Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur News: ಕಾರು-ಲಾರಿ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದುರ್ಮರಣ, ಚಾಲಕ ಪರಾರಿ

ಮಧ್ಯಪ್ರದೇಶ ಮೂಲದ ದಂಪತಿ, ಇಬ್ಬರು ಮಕ್ಕಳು ಮೃತಪಟ್ಟಿದ್ದು, ಅಪಘಾತ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಬಳಗಾನೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು. 

Raichur News: ಕಾರು-ಲಾರಿ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದುರ್ಮರಣ, ಚಾಲಕ ಪರಾರಿ
ಕಾರು-ಲಾರಿ ಅಪಘಾತದಲ್ಲಿ ನುಜ್ಜು ಗುಜ್ಜಾದ ಕಾರು.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jul 18, 2022 | 11:48 AM

ರಾಯಚೂರು: ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ (Accident) ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬಾಲಯ್ಯಕ್ಯಾಂಪ್​ ಬಳಿ ನಡೆದಿದೆ. ಮಧ್ಯಪ್ರದೇಶ ಮೂಲದ ದಂಪತಿ, ಇಬ್ಬರು ಮಕ್ಕಳು ಮೃತಪಟ್ಟಿದ್ದು, ಅಪಘಾತ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಬಳಗಾನೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಇದನ್ನೂ ಓದಿ: ಜ್ಯುವೆಲರಿ ಶಾಪ್​​ನಲ್ಲಿ ದಿನಕ್ಕೊಂದರಂತೆ ಆಭರಣ ಮಾಯ: ಕಳ್ಳ ಸಿಕ್ಕಿದ್ರೂ ಪೊಲೀಸರಿಗೆ ತಪ್ಪಲಿಲ್ಲ ಪೀಕಲಾಟ

ಪ್ರೀತಿ ವಿಚಾರಕ್ಕೆ ಯುವಕನ ಹತ್ಯೆ ಪ್ರಕರಣ: ಇಬ್ಬರ ಬಂಧನ

ಬೆಂಗಳೂರು: ಪ್ರೀತಿ ವಿಚಾರಕ್ಕೆ ಯುವಕನ ಹತ್ಯೆ ಪ್ರಕರಣ ಹಿನ್ನೆಲೆ ಬೈಯ್ಯಪ್ಪನಹಳ್ಳಿ ಠಾಣಾ ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ. ನಾಗೇಂದ್ರ ಹಾಗೂ ರಂಗಸ್ವಾಮಿ ಬಂಧಿತ ಆರೋಪಿಗಳು. ಸಂಬಂಧಿಕರ ಮನೆಯ ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಯುವಕ ಹತ್ಯೆಯಾಗಿದ್ದ. ಜುಲೈ 15ರ ರಾತ್ರಿ ಹಳೇ ಮದ್ರಾಸ್ ರಸ್ತೆಯ ನಿರ್ಜನ ಪ್ರದೇಶದಲ್ಲಿ ಪ್ರಜ್ವಲ್ (18) ನನ್ನ ದೊಣ್ಣೆಯಿಂದ ಹೊಡೆದು ಕೊಲೆಗೈಯ್ಯಲಾಗಿತ್ತು. ನಾಗೇಂದ್ರನ ಅಣ್ಣನ ಮಗಳನ್ನ ಪ್ರೀತಿಸುತ್ತಿದ್ದ ಪ್ರಜ್ವಲ್, ಸೋಶಿಯಲ್ ಮೀಡಿಯಾಗಳಲ್ಲಿ ಲವ್ ಯೂ ಅಂತಾ ಮೆಸೇಜ್ ಕಳಿಸುತ್ತಿದ್ದ. ವಾರ್ನಿಂಗ್ ಕೊಡಲು ಮತ್ತೊಬ್ಬ ಯುವಕನ ಮೂಲಕ ಪ್ರಜ್ವಲ್​ನನ್ನ ಕರೆಸಿದ್ದ ಆರೋಪಿಗಳು, ಪ್ರಜ್ವಲ್ ಹಾಗೂ ಆತನನ್ನ ಕರೆತಂದವ ಇಬ್ಬರಿಗೂ ಥಳಿಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಪ್ರಜ್ವಲ್ ಸಾವನ್ನಪ್ಪಿದ್ದ.

ಹಳ್ಳದಲ್ಲಿ ಕೊಚ್ಚಿಹೋಗಿದ್ದ ಮಹಿಳೆ ಮೃತ ದೇಹ ಪತ್ತೆ:

ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆಯ ಅವಾಂತರ ಮುಂದುವರೆದಿದ್ದು, ಹಳ್ಳದಲ್ಲಿ ಕೊಚ್ಚಿಹೋಗಿದ್ದ ಭವಾನಿ(52) ಮೃತದೇಹ ಪತ್ತೆಯಾಗಿದೆ. ನಿನ್ನೆ ತೋಟಕ್ಕೆ ಹೋಗುವಾಗ ಮಹಿಳೆ ಹಳ್ಳದಲ್ಲಿ ಕೊಚ್ಚಿಹೋಗಿದ್ದಳು. ಬಾಳೆಹಿತ್ತಲು ಹಳ್ಳದಲ್ಲಿ ಕೊಚ್ಚಿಹೋಗಿದ್ದ ಭವಾನಿ ಶವ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಸುಳುಗೋಡು ಬಳಿ ಘಟನೆ ನಡೆದಿತ್ತು.

ಇದನ್ನೂ ಓದಿ: ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ವಶಕ್ಕೆ ಪಡೆದ ಸಂಕೇಶ್ವರ ಅಬಕಾರಿ ಪೊಲೀಸ್​​

5 ಜನರ ಕುಖ್ಯಾತ ದರೋಡೆಕೋರರ ಬಂಧನ:

ಬೆಂಗಳೂರು: ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಬೆದರಿಸಿ ಚಿನ್ನಾಭರಣ ಎಗರಿಸುತ್ತಿದ್ದ 5ಜನರ ಕುಖ್ಯಾತ ದರೋಡೆಕೋರರ ಬಂಧನ ಮಾಡಲಾಗಿದೆ. ಮಂಜುನಾಥ್@ಕೋಳಿ ಮಂಜ, ಹರೀಶ್ ಗೌಡ, ಕುಶಾಲ್ ಕುಮಾರ್, ಮುನಿಸ್ವಾಮಿ, ಹರೀಶ್@ಹರಿ ಬಂಧಿತ ಆರೋಪಿಗಳು. ಜೂನ್ 23ರಂದು ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ಚಾಕುವಿನಿಂದ ಹಲ್ಲೆ ಮಾಡಿ ಸುನಂಧ ಅವರ ಮನೆಯಲ್ಲಿ ದರೋಡೆ ಮಾಡಿದ್ರು. ಬಂಧಿತರಿಂದ 3ಲಕ್ಷ ಬೆಲೆಬಾಳುವ ಚಿನ್ನಾಭರಣಗಳು ಹಾಗೂ ಬೆಳ್ಳಿ ಜಪ್ತಿ ಮಾಡಲಾಗಿದೆ. ಎ1 ಆರೋಪಿ ಕೋಳಿ ಮಂಜನ ವಿರುದ್ಧ ಹಲವು ಠಾಣೆಗಳಲ್ಲಿ 20ಕ್ಕೂ ಹೆಚ್ಚು ಕೇಸ್ ದಾಖಲಾಗಿವೆ. ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Published On - 11:37 am, Mon, 18 July 22

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?