AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Padyatra: ರಾಹುಲ್ ಗಾಂಧಿ ಕಾರ್ಯಕ್ರಮದ ವೇದಿಕೆ ಮೇಲೆ ಸ್ಥಳ ಸಿಗದೆ ಹಿಂದಿರುಗಿದ ನಟಿ ರಮ್ಯಾ

ಪಾದಯಾತ್ರೆ ಬಳಿಕ ಕಾರ್ಯಕ್ರಮದ ವೇದಿಕೆ ಮೇಲೆ ಬರಲು ನಟಿ ರಮ್ಯಾ ಇಚ್ಚಿಸಿದ್ದು ಭದ್ರತೆ ಸಮ್ಯಸ್ಯೆಯಿಂದಾಗಿ ರಮ್ಯಾರಿಗೆ ವೇದಿಕೆ ಮೇಲೆ ಅವಕಾಶ ನಿರಾಕರಿಸಲಾಗಿದೆ.ಇದರಿಂದ ಮನನೊಂದ ರಮ್ಯಾ ಸ್ಥಳದಿಂದ ಹಿಂದಿರುಗಿದರು.

Bharat Jodo Padyatra: ರಾಹುಲ್ ಗಾಂಧಿ ಕಾರ್ಯಕ್ರಮದ ವೇದಿಕೆ ಮೇಲೆ ಸ್ಥಳ ಸಿಗದೆ ಹಿಂದಿರುಗಿದ ನಟಿ ರಮ್ಯಾ
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾದ ನಟಿ ರಮ್ಯಾ
TV9 Web
| Updated By: ಆಯೇಷಾ ಬಾನು|

Updated on:Oct 23, 2022 | 3:45 PM

Share

ರಾಯಚೂರು: ರಾಯಚೂರಿನಲ್ಲಿ ನಡೆಯುತ್ತಿದ್ದ ಭಾರತ್ ಜೋಡೋ ಯಾತ್ರೆಯಲ್ಲಿ(Bharat Jodo Yatra) ಮಾಜಿ ಸಂಸದೆ, ನಟಿ ರಮ್ಯಾ(Actress Ramya) ದಿಢೀರ್ ಪ್ರತ್ಯಕ್ಷರಾಗಿದ್ದಾರೆ. ನಿನ್ನೆ ರಾಯಚೂರು ನಗರಕ್ಕೆ ಯಾತ್ರೆ ಕಾಲಿಡುತ್ತಿದ್ದಂತೆ, ನಟಿ ರಮ್ಯಾ ರಾಹುಲ್ ಗಾಂಧಿ(Rahul Gandhi) ಟೀಂ ಸೇರಿಕೊಂಡರು. ಈ ವೇಳೆ ಡಿಕೆ ಶಿವಕುಮಾರ್, ರಮ್ಯಾರ ಕೆನ್ನೆಗೆ ಖುಷಿಯಿಂದ ತಟ್ಟಿ ಬರಮಾಡಿಕೊಂಡರು. ಆಗ ರಾಹುಲ್ ಗಾಂಧಿ ಕೂಡ ರಮ್ಯಾರನ್ನ ಸ್ವಾಗತಿಸಿದರು. ಬಳಿಕ ರಮ್ಯಾ, ರಾಹುಲ್ ಗಾಂಧಿ ಡಿಕೆಶಿ, ಸಿದ್ದರಾಮಯ್ಯ ಜೊತೆ ಸುಮಾರು‌ ಒಂದು ಕಿ.ಮಿ ಹೆಚ್ಚೆ ಹಾಕಿದರು‌. ಆದ್ರೆ ಪಾದಯಾತ್ರೆ ಬಳಿಕ ಬಸವೇಶ್ವರ ಸರ್ಕಲ್​​ ಬಳಿ ನಡೆದ ಕಾರ್ಯಕ್ರಮದ ವೇದಿಕೆ ಮೇಲೆ ರಮ್ಯಾರಿಗೆ ಜಾಗ ನೀಡದ ಹಿನ್ನೆಲೆ ನಟಿ ರಮ್ಯಾ ಆಕ್ರೋಶ ಹೊರ ಹಾಕಿದ್ದಾರೆ.

ರಾಯಚೂರು ನಗರ ಬಸವೇಶ್ವರ ಸರ್ಕಲ್ ಬಳಿಯ ಮೈದಾನದಲ್ಲಿ ಕಾರ್ನರ್ ಸಂವಾದವಿತ್ತು. ಅಲ್ಲಿ ಸಹಸ್ರಾರು ಜನ ನೆರೆದಿದ್ದರು. ಕಾರ್ಯಕ್ರಮದ ವೇದಿಕೆ ಮೇಲೆ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಉಪಸ್ಥಿತರಿದ್ದರು. ಈ ವೇಳೆ ನಟಿ ರಮ್ಯಾ ವೇದಿಕೆ ಮೇಲೆ ಆಗಮಿಸಲು ಮುಂದಾಗಿದ್ದಾಗ, ದೊಡ್ಡ ಹೈಡ್ರಾಮಾ ನಡೆದಿದೆ. ರಾಹುಲ್ ಗಾಂಧಿಗೆ ಉನ್ನತ ಪಟ್ಟದ ಭದ್ರತೆ ಇರೋದ್ರಿಂದ, ಗೆಸ್ಟ್ ಲಿಸ್ಟ್ ನಲ್ಲಿ ಹೆಸರಿದ್ದವರಿಗೆ ಮಾತ್ರ ವೇದಿಕೆ ಮೇಲೆ ಅವಕಾಶವಿತ್ತು. ಆಗ ನಟಿ ರಮ್ಯಾರ ಹೆಸರು ಲಿಸ್ಟ್ ನಲ್ಲಿ ಇರಲಿಲ್ಲವಂತೆ. ರಮ್ಯಾ ಈ ಬಗ್ಗೆ ಭದ್ರತಾ ಸಿಬ್ಬಂದಿಗೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸಚಿವರು ಹೊಡೆಯಲಿಲ್ಲ ಎಂದ ಮಹಿಳೆ, ಆದ್ರೂ ಸೋಮಣ್ಣ ಕ್ಷಮೆಯಾಚಿಸಿದ್ದು ಏಕೆ?

ಆದರೆ, ಭದ್ರತಾ ಸಿಬ್ಬಂದಿ ಮಾತ್ರ ನಟಿ ರಮ್ಯಾಗೆ ಅವಕಾಶ ನೀಡಲಿಲ್ಲ. ಆಗ ಕೆರಳಿದ ರಮ್ಯಾ, ರಾಯಚೂರಿನ ಸ್ಥಳೀಯ ಮುಖಂಡರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ ಅನ್ನೊ ಆರೋಪಗಳು ಕೇಳಿ ಬಂದಿವೆ. ಇದಾದ ಬಳಿಕ ಭದ್ರತಾ ಸಿಬ್ಬಂದಿಗೆ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ನಟಿ ರಮ್ಯಾ ವೇದಿಕೆ ಮೇಲೆ ಅವಕಾಶ ಸಿಗದ ಹಿನ್ನೆಲೆ, ಬೇಸರಿಂದ ಅಲ್ಲಿಂದ ತೆರಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:45 pm, Sun, 23 October 22

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?