AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ ಬೆಟ್ಟಿಂಗ್‌ನಿಂದ ಹೆಚ್ಚು ಹಣ ಗಳಿಸೋ ಹುಚ್ಚು.. ಸೋತು ಯುವಕ ಸಾವಿಗೆ ಶರಣು!

ಐಪಿಎಲ್ ಬೆಟ್ಟಿಂಗ್ ದಂಧೆ ರಾಜ್ಯಾದ್ಯಂತ ಜೋರಾಗಿ ನಡೆಯುತ್ತಿದೆ. ಪೊಲೀಸರು ಎಷ್ಟೇ ಜಾಗ್ರತೆವಹಿಸಿದರೂ ಬೆಟ್ಟಿಂಗ್ ದಂಧೆ ತಡೆಯಾಲಾಗುತ್ತಿಲ್ಲ. ಹಣ ಗಳಿಸುವ ದುರಾಸೆಯಿಂದ ಐಪಿಎಲ್‌ ಬೆಟ್ಟಿಂಗ್‌ನಲ್ಲಿ ತೊಡಗಿಕೊಳ್ಳುವ ಯುವಕರು ಹಣವೆಲ್ಲ ಕಳೆದುಕೊಳ್ಳುತ್ತಿದ್ದಾರೆ. ಜೊತೆಗೆ ಮೈ ತುಂಬಾ ಸಾಲ ಮಾಡಿಕೊಂಡು ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಇಂತಹದ್ದೇ ಒಂದು ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಐಪಿಎಲ್​ ಬೆಟ್ಟಿಂಗ್‌ನಿಂದ ಹೆಚ್ಚು ಹಣ ಗಳಿಸೋ ಹುಚ್ಚು.. ಸೋತು ಯುವಕ ಸಾವಿಗೆ ಶರಣು!
ಭೀಮೇಶ್​​ ಪೂಜಾರ್
| Edited By: |

Updated on: May 19, 2024 | 11:33 AM

Share

ರಾಯಚೂರು, (ಮೇ 19): ಐಪಿಎಲ್‌ (IPL 2024) ಬೆಟ್ಟಿಂಗ್‌ನಲ್ಲಿ (IPL Betting) ಲಕ್ಷ ಲಕ್ಷ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಘಟನೆ ನಡೆದಿದೆ. ಮಸ್ಕಿ ತಾಲೂಕಿನ ಉದ್ಬಾಳ ಗ್ರಾಮದ 29 ವರ್ಷದ ಮುದಿಬಸವ ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಸಿಕ್ಕಾಪಟ್ಟೆ ಹಣ ಕಳೆದುಕೊಂಡಿದ್ದ. ಸೋತ ಹಣ ಪಾವತಿಸಲಾಗದೆ ಯುವಕ ಕಿರುಕುಳಕ್ಕೆ ಒಳಗಾಗಿದ್ದ ಎನ್ನಲಾಗಿದೆ. ಇದರಿಂದ ಮನನೊಂದು ಸಿಂಧನೂರು ನಗರದ ಸಾಯಿ ರೆಸಿಡೆನ್ಸಿ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಮುದಿಬಸವ ಐಪಿಎಲ್ ಬೆಟ್ಟಿಂಗ್‌ಗಾಗಿ ಸಾಕಷ್ಟು ಸಾಲವನ್ನು ಮಾಡಿಕೊಂಡಿದ್ದ. ಆದರೆ ಬೆಟ್ಟಿಂಗ್‌ ಕಟ್ಟಿದ ಎಲ್ಲ ಮ್ಯಾಚ್‌ಗಳು ಸೋತಿದ್ದವು. ಸಾಲದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ. ಸಾಲಗಾರರ ಕಾಟಕ್ಕೆ ಬೇಸತ್ತ ಮುದಿಬಸವ ಲಾಡ್ಜ್‌ ರೂಮಿನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೂಮಿನ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡು ಲಾಡ್ಜ್‌ ಸಿಬ್ಬಂದಿ ಒಳಹೊಕ್ಕಿ ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಸಿಂಧನೂರು ನಗರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಸಿಂಧನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

.ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ