AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಅಪಘಾತ; ತಂದೆಗೆ ಚಿಕಿತ್ಸೆ ಕೊಡಿಸಬೇಕಿದ್ದವ, ಹೆತ್ತ ಮಗು ನೋಡಲು ಹೋಗ್ತಿದವರು ಸೇರಿ ನಾಲ್ವರು ಸಾವು

ರಾಯಚೂರು ಜಿಲ್ಲೆಯ ಒಂದೇ ರಸ್ತೆಯಲ್ಲಿ ಅರ್ಧಗಂಟೆ ಅವಧಿಯಲ್ಲಿ ಎರಡು ಪ್ರತ್ಯೇಕ ಅಪಘಾತ ನಡೆದಿದ್ದು, ನಾಲ್ವರು ಉಸಿರುಚೆಲ್ಲಿದ್ದಾರೆ. ಅಂದುಕೊಂಡಂತೆ ಆಗಿದ್ರೆ ಅಲ್ಲೊಬ್ಬ ತಂದೆಯನ್ನ ಬೆಂಗಳೂರಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸುತ್ತಿದ್ದ. ಮತ್ತೊಬ್ಬ ಹೆತ್ತ ಹಸುಗೂಸನ್ನ ನೋಡಿ ಮನೆ ಸೇರುತ್ತಿದರು. ಆದರೆ, ವಿಧಿ ಎರಡು ಕುಟುಂಬದ ಬದುಕಲ್ಲಿ ಆಟವಾಡಿದೆ.

ಪ್ರತ್ಯೇಕ ಅಪಘಾತ; ತಂದೆಗೆ ಚಿಕಿತ್ಸೆ ಕೊಡಿಸಬೇಕಿದ್ದವ, ಹೆತ್ತ ಮಗು ನೋಡಲು ಹೋಗ್ತಿದವರು ಸೇರಿ ನಾಲ್ವರು ಸಾವು
ಅಪಘಾತದಲ್ಲಿ ಮೃತರಾದವರು
ಭೀಮೇಶ್​​ ಪೂಜಾರ್
| Edited By: |

Updated on: Feb 22, 2024 | 7:45 PM

Share

ರಾಯಚೂರು, ಫೆ.22: ಜಿಲ್ಲೆಯ ಗಡಿ ಭಾಗದ ಮಂತ್ರಾಲಯದ ಮುಖ್ಯ ರಸ್ತೆಯ ರಾಷ್ಟ್ರೀಯ ಹೆದ್ದಾರಿ 167 ರಲ್ಲೇ ಭೀಕರ ಅಪಘಾತ(Accident)ವೊಂದು ಸಂಭವಿಸಿತ್ತು. ನಿನ್ನೆ(ಫೆ.21) ರಾತ್ರಿ ಕೆಎಸ್​ಆರ್​ಟಿಸಿ ಬಸ್ ರಾಯಚೂರಿ(Raichur)ನಿಂದ ಮಂತ್ರಾಲಯಕ್ಕೆ ಹೊರಟಿತ್ತು. ನಗರದ ಹೊರಭಾಗದ ಮಿಟ್ಟಿಮಲ್ಕಾಪುರ ಬಳಿಯಲ್ಲಿ ಮೂವರು ಬೈಕ್ ಸವಾರರು ಒಂದೇ ಬೈಕ್​​ನಲ್ಲಿ ರಾಯಚೂರು ಮಾರ್ಗವಾಗಿ ಬರುತ್ತಿದ್ದರು. ಈ ವೇಳೆ ಬೈಕ್ ಹಾಗೂ ಕೆಎಸ್​ಆರ್​ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್​​ನಲ್ಲಿ ರಾಯಚೂರು ನಗರದ ನಿವಾಸಿಗಳಾದ ಪರಶುರಾಮ, ಗೋವಿಂದ ಹಾಗೂ ರಾಘವೇಂದ್ರ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಈ ಘಟನೆ ನಡೆದು ಅರ್ಧ ಗಂಟೆ ಅವಧಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿ, ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಾಣೇಶ್ ಎನ್ನುವ ಯುವಕ ಮೃತಪಟ್ಟಿದ್ದ.

ತಂದೆಗೆ ಚಿಕಿತ್ಸೆ ಕೊಡಿಸಬೇಕಿದ್ದವ ಸೇರಿದ ಮಸಣ

ಮೃತ ಪರಶುರಾಮ, ಗೋವಿಂದ ಹಾಗೂ ರಾಘವೇಂದ್ರ ಮೂವರು ಪ್ರಾಣ ಸ್ನೇಹಿತರು. ಪರಶುರಾಮ ತನ್ನ ತಂದೆ ಮಲ್ಲೇಶಪ್ಪಗೆ ಅನಾರೋಗ್ಯ ಹಿನ್ನೆಲೆ ನಿನ್ನೆ ರಾತ್ರಿ ರಾಯಚೂರಿನಿಂದ ರೈಲಿನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಬೇಕಿತ್ತು. ಪರಶುರಾಮ, ತಂದೆ ಮಲ್ಲೇಶಪ್ಪ ಹಾಗೂ ಅಣ್ಣ ಗಂಗಾಧರ್ ಮೂವರು ಹೋಗಲು ಟಿಕೆಟ್ ರಿಸರ್ವೇಶನ್ ಕೂಡ ಮಾಡಿದ್ದರು. ನಿನ್ನೆ ಅಣ್ಣ ಗಂಗಾಧರ್ ಹಾಗೂ ಕುಟುಂಬಸ್ಥರು ಜಾತ್ರೆಗೆ ಹೋಗಿ ವಾಪಸ್ ಬಂದು ಬೆಂಗಳೂರಿಗೆ ಹೋಗಲು ರೆಡಿ ಆಗಿದ್ದರು. ಆದ್ರೆ, ಪರಶುರಾಮ ಬಂದಿರಲಿಲ್ಲ. ಆಗ ಎಲ್ಲಿದ್ದಾನೆ ಎಂದು ಕಾಲ್ ಮಾಡಿದಾಗ ಆತ ಅಪಘಾತದಲ್ಲಿ ಮೃತಪಟ್ಟಿರುವ ವಿಷಯ ತಿಳಿದಿದೆ.

ಇದನ್ನೂ ಓದಿ:ಬೆಳಗಾವಿಯಲ್ಲಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನ ದುರ್ಮರಣ: ಭೀಕರತೆ ವಿವರಿಸುವ ಚಿತ್ರಗಳು

ಹೆತ್ತ ಮಗು ನೋಡಲು ಹೋಗಬೇಕಿದ್ದವರು ಸಾವು

ಇದಷ್ಟೇ ಅಲ್ಲ, ಈ ಅಪಘಾತವಾದ ಮಾರ್ಗದಲ್ಲೇ ಅರ್ಧ ಗಂಟೆ ಅವಧಿಯಲ್ಲಿಯೇ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಾಣೇಶ್ ಎನ್ನುವ ಯುವಕ ಮೃತಪಟ್ಟಿದ್ರೆ, ಆಂಜನೇಯ ಎನ್ನುವವರಿಗೆ ಗಂಭೀರ ಗಾಯವಾಗಿದೆ. ಪ್ರಾಣೇಶ್ ಪತ್ನಿ ಕಳೆದ 10 ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಳು, ಮಗು ನೋಡಲು ಬಂದಿದ್ದ ಪ್ರಾಣೇಶ್ ಹೀಗೆ ಹೆಣವಾಗಿ ಹೋಗಿದ್ದಾನೆ. ಈ ಬಗ್ಗೆ ಯರಗೇರಾ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇತ್ತ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್