AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಒಂದೇ ಕುಟುಂಬದ ಮೂವರ ಕೊಲೆ! ಅಳಿಯನೇ ಹತ್ಯೆ ಮಾಡಿರುವ ಶಂಕೆ

ಕಳೆದ 6 ತಿಂಗಳ ಹಿಂದೆಯಷ್ಟೇ ವೈಷ್ಣವಿ ಮತ್ತು ಸಾಯಿಗೆ ಮದುವೆ ಆಗಿತ್ತು. ಮದುವೆ ಬಳಿಕ ಆರೋಪಿ ಸಾಯಿ ಹಾಗೂ ವೈಷ್ಣವಿ ಮಧ್ಯೆ ಜಗಳ ಶುರುವಾಗಿತ್ತು. ಆರೋಪಿ ಸಾಯಿ ನಿನ್ನೆ ಅತ್ತೆ ಮನೆಗೆ ಬಂದಿದ್ದ.

ರಾಯಚೂರಿನಲ್ಲಿ ಒಂದೇ ಕುಟುಂಬದ ಮೂವರ ಕೊಲೆ! ಅಳಿಯನೇ ಹತ್ಯೆ ಮಾಡಿರುವ ಶಂಕೆ
ಕೊಲೆಯಾದ ಒಂದೇ ಕುಟುಂಬದ ಮೂವರು
TV9 Web
| Edited By: |

Updated on:Sep 29, 2021 | 12:57 PM

Share

ರಾಯಚೂರು: ಒಂದೇ ಕುಟುಂಬದ ಮೂವರನ್ನು ಕೊಲೆ ಮಾಡಿರುವ ಘಟನೆ ರಾಯಚೂರು ಹೊರವಲಯ ಯರಮರಸ್ನಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದ ಅಳಿಯನೇ ಮೂವರನ್ನು ಹತ್ಯೆಗೈದಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸಂತೋಷಿ(45), ವೈಷ್ಣವಿ(25) ಮತ್ತು ಆರತಿ(16) ಕೊಲೆಯಾಗಿದ್ದಾರೆ. ನಿನ್ನೆ (ಸೆ.28) ಮನೆಯಲ್ಲಿ ಜಗಳವಾಗಿದ್ದು, ಅಳಿಯ ಸಾಯಿ ಎಂಬಾತ ಕೊಲೆ ಮಾಡಿರಬಹುದು ಅಂತ ಅನುಮಾನ ಮೂಡಿದೆ. ರಾಯಚೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಎಸಿಪಿ ಹರಿಬಾಬುರಿಂದ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕಳೆದ 6 ತಿಂಗಳ ಹಿಂದೆಯಷ್ಟೇ ವೈಷ್ಣವಿ ಮತ್ತು ಸಾಯಿಗೆ ಮದುವೆ ಆಗಿತ್ತು. ಮದುವೆ ಬಳಿಕ ಆರೋಪಿ ಸಾಯಿ ಹಾಗೂ ವೈಷ್ಣವಿ ಮಧ್ಯೆ ಜಗಳ ಶುರುವಾಗಿತ್ತು. ಆರೋಪಿ ಸಾಯಿ ನಿನ್ನೆ ಅತ್ತೆ ಮನೆಗೆ ಬಂದಿದ್ದ. ಈ ವೇಳೆ ಮನೆಯವರ ಜೊತೆ ಜಗಳವಾಗಿದ್ದು, ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂಬ ಶಂಕೆ ಮೂಡಿದೆ. ಮೂವರಿಗೂ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರಬಹುದು ಎಂದು ಹೇಳಲಾಗುತ್ತಿದೆ.

ಅಪರಿಚಿತ ವ್ಯಕ್ತಿಯ ಬರ್ಬರ ಕೊಲೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾಗೇರಿ ಬಳಿ ಅಪರಿಚಿತ ವ್ಯಕ್ತಿಯ ಬರ್ಬರ ಕೊಲೆಯಾಗಿದೆ. ವ್ಯಕ್ತಿಯನ್ನು ಹತ್ಯೆಗೈದು ಶವಕ್ಕೆ ಬೆಂಕಿಹಚ್ಚಿದ್ದಾರೆ. ಅರೆಬೆಂದ ಶವವನ್ನು ಚೀಲದಲ್ಲಿ ತುಂಬಿ ಎಸೆದಿದ್ದಾರೆ. ಅಂದಾಜು 45 ವರ್ಷ ವಯಸ್ಸಿನ ವ್ಯಕ್ತಿ ಕೊಲೆಯಾಗಿದ್ದಾನೆ ಎಂದು ಊಹಿಸಲಾಗಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ವಾಟರ್‌ಮ್ಯಾನ್ ಆತ್ಮಹತ್ಯೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ವಾಟರ್‌ಮ್ಯಾನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸದಿಂದ ತೆಗೆದ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ

ಮೇಕೆಯ ಬೆನ್ನೇರಿ ಕುಳಿತು ಹಣ್ಣುಗಳನ್ನು ಸವಿಯುತ್ತಿರುವ ಮರಿ ಮಂಗನ ವಿಡಿಯೋ ವೈರಲ್; 12 ಮಿಲಿಯನ್ ವೀಕ್ಷಣೆ ಪಡೆದ ದೃಶ್ಯವಿದು

ಬೆಂಗಳೂರಿನ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ; ಐವರು ಆರೋಪಿಗಳ ಬಂಧನ

(Accused Son in law kills Single family Three members in Raichur)

Published On - 12:37 pm, Wed, 29 September 21

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?