AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ಕಾರ್ಯಕ್ರಮಕ್ಕೆ ಬಿಸಿ ಮುಟ್ಟಿಸಲು ರಾಯಚೂರು ಬಂದ್, 66 ದಿನಗಳಿಂದ ಪ್ರತಿದಿನ ಇಬ್ಬರಂತೆ ಉಪವಾಸ ಸತ್ಯಾಗ್ರಹ

ಏಮ್ಸ್ ಗಾಗಿ 316 ದಿನಗಳು ನಿರಂತರವಾಗಿ ಹೋರಾಟ ನಡೆಸಲು ಏಮ್ಸ್ ಹೋರಾಟ ಸಮಿತಿ ನಿರ್ಧರಿಸಿದ್ದು ಕಳೆದ 66 ದಿನಗಳಿಂದ ಪ್ರತಿದಿನ ಇಬ್ಬರಂತೆ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ.

ಅಮಿತ್ ಶಾ ಕಾರ್ಯಕ್ರಮಕ್ಕೆ ಬಿಸಿ ಮುಟ್ಟಿಸಲು ರಾಯಚೂರು ಬಂದ್, 66 ದಿನಗಳಿಂದ ಪ್ರತಿದಿನ ಇಬ್ಬರಂತೆ ಉಪವಾಸ ಸತ್ಯಾಗ್ರಹ
ರಾಯಚೂರು ಬಂದ್
ಆಯೇಷಾ ಬಾನು
ಆಯೇಷಾ ಬಾನು|

Updated on: Mar 24, 2023 | 2:53 PM

Share

ರಾಯಚೂರು: ರಾಯಚೂರಿಗೆ ಕೇಂದ್ರ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆ ಅಮಿತ್ ಶಾ ಕಾರ್ಯಕ್ರಮಕ್ಕೆ ಬಿಸಿ ಮುಟ್ಟಿಸಲು ಇಂದು(ಮಾರ್ಚ್ 24) ರಾಯಚೂರು ಬಂದ್ ಮಾಡಲಾಗಿತ್ತು. ಏಮ್ಸ್ ಹೋರಾಟ ಸಮಿತಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಒತ್ತಾಯಿಸಿ ಇಂದು ರಾಯಚೂರು ಬಂದ್ ನಡೆಸಿತು. ವಿವಿಧ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿದ್ದವು. ಬಸ್, ಆಟೋ ಸಂಚಾರ ಹೊರತು ಪಡಿಸಿ ವ್ಯಾಪಾರ-ವಹಿವಾಟುಗಳೆಲ್ಲಾ ಬಂದ್ ಆಗಿದ್ದವು.

ಏಮ್ಸ್ ಗಾಗಿ 316 ದಿನಗಳು ನಿರಂತರವಾಗಿ ಹೋರಾಟ ನಡೆಸಲು ಏಮ್ಸ್ ಹೋರಾಟ ಸಮಿತಿ ನಿರ್ಧರಿಸಿದ್ದು ಕಳೆದ 66 ದಿನಗಳಿಂದ ಪ್ರತಿದಿನ ಇಬ್ಬರಂತೆ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಆದರೂ ರಾಯಚೂರಿಗೆ ‌ಮಾತ್ರ ಏಮ್ಸ್ ಆಸ್ಪತ್ರೆ‌ ನೀಡಿಲ್ಲ. ಈ ಹಿನ್ನೆಲೆ ಇಂದು ರಾಯಚೂರು ಬಂದ್ ಗೆ ಕರೆ ನೀಡಲಾಗಿತ್ತು. ಇದೇ ಮಾರ್ಚ್ 26ಕ್ಕೆ ರಾಯಚೂರು ಜಿಲ್ಲೆಗೆ ಅಮಿತ್ ಶಾ ಆಗಮಿಸಲಿದ್ದಾರೆ. ಕೇಂದ್ರ ಸಚಿವರಿಗೆ ಬಿಸಿ‌ ಮುಟ್ಟಿಸಲು ಬಂದ್ ಮಾಡಲಾಗಿದ್ದು ಬಂದ್ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಇದನ್ನೂ ಓದಿ: ಏಮ್ಸ್ ಸ್ಥಾಪನೆಗೆ ಮಾತು ತಪ್ಪಿದ ಬೊಮ್ಮಾಯಿ ಸರ್ಕಾರ, ಕೊತ ಕೊತ ಕುದಿಯುತ್ತಿರುವ ಸ್ಥಳೀಯರು, ಮಾ 24 ರಂದು ಅಮಿತ್​ ಶಾಗೆ ರಾಯಚೂರು ಬಂದ್ ಬಿಸಿ

ಏಮ್ಸ್ ಸ್ಥಾಪನೆಗೆ ಮಾತು ತಪ್ಪಿದ ಬೊಮ್ಮಾಯಿ ಸರ್ಕಾರ

ನಟ ಶಿವಣ್ಣ ರಾಯಚೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಕುರಿತು ಸಿಎಂ ಜೊತೆ ಮಾತನಾಡುತ್ತೇನೆ. ನಿಮ್ಮ ಹೋರಾಟಗಳಿಗೆ ಸಹಕಾರ ಇದೆ ಅಂತ ಬಹಿರಂಗವಾಗಿ ಹೇಳಿದ್ರು. ಇದನ್ನೆಲ್ಲಾ ಗಮನಿಸುತ್ತಿದ್ದರೂ ಸಿಎಂ ಬೊಮ್ಮಾಯಿ ಸರ್ಕಾರ ಕೊನೆಗೂ ರಾಯಚೂರಿಗೆ ಏಮ್ಸ್ ನೀಡಲೇ ಇಲ್ಲ.

ಹೀಗಾಗಿ ಏಮ್ಸ್ ಹೋರಾಟ ಸಮಿತಿ ಸರ್ಕಾರಕ್ಕೆ ಬುದ್ದಿ ಕಲಿಸಲು ಮುಂದಾಗಿದೆ‌‌. ಇದೇ ಮಾರ್ಚ್ 24 ರಂದು ಕೇಂದ್ರ ಸಚಿವ ಅಮಿತ್ ಶಾ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಗಬ್ಬೂರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಇಂದು ರಾಯಚೂರು ಬಂದ್ ಮಾಡೋ ಮೂಲಕ ಅಮಿತ್ ಶಾಗೆ ಬಿಸಿ ಮುಟ್ಟಿಸೋಕೆ ಹೋರಾಟಗಾರರು ಮುಂದಾಗಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!