AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಡಳಿತ ಮೂಲಸೌಕರ್ಯ ನೀಡದ ಆರೋಪ; ಚರಂಡಿಯಲ್ಲಿದ್ದ ಕಸ ಸುರಿದುಕೊಂಡು ಪ್ರತಿಭಟನೆಗೆ ಯತ್ನಿಸಿದ ಸಫಾಯಿ ಕರ್ಮಚಾರಿ

ಜಿಲ್ಲಾಡಳಿತ ಮೂಲಸೌಕರ್ಯ ನೀಡದ ಆರೋಪ ಮಾಡಿದ್ದು, ಇಂದು (ಮಾರ್ಚ್​ 24) ಏಕಾಂಗಿಯಾಗಿ ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಬೇರೊಬ್ಬರ ಮೂಲಕ ಸಫಾಯಿ ಕರ್ಮಚಾರಿ ಗೀತಾಸಿಂಗ್ ಚರಂಡಿ ವೇಸ್ಟೇಜ್ ತರಿಸಿಕೊಂಡಿದ್ದು, ಮೈ ಮೇಲೆ ಸುರಿದುಕೊಳ್ಳಲು ಯತ್ನಿಸಿದ್ದಾರೆ.

ಜಿಲ್ಲಾಡಳಿತ ಮೂಲಸೌಕರ್ಯ ನೀಡದ ಆರೋಪ; ಚರಂಡಿಯಲ್ಲಿದ್ದ ಕಸ ಸುರಿದುಕೊಂಡು ಪ್ರತಿಭಟನೆಗೆ ಯತ್ನಿಸಿದ ಸಫಾಯಿ ಕರ್ಮಚಾರಿ
ಚರಂಡಿಯಲ್ಲಿದ್ದ ಕಸ ಸುರಿದುಕೊಂಡು ಪ್ರತಿಭಟನೆಗೆ ಯತ್ನಿಸಿದ ಸಫಾಯಿ ಕರ್ಮಚಾರಿ
TV9 Web
| Edited By: |

Updated on:Mar 24, 2022 | 2:59 PM

Share

ರಾಯಚೂರು: ವಿವಿಧ ಬೇಡಿಕೆ ಈಡೇರಿಸಲು ಜಿಲ್ಲಾಡಳಿತ (District Administration) ವೈಫಲ್ಯವಾದ ಹಿನ್ನೆಲೆಯಲ್ಲಿ ಡಿಸಿ ಕಚೇರಿ ಬಳಿ ಪ್ರತಿಭಟನೆ(Protest) ವೇಳೆ ಸಫಾಯಿ ಕರ್ಮಚಾರಿ ಗೀತಾಸಿಂಗ್ ಚರಂಡಿಯಲ್ಲಿದ್ದ ಕಸ (Garbage) ಸುರಿದುಕೊಂಡು ಪ್ರತಿಭಟನೆಗೆ ಯತ್ನಿಸಿದ್ದಾರೆ. ಜಿಲ್ಲಾಡಳಿತ ಮೂಲಸೌಕರ್ಯ ನೀಡದ ಆರೋಪ ಮಾಡಿದ್ದು, ಇಂದು (ಮಾರ್ಚ್​ 24) ಏಕಾಂಗಿಯಾಗಿ ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಬೇರೊಬ್ಬರ ಮೂಲಕ ಸಫಾಯಿ ಕರ್ಮಚಾರಿ ಗೀತಾಸಿಂಗ್ ಚರಂಡಿ ವೇಸ್ಟೇಜ್ ತರಿಸಿಕೊಂಡಿದ್ದು, ಮೈ ಮೇಲೆ ಸುರಿದುಕೊಳ್ಳಲು ಯತ್ನಿಸಿದ್ದಾರೆ.

ಕಸವನ್ನು ಮೈಮೇಲೆ ಸುರಿದುಕೊಳ್ಳುವ ವೇಳೆ ಸಫಾಯ ಕರ್ಮಚಾರಿ ಗೀತಾಸಿಂಗ್ ಅವರನ್ನು ಪೊಲೀಸರು ತಡೆದಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಸದ್ಯ ಸದರ್ ಬಜಾರ್ ಠಾಣೆ ಪೊಲೀಸರು ಸಂಗ್ರಹಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಶಿಕ್ಷಕಿ ಬೈದಿದ್ದಕ್ಕೆ ನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು, ಶಾಲೆ ಮುಂದೆ ಪೋಷಕರ ಪ್ರತಿಭಟನೆ

ಶಿಕ್ಷಕಿ ಬೈದಿದ್ದಕ್ಕೆ ನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ R.R.ನಗರದಲ್ಲಿರುವ ಸ್ವರ್ಗ ರಾಣಿ ಸ್ಕೂಲ್ನಲ್ಲಿ ಎಂಟನೇ ತರಗತಿ ಮುಖ್ಯ ಪರೀಕ್ಷೆ ನಡೆಯುತ್ತಿದ್ದ ವೇಳೆ 8ನೇ ತರಗತಿಯ ವಿದ್ಯಾರ್ಥಿ ಧೀರಜ್ ಕಾಪಿ ಹೊಡೆಯುತ್ತಿದ್ದ ಅಂತ ಟೀಚರ್ ಪ್ರಿನ್ಸಿಪಾಲ್ ರೂಮ್ಗೆ ಕರೆದುಕೊಂಡು ಹೋಗಿ ಧೀರಜ್ ಪೋಷಕರನ್ನು ಶಾಲೆಗೆ ಕರೆಸಿ ಈ ಬಗ್ಗೆ ತಿಳಿಸಿದ್ದಾರೆ. ಹೀಗಾಗಿ ಮನ ನೊಂದ ವಿದ್ಯಾರ್ಥಿ ಮನೆಯಲ್ಲಿ ನಿನ್ನೆ ಸಂಜೆ ನೇಣಿಗೆ ಶರಣಾಗಿದ್ದಾನೆ. ಸ್ವರ್ಗ ರಾಣಿ ಶಾಲೆಯ ಮುಂದೆ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.

ನಿನ್ನೆ ಸಂಜೆ ಧೀರಜ್ ಪೋಷಕರು ಸ್ಕೂಲ್ಗೆ ಬಂದು ಮಗ ಮಾಡಿದ್ದ ತಪ್ಪಿಗೆ ಅಪೋಲಜಿ ಲೆಟರ್ ಬರೆದುಕೊಟ್ಟ ಹೋಗಿದ್ದರು. ಇದಾದ ಬಳಿಕ ಧೀರಜ್ನನ್ನು ಮನೆಗೆ ಕಳಿಸದೆ ಅವನ ಸ್ನೇಹಿತರ ಮುಂದೆ ಅವಮಾನ ಮಾಡಿದ್ದರಂತೆ. ಇದರಿಂದ ನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸದ್ಯ ಇತರೆ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದು ಶಾಲಾ ಆಡಳಿತ ಮಂಡಳಿ ಬಂದು ನಿನ್ನೆ ಏನಾಯ್ತು? ಯಾಕೆ ಧೀರಜ್ ಆತ್ಮಹತ್ಯೆ ಮಾಡಿಕೊಂಡ ಎಂಬ ಬಗ್ಗೆ ಮಾಹಿತಿ ನೀಡಬೇಕು ಇಲ್ಲಾಂದ್ರೆ ನಾವು ಇಲ್ಲಿಂದ ಹೋಗಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಧೀರಜ್ ಪೋಷಕರು ನಾವು ಇದರಲ್ಲಿ ಭಾಗಿಯಾಗಲ್ಲ ಎಂದು ಆರ್.ಆರ್. ನಗರದ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಧೀರಜ್ ಮೃತದೇಹ ಮನೆಯಲ್ಲಿ ಇಡಲಾಗಿದೆ.

ಇದನ್ನೂ ಓದಿ: ದಾವಣಗೆರೆ: ರಾತ್ರೋರಾತ್ರಿ ಗುಡಿಸಲು ತೆರವುಗೊಳಿಸಿದ ಜಿಲ್ಲಾಡಳಿತ; ಸ್ಥಳೀಯರ ತೀವ್ರ ಆಕ್ರೋಶ

ಕೆಂಪು ಕ್ರಾಂತಿ ಭ್ರಮೆಯಿಂದ ಹೊರಬಂದು ಆಧ್ಯಾತ್ಮಿಕ ವಿಕಸನದತ್ತ.. ನಿವೃತ್ತ IAS ಅಧಿಕಾರಿಯ ರಾಜಕೀಯ ಆದರ್ಶವಾದದ ಕಥಾನಕ

Published On - 2:51 pm, Thu, 24 March 22

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?