ಪ್ರತ್ಯೇಕ ಅಪಘಾತ; ತಂದೆಗೆ ಚಿಕಿತ್ಸೆ ಕೊಡಿಸಬೇಕಿದ್ದವ, ಹೆತ್ತ ಮಗು ನೋಡಲು ಹೋಗ್ತಿದವರು ಸೇರಿ ನಾಲ್ವರು ಸಾವು

ರಾಯಚೂರು ಜಿಲ್ಲೆಯ ಒಂದೇ ರಸ್ತೆಯಲ್ಲಿ ಅರ್ಧಗಂಟೆ ಅವಧಿಯಲ್ಲಿ ಎರಡು ಪ್ರತ್ಯೇಕ ಅಪಘಾತ ನಡೆದಿದ್ದು, ನಾಲ್ವರು ಉಸಿರುಚೆಲ್ಲಿದ್ದಾರೆ. ಅಂದುಕೊಂಡಂತೆ ಆಗಿದ್ರೆ ಅಲ್ಲೊಬ್ಬ ತಂದೆಯನ್ನ ಬೆಂಗಳೂರಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸುತ್ತಿದ್ದ. ಮತ್ತೊಬ್ಬ ಹೆತ್ತ ಹಸುಗೂಸನ್ನ ನೋಡಿ ಮನೆ ಸೇರುತ್ತಿದರು. ಆದರೆ, ವಿಧಿ ಎರಡು ಕುಟುಂಬದ ಬದುಕಲ್ಲಿ ಆಟವಾಡಿದೆ.

ಪ್ರತ್ಯೇಕ ಅಪಘಾತ; ತಂದೆಗೆ ಚಿಕಿತ್ಸೆ ಕೊಡಿಸಬೇಕಿದ್ದವ, ಹೆತ್ತ ಮಗು ನೋಡಲು ಹೋಗ್ತಿದವರು ಸೇರಿ ನಾಲ್ವರು ಸಾವು
ಅಪಘಾತದಲ್ಲಿ ಮೃತರಾದವರು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 22, 2024 | 7:45 PM

ರಾಯಚೂರು, ಫೆ.22: ಜಿಲ್ಲೆಯ ಗಡಿ ಭಾಗದ ಮಂತ್ರಾಲಯದ ಮುಖ್ಯ ರಸ್ತೆಯ ರಾಷ್ಟ್ರೀಯ ಹೆದ್ದಾರಿ 167 ರಲ್ಲೇ ಭೀಕರ ಅಪಘಾತ(Accident)ವೊಂದು ಸಂಭವಿಸಿತ್ತು. ನಿನ್ನೆ(ಫೆ.21) ರಾತ್ರಿ ಕೆಎಸ್​ಆರ್​ಟಿಸಿ ಬಸ್ ರಾಯಚೂರಿ(Raichur)ನಿಂದ ಮಂತ್ರಾಲಯಕ್ಕೆ ಹೊರಟಿತ್ತು. ನಗರದ ಹೊರಭಾಗದ ಮಿಟ್ಟಿಮಲ್ಕಾಪುರ ಬಳಿಯಲ್ಲಿ ಮೂವರು ಬೈಕ್ ಸವಾರರು ಒಂದೇ ಬೈಕ್​​ನಲ್ಲಿ ರಾಯಚೂರು ಮಾರ್ಗವಾಗಿ ಬರುತ್ತಿದ್ದರು. ಈ ವೇಳೆ ಬೈಕ್ ಹಾಗೂ ಕೆಎಸ್​ಆರ್​ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್​​ನಲ್ಲಿ ರಾಯಚೂರು ನಗರದ ನಿವಾಸಿಗಳಾದ ಪರಶುರಾಮ, ಗೋವಿಂದ ಹಾಗೂ ರಾಘವೇಂದ್ರ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಈ ಘಟನೆ ನಡೆದು ಅರ್ಧ ಗಂಟೆ ಅವಧಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿ, ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಾಣೇಶ್ ಎನ್ನುವ ಯುವಕ ಮೃತಪಟ್ಟಿದ್ದ.

ತಂದೆಗೆ ಚಿಕಿತ್ಸೆ ಕೊಡಿಸಬೇಕಿದ್ದವ ಸೇರಿದ ಮಸಣ

ಮೃತ ಪರಶುರಾಮ, ಗೋವಿಂದ ಹಾಗೂ ರಾಘವೇಂದ್ರ ಮೂವರು ಪ್ರಾಣ ಸ್ನೇಹಿತರು. ಪರಶುರಾಮ ತನ್ನ ತಂದೆ ಮಲ್ಲೇಶಪ್ಪಗೆ ಅನಾರೋಗ್ಯ ಹಿನ್ನೆಲೆ ನಿನ್ನೆ ರಾತ್ರಿ ರಾಯಚೂರಿನಿಂದ ರೈಲಿನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಬೇಕಿತ್ತು. ಪರಶುರಾಮ, ತಂದೆ ಮಲ್ಲೇಶಪ್ಪ ಹಾಗೂ ಅಣ್ಣ ಗಂಗಾಧರ್ ಮೂವರು ಹೋಗಲು ಟಿಕೆಟ್ ರಿಸರ್ವೇಶನ್ ಕೂಡ ಮಾಡಿದ್ದರು. ನಿನ್ನೆ ಅಣ್ಣ ಗಂಗಾಧರ್ ಹಾಗೂ ಕುಟುಂಬಸ್ಥರು ಜಾತ್ರೆಗೆ ಹೋಗಿ ವಾಪಸ್ ಬಂದು ಬೆಂಗಳೂರಿಗೆ ಹೋಗಲು ರೆಡಿ ಆಗಿದ್ದರು. ಆದ್ರೆ, ಪರಶುರಾಮ ಬಂದಿರಲಿಲ್ಲ. ಆಗ ಎಲ್ಲಿದ್ದಾನೆ ಎಂದು ಕಾಲ್ ಮಾಡಿದಾಗ ಆತ ಅಪಘಾತದಲ್ಲಿ ಮೃತಪಟ್ಟಿರುವ ವಿಷಯ ತಿಳಿದಿದೆ.

ಇದನ್ನೂ ಓದಿ:ಬೆಳಗಾವಿಯಲ್ಲಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನ ದುರ್ಮರಣ: ಭೀಕರತೆ ವಿವರಿಸುವ ಚಿತ್ರಗಳು

ಹೆತ್ತ ಮಗು ನೋಡಲು ಹೋಗಬೇಕಿದ್ದವರು ಸಾವು

ಇದಷ್ಟೇ ಅಲ್ಲ, ಈ ಅಪಘಾತವಾದ ಮಾರ್ಗದಲ್ಲೇ ಅರ್ಧ ಗಂಟೆ ಅವಧಿಯಲ್ಲಿಯೇ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಾಣೇಶ್ ಎನ್ನುವ ಯುವಕ ಮೃತಪಟ್ಟಿದ್ರೆ, ಆಂಜನೇಯ ಎನ್ನುವವರಿಗೆ ಗಂಭೀರ ಗಾಯವಾಗಿದೆ. ಪ್ರಾಣೇಶ್ ಪತ್ನಿ ಕಳೆದ 10 ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಳು, ಮಗು ನೋಡಲು ಬಂದಿದ್ದ ಪ್ರಾಣೇಶ್ ಹೀಗೆ ಹೆಣವಾಗಿ ಹೋಗಿದ್ದಾನೆ. ಈ ಬಗ್ಗೆ ಯರಗೇರಾ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇತ್ತ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ