ ದರ್ಶನ್ ಮನೆ ಮುಂದೆ ಬಂದ ನವ ಜೋಡಿ
ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು
ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು
‘ಬಾಸ್’ ಚಿತ್ರದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ
‘ಬಾಸ್’ ಚಿತ್ರದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ
ಮೈದಾನದಲ್ಲಿ ಪತ್ನಿಗೆ ಲಿಪ್‌ಲಾಕ್ ಮಾಡಿದ ಕ್ರಿಕೆಟಿಗ
ಮೈದಾನದಲ್ಲಿ ಪತ್ನಿಗೆ ಲಿಪ್‌ಲಾಕ್ ಮಾಡಿದ ಕ್ರಿಕೆಟಿಗ
ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ
ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ
ಬೆಂಗಳೂರಿನ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ
ಬೆಂಗಳೂರಿನ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ
ಸಿಗರೇಟ್‌ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದ ಇಬ್ಬರು ಖಾಕಿ ಬಲೆಗೆ
ಸಿಗರೇಟ್‌ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದ ಇಬ್ಬರು ಖಾಕಿ ಬಲೆಗೆ
ಚಿನ್ನ ಕದ್ದ ಕ್ಯಾಬ್​​ ಚಾಲಕ ಲಾಕ್: ದರೋಡೆ ನಡೆಸಿದ ರೀತಿಯೇ ಇಂಟರೆಸ್ಟಿಂಗ್​!
ಚಿನ್ನ ಕದ್ದ ಕ್ಯಾಬ್​​ ಚಾಲಕ ಲಾಕ್: ದರೋಡೆ ನಡೆಸಿದ ರೀತಿಯೇ ಇಂಟರೆಸ್ಟಿಂಗ್​!
ತಿರುಪತಿಗೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ
ತಿರುಪತಿಗೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ
ಇರಾನ್ ಯುದ್ಧದಿಂದ ಜಗತ್ತಿಗೇ ಮಾರಕ ಕಾಯಿಲೆ ಭೀತಿ, ಭಾರತಕ್ಕೂ ಇದೆ ಆತಂಕ!
ಇರಾನ್ ಯುದ್ಧದಿಂದ ಜಗತ್ತಿಗೇ ಮಾರಕ ಕಾಯಿಲೆ ಭೀತಿ, ಭಾರತಕ್ಕೂ ಇದೆ ಆತಂಕ!