AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರು ದುರಂತ ಪ್ರಕರಣ ಬೆಳಕಿಗೆ, 80ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗಿದ್ದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಚರಂಡಿ ಬಂದ್ ಮಾಡಿಸಿ ಎಂದು ಟಿವಿ9 ಕ್ಯಾಮೆರಾ ಎದುರು ಅಳಲು ತೋಡಿಕೊಂಡಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರು ದುರಂತ ಪ್ರಕರಣ ಬೆಳಕಿಗೆ, 80ಕ್ಕೂ ಹೆಚ್ಚು ಜನ ಅಸ್ವಸ್ಥ
ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡ ಗ್ರಾಮಸ್ಥ
ಭೀಮೇಶ್​​ ಪೂಜಾರ್
| Edited By: ಆಯೇಷಾ ಬಾನು|

Updated on:Aug 10, 2023 | 12:34 PM

Share

ರಾಯಚೂರು, ಆ.10: ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರು ದುರಂತ(Contaminated Water) ಪ್ರಕರಣ ಸಂಭವಿಸಿದೆ. ಸುಮಾರು ಮೂರು ಸಾವಿರ ಜನರಿರೋ ಗ್ರಾಮದಲ್ಲಿ 80ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಈ ಹಿಂದೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿತ್ತು. ಇದೀಗ ಮತ್ತೆ ರಾಯಚೂರು ಜಿಲ್ಲೆಯ ಮತ್ತೊಂದು ತಾಲೂಕಿನಲ್ಲಿ ಕಲುಷಿತ ನೀರು ದುರಂತ ಪ್ರಕರಣ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗಿದ್ದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಚರಂಡಿ ಬಂದ್ ಮಾಡಿಸಿ ಎಂದು ಟಿವಿ9 ಕ್ಯಾಮೆರಾ ಎದುರು ಅಳಲು ತೋಡಿಕೊಂಡಿದ್ದಾರೆ.

ಚಿತ್ತಾಪುರ ಪಂಚಾಯಿತಿ ಬೇಜವಾಬ್ದಾರಿತನಕ್ಕೆ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಗ್ರಾಮದ ಸುಮಾರು 80ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮನೆಯಂಗಳಲ್ಲಿ ಮಲಗಿ ಅಸ್ವಸ್ಥರು ಪರದಾಡುತ್ತಿರುವ ದೃಶ್ಯಗಳು ಗ್ರಾಮದಲ್ಲಿ ಕಂಡು ಬಂದಿದ್ದು ಕರಳು ಹಿಂಡುವಂತಿದೆ. ಇಷ್ಟೆಲ್ಲಾ ಆದರೂ ಚಿತ್ತಾಪುರ ಪಂಚಾಯಿತಿ ಮಾತ್ರ ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ. ನಿತ್ಯ ನಾಲ್ಕೈದು ಹೊಸ ಪ್ರಕರಣಗಳು ಉಲ್ಬಣವಾಗುತ್ತಿವೆ. ಗ್ರಾಮದಲ್ಲಿ ಸ್ವಚ್ಛತೆ ಬಗ್ಗೆ ಕ್ರಮವಹಿಸದೇ ಚಿತ್ತಾಪುರ ಪಂಚಾಯಿತಿ ದಿವ್ಯ ನಿರ್ಲಕ್ಷ್ಯ ಮಾಡಿದ್ದು ಕಳೆದ ಒಂದು ವಾರದಿಂದ ಸಮಸ್ಯೆ ಉಲ್ಭವಾಗಿದ್ರೂ ಯಾವುಏ ಕ್ರಮಕ್ಕೆ ಮುಂದಾಗಿಲ್ಲ. ಸ್ವಚ್ಛತೆ ಬಗ್ಗೆ ಚಿತ್ತಾಪುರ ಪಂಚಾಯಿತಿ ಪಿಡಿಓ ಶಶಿಕಲಾ ಪಾಟೀಲ್ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವು ಪ್ರಕರಣ: ಕಾಲರಾ ಮಾದರಿಯ ಬ್ಯಾಕ್ಟೀರಿಯ ಪತ್ತೆ, ಕೇಸ್​ ಬುಕ್

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರಿನ ದುರಂತಗಳು ಸಂಭವಿಸುತ್ತಲೇ ಇರುತ್ತವೆ. ಕಳೆದ ಮೇ ತಿಂಗಳಲ್ಲಿ ಅರಕೇರಾ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಬಾಲಕ ಮೃತಪಟ್ಟಿದ್ದ. ಪ್ರಕರಣ ಸಂಬಂಧ ಕರ್ತವ್ಯಲೋಪ ಆರೋಪದಡಿ ಜಾಗೀರ ಜಾಡಲದಿನ್ನಿ ಗ್ರಾಮ ಪಂಚಾಯಿತಿಯ ಪಿಡಿಒ ರೇಣುಕಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್​ ಸಿಇಒ ಶಶಿಧರ್ ಆದೇಶ ಹೊರಡಿಸಿದ್ದರು.

ಇನ್ನು ಅದೇ ತಿಂಗಳಲ್ಲಿ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅನೇಕ ಜನರು ಅಸ್ವಸ್ಥಗೊಂಡಿದ್ದರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಬಳಲಿದ್ದರು. ಈ ಸಂಬಂಧ ಸರ್ಕಾರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿತ್ತು. ಘಟನೆ ಮರುಕಳಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡುವುದಾಗಿ ಸೂಚಿಸಿತ್ತು. ಆದರೂ ಕೂಡ ಈಗ ಮತ್ತೆ ಘಟನೆ ಮರುಕಳಿಸಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನ ನರಳುವಂತಾಗಿದೆ.

ರಾಯಚೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:48 am, Thu, 10 August 23

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ