AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಕಾಂಗ್ರೆಸ್​​ ಮಾಜಿ ಶಾಸಕ ಅಳಿಯನ ಕಾರು ಡಿಕ್ಕಿ, ಸ್ಥಳದಲ್ಲೇ ಕುರಿಗಾಹಿ ದುರ್ಮರಣ

ಕಾಂಗ್ರೆಸ್​ ಮಾಜಿ ಶಾಸಕರೊಬ್ಬರ ಅಳಿಯ ಕಾರು ಕುರಿಗಾಹಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸುದ್ದಿ ಜೊತೆ ಮೈಸೂರು ಹಾಗು ಬೆಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದ ಸುದ್ದಿ ವಿವರ ಇಲ್ಲಿದೆ ನೋಡಿ.

ರಾಯಚೂರು: ಕಾಂಗ್ರೆಸ್​​ ಮಾಜಿ ಶಾಸಕ ಅಳಿಯನ ಕಾರು ಡಿಕ್ಕಿ, ಸ್ಥಳದಲ್ಲೇ ಕುರಿಗಾಹಿ ದುರ್ಮರಣ
ಬಸವರಾಜ್​(20) ಮೃತ ಕುರಿಗಾಹಿ.
ಭೀಮೇಶ್​​ ಪೂಜಾರ್
| Edited By: |

Updated on: Aug 27, 2023 | 6:49 PM

Share

ರಾಯಚೂರು, (ಆಗಸ್ಟ್ 27): ಕುಷ್ಟಗಿ ಕ್ಷೇತ್ರದ ಕಾಂಗ್ರೆಸ್​​(Congress) ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ಅಳಿಯನ ಕಾರು ಡಿಕ್ಕಿ ಹೊಡೆದ ಪರಿಣಾಮ ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಾಯಚೂರು(Raichur) ಜಿಲ್ಲೆ ಲಿಂಗಸುಗೂರು ತಾಲೂಕಿನ ಪಿಕಳಿಹಾಳ ಬಳಿ ಘಟನೆ ಸಂಭವಿಸಿದೆ. ಬಸವರಾಜ್​(20) ಮೃತ ಕುರಿಗಾಹಿ. ಅಮರೇಗೌಡ ಬಯ್ಯಾಪುರ ಅವರ ಅಳಿಯ ಶರಣಬಸವ ವ್ಯಾಕರನಾಳಗೆ ಸೇರಿದ ಎರ್ಟಿಗಾ ಕಾರು ಮುದ್ಗಲ್​ನಿಂದ ತಾವರಗೇರಾ ಕಡೆ ವೇಗವಾಗಿ ಹೊರಟ್ಟಿತ್ತು. ಆ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕುರಿಗಾಹಿ ಬಸವರಾಜ್​ಗೆ ಡಿಕ್ಕಿ ಹೊಡೆದಿದ್ದು, ಆತ ಸ್ಥಳದ್ಲಲೇ ಅಸುನೀಗಿದ್ದಾನೆ.

ಮೈಸೂರಿನಲ್ಲಿ ಕಾರು ಡಿಕ್ಕಿಯಾಗಿ ಪೌರ ಕಾರ್ಮಿಕನಿಗೆ ಗಂಭೀರ ಗಾಯ

ಮೈಸೂರು: ಮೈಸೂರಿನಲ್ಲಿ ಕಾರು ಡಿಕ್ಕಿಯಾಗಿ ಪೌರ ಕಾರ್ಮಿಕನಿಗೆ ಗಂಭೀರ ಗಾಯವಾಗಿರುವ ಘಟನೆ ಮೈಸೂರು ನಗರದ ದೇವರಾಜ ಅರಸು ರಸ್ತೆಯಲ್ಲಿ ನಡೆದದೆ. ಗಾಯಾಳು ಪೌರ ಕಾರ್ಮಿಕ ಮಹದೇವ ಅವರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅತಿ ವೇಗ ಮತ್ತು ಚಾಲಕ ಮೊಬೈಲ್ ಬಳಕೆ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಘಟನೆ ನಡೆದ ಬಳಿಕ ದೇವರಾಜ ಸಂಚಾರ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಬೈಕ್​ಗೆ ಡಿಕ್ಕಿ ಹೊಡೆದ ಕಾರು

ಬೆಂಗಳೂರು: ಬೈಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ದಂಪತಿಗೆ ಗಾಯಗಳಾಗಿವೆ. ನಿನ್ನೆ(ಆಗಸ್ಟ್ 26) ಸಂಜೆ ನಾಲ್ಕು ಗಂಟೆ ಸುಮಾರಿಗೆ ಚಿಕ್ಕಜಾಲದಿಂದ ಏರ್ಪೋರ್ಟ್ ರಸ್ತೆ ಸಂಪರ್ಕಿಸುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ದೃಶ್ಯ ಮತ್ತೊಂದು ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್​ನಲ್ಲಿ ದಂಪತಿ ತನ್ನಿಬ್ಬರ ಇಬ್ಬರು ಮಕ್ಕಳುನ್ನು ಕೂರಿಡಿಕೊಂಡು ಹೊರಟ್ಟಿತ್ತು. ಆದ್ರೆ, ಸವಾರ ಬೈಕ್​ ಅನ್ನು ರಸ್ತೆ ಮಧ್ಯದ ಟ್ರ್ಯಾಕ್ ನಿಂದ ಬಲಗಡೆಗೆ ತೆಗೆದುಕೊಂಡಿದ್ದಾನೆ. ಈ ವೇಳೆ ವೇಗವಾಗಿ ತೆರಳುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್​ನಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳು ರಸ್ತೆಗೆ ಬಿದ್ದಿದ್ದಾರೆ. ಕೂಡಲೇ ಇತರೆ ಸವಾರರು ರಸ್ತೆ ಮೇಲೆ ಬಿದ್ದ ಮಕ್ಕಳನ್ನ ರಕ್ಷಿಸಿದ್ದಾರೆ. ಅದೃಷ್ಟವಶಾತ್ ಮಕ್ಕಳು ಹಾಗೂ ಪೋಷಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ