AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Padyatra: ರಾಹುಲ್ ಗಾಂಧಿ ಕಾರ್ಯಕ್ರಮದ ವೇದಿಕೆ ಮೇಲೆ ಸ್ಥಳ ಸಿಗದೆ ಹಿಂದಿರುಗಿದ ನಟಿ ರಮ್ಯಾ

ಪಾದಯಾತ್ರೆ ಬಳಿಕ ಕಾರ್ಯಕ್ರಮದ ವೇದಿಕೆ ಮೇಲೆ ಬರಲು ನಟಿ ರಮ್ಯಾ ಇಚ್ಚಿಸಿದ್ದು ಭದ್ರತೆ ಸಮ್ಯಸ್ಯೆಯಿಂದಾಗಿ ರಮ್ಯಾರಿಗೆ ವೇದಿಕೆ ಮೇಲೆ ಅವಕಾಶ ನಿರಾಕರಿಸಲಾಗಿದೆ.ಇದರಿಂದ ಮನನೊಂದ ರಮ್ಯಾ ಸ್ಥಳದಿಂದ ಹಿಂದಿರುಗಿದರು.

Bharat Jodo Padyatra: ರಾಹುಲ್ ಗಾಂಧಿ ಕಾರ್ಯಕ್ರಮದ ವೇದಿಕೆ ಮೇಲೆ ಸ್ಥಳ ಸಿಗದೆ ಹಿಂದಿರುಗಿದ ನಟಿ ರಮ್ಯಾ
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾದ ನಟಿ ರಮ್ಯಾ
TV9 Web
| Edited By: |

Updated on:Oct 23, 2022 | 3:45 PM

Share

ರಾಯಚೂರು: ರಾಯಚೂರಿನಲ್ಲಿ ನಡೆಯುತ್ತಿದ್ದ ಭಾರತ್ ಜೋಡೋ ಯಾತ್ರೆಯಲ್ಲಿ(Bharat Jodo Yatra) ಮಾಜಿ ಸಂಸದೆ, ನಟಿ ರಮ್ಯಾ(Actress Ramya) ದಿಢೀರ್ ಪ್ರತ್ಯಕ್ಷರಾಗಿದ್ದಾರೆ. ನಿನ್ನೆ ರಾಯಚೂರು ನಗರಕ್ಕೆ ಯಾತ್ರೆ ಕಾಲಿಡುತ್ತಿದ್ದಂತೆ, ನಟಿ ರಮ್ಯಾ ರಾಹುಲ್ ಗಾಂಧಿ(Rahul Gandhi) ಟೀಂ ಸೇರಿಕೊಂಡರು. ಈ ವೇಳೆ ಡಿಕೆ ಶಿವಕುಮಾರ್, ರಮ್ಯಾರ ಕೆನ್ನೆಗೆ ಖುಷಿಯಿಂದ ತಟ್ಟಿ ಬರಮಾಡಿಕೊಂಡರು. ಆಗ ರಾಹುಲ್ ಗಾಂಧಿ ಕೂಡ ರಮ್ಯಾರನ್ನ ಸ್ವಾಗತಿಸಿದರು. ಬಳಿಕ ರಮ್ಯಾ, ರಾಹುಲ್ ಗಾಂಧಿ ಡಿಕೆಶಿ, ಸಿದ್ದರಾಮಯ್ಯ ಜೊತೆ ಸುಮಾರು‌ ಒಂದು ಕಿ.ಮಿ ಹೆಚ್ಚೆ ಹಾಕಿದರು‌. ಆದ್ರೆ ಪಾದಯಾತ್ರೆ ಬಳಿಕ ಬಸವೇಶ್ವರ ಸರ್ಕಲ್​​ ಬಳಿ ನಡೆದ ಕಾರ್ಯಕ್ರಮದ ವೇದಿಕೆ ಮೇಲೆ ರಮ್ಯಾರಿಗೆ ಜಾಗ ನೀಡದ ಹಿನ್ನೆಲೆ ನಟಿ ರಮ್ಯಾ ಆಕ್ರೋಶ ಹೊರ ಹಾಕಿದ್ದಾರೆ.

ರಾಯಚೂರು ನಗರ ಬಸವೇಶ್ವರ ಸರ್ಕಲ್ ಬಳಿಯ ಮೈದಾನದಲ್ಲಿ ಕಾರ್ನರ್ ಸಂವಾದವಿತ್ತು. ಅಲ್ಲಿ ಸಹಸ್ರಾರು ಜನ ನೆರೆದಿದ್ದರು. ಕಾರ್ಯಕ್ರಮದ ವೇದಿಕೆ ಮೇಲೆ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಉಪಸ್ಥಿತರಿದ್ದರು. ಈ ವೇಳೆ ನಟಿ ರಮ್ಯಾ ವೇದಿಕೆ ಮೇಲೆ ಆಗಮಿಸಲು ಮುಂದಾಗಿದ್ದಾಗ, ದೊಡ್ಡ ಹೈಡ್ರಾಮಾ ನಡೆದಿದೆ. ರಾಹುಲ್ ಗಾಂಧಿಗೆ ಉನ್ನತ ಪಟ್ಟದ ಭದ್ರತೆ ಇರೋದ್ರಿಂದ, ಗೆಸ್ಟ್ ಲಿಸ್ಟ್ ನಲ್ಲಿ ಹೆಸರಿದ್ದವರಿಗೆ ಮಾತ್ರ ವೇದಿಕೆ ಮೇಲೆ ಅವಕಾಶವಿತ್ತು. ಆಗ ನಟಿ ರಮ್ಯಾರ ಹೆಸರು ಲಿಸ್ಟ್ ನಲ್ಲಿ ಇರಲಿಲ್ಲವಂತೆ. ರಮ್ಯಾ ಈ ಬಗ್ಗೆ ಭದ್ರತಾ ಸಿಬ್ಬಂದಿಗೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸಚಿವರು ಹೊಡೆಯಲಿಲ್ಲ ಎಂದ ಮಹಿಳೆ, ಆದ್ರೂ ಸೋಮಣ್ಣ ಕ್ಷಮೆಯಾಚಿಸಿದ್ದು ಏಕೆ?

ಆದರೆ, ಭದ್ರತಾ ಸಿಬ್ಬಂದಿ ಮಾತ್ರ ನಟಿ ರಮ್ಯಾಗೆ ಅವಕಾಶ ನೀಡಲಿಲ್ಲ. ಆಗ ಕೆರಳಿದ ರಮ್ಯಾ, ರಾಯಚೂರಿನ ಸ್ಥಳೀಯ ಮುಖಂಡರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ ಅನ್ನೊ ಆರೋಪಗಳು ಕೇಳಿ ಬಂದಿವೆ. ಇದಾದ ಬಳಿಕ ಭದ್ರತಾ ಸಿಬ್ಬಂದಿಗೆ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ನಟಿ ರಮ್ಯಾ ವೇದಿಕೆ ಮೇಲೆ ಅವಕಾಶ ಸಿಗದ ಹಿನ್ನೆಲೆ, ಬೇಸರಿಂದ ಅಲ್ಲಿಂದ ತೆರಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:45 pm, Sun, 23 October 22

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​