AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮತ್ತೊಬ್ಬ ಸಾವು; ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ, ಇಬ್ಬರು ಅಧಿಕಾರಿಗಳ ಮೇಲೆ ಕ್ರಮ

ನೀರಿನ ಶುದ್ದೀಕರಣ ಹಾಗು ಸರಬರಾಜು ಮಾಡುವಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ. ಇಬ್ಬರು ಅಧಿಕಾರಿಗಳ ಮೇಲೆ ಕ್ರಮವಾಗಿದೆ. ಉಳಿದವರ ತಪ್ಪಿನ ಬಗ್ಗೆ ಪರಿಶೀಲನೆ ನಡೆದಿದೆ. ಶುದ್ದೀಕರಣ ಘಟಕದಲ್ಲಿನ ಪ್ರಯೋಗಾಲಯ ಎರಡು ತಿಂಗಳಿಂದ ಕಾರ್ಯನಿರ್ವಹಿಸಿಲ್ಲ,

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮತ್ತೊಬ್ಬ ಸಾವು; ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ, ಇಬ್ಬರು ಅಧಿಕಾರಿಗಳ ಮೇಲೆ ಕ್ರಮ
ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಅರ್ಚನಾ
TV9 Web
| Edited By: |

Updated on:Jun 08, 2022 | 1:33 PM

Share

ರಾಯಚೂರು: ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು ಮೂರು ಜನ ಮೃತಪಟ್ಟಿದ್ದಾರೆ. ಆದ್ರೆ ಈಗ ಈ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಅಂದ್ರೂನ್ ಖಿಲ್ಲಾ ನಿವಾಸಿ ಅಬ್ದುಲ್ ಕರೀಂ(50) ಇಂದು ಸಾವನ್ನಪ್ಪಿದ್ದಾರೆ. ಕಲುಷಿತ ನೀರು ಕುಡಿದಿದ್ದರಿಂದ ಅಬ್ದುಲ್ ವಾಂತಿ ಹಾಗೂ ಭೇದಿ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅಬ್ದುಲ್ ಕಳೆದ 3 ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಕಿಡ್ನಿ ವೈಫಲ್ಯದಿಂದ ಎಲೆಕ್ಟ್ರಿಷಿಯನ್‌ ಅಬ್ದುಲ್ ಕರೀಂ ಮೃತಪಟ್ಟಿದ್ದಾರೆ. ಈ ಮೂಲಕ ಕಲುಷಿತ ನೀರು ಕುಡಿದು ಈವರೆಗೆ ನಾಲ್ವರು ಕೊನೆಯುಸಿರೆಳೆದಿದ್ದಾರೆ.

ಇನ್ನು ಪ್ರಕರಣ ಸಂಬಂಧ ಪೌರಾಡಳಿತ ನಿರ್ದೇಶನಾಲಯದ ಅರ್ಚನಾ ನೇತೃತ್ವದ ತಂಡ ರಾಂಪುರ ಬಳಿಯ ನೀರು ಶುದ್ಧೀಕರಣ ಘಟಕದಲ್ಲಿ ಪರಿಶೀಲನೆ ನಡೆಸುತ್ತಿದೆ. ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಕಲುಷಿತ ನೀರು ಸರಬರಾಜಿಗೆ ಸಂಬಂಧಿಸಿದ ಲೋಪ ಬಗ್ಗೆ ತನಿಖೆ ನಡೆಯುತ್ತಿದೆ. ಮೂರು ದಿನಗಳಲ್ಲಿ ವರದಿ ನೀಡಲು ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆ ರಾಯಚೂರು ನಗರಕ್ಕೆ ಆಗಮಿಸಿರುವ ತನಿಖಾ ತಂಡ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ವಿಜಯೇಂದ್ರ ಚೆನ್ನಾಗಿ ಕೆಲಸ ಮಾಡುತ್ತಿದ್ದಾನೆ, ಅವನಿಗೆ ಉತ್ತಮ ಭವಿಷ್ಯವಿದೆ ಎಂದರು ಯಡಿಯೂರಪ್ಪ

ಈ ಬಗ್ಗೆ ಮಾತನಾಡಿರುವ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಅರ್ಚನಾ, ನೀರಿನ ಶುದ್ದೀಕರಣ ಹಾಗು ಸರಬರಾಜು ಮಾಡುವಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ. ಇಬ್ಬರು ಅಧಿಕಾರಿಗಳ ಮೇಲೆ ಕ್ರಮವಾಗಿದೆ. ಉಳಿದವರ ತಪ್ಪಿನ ಬಗ್ಗೆ ಪರಿಶೀಲನೆ ನಡೆದಿದೆ. ಶುದ್ದೀಕರಣ ಘಟಕದಲ್ಲಿನ ಪ್ರಯೋಗಾಲಯ ಎರಡು ತಿಂಗಳಿಂದ ಕಾರ್ಯನಿರ್ವಹಿಸಿಲ್ಲ, ಸಿಬ್ಬಂದಿಯೂ ಇಲ್ಲ. ನೀರು ಶುದ್ದೀಕರಣಕ್ಕೆ ಬೇಕಾದ ಅಗತ್ಯ ರಾಸಾಯನಿಕಗಳನ್ನ ಸಂಗ್ರಹಿಸಿಟ್ಟಿಲ್ಲ. ನಗರದಲ್ಲಿ ನೀರು ಸರಬರಾಜು ಮಾಡುವ ಪೈಪ್ ಲೈನ್ ಬದಲಾಯಿಸುತ್ತಿದ್ದಾರೆ. ಘಟಕದ ಜೊತೆ ಪೈಪ್ ಲೈನ್ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಬಗ್ಗೆ ಸದ್ಯ ಪ್ರಸ್ತಾಪವಿಲ್ಲ. ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ನೀರಿನ ಶುದ್ದೀಕರಣ ಹಾಗೂ ಸರಬರಾಜು ವ್ಯವಸ್ಥೆಯ ಲೋಪಗಳನ್ನ ಪರಿಶೀಲಿಸುತ್ತಿದ್ದೇವೆ. ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ನಗರಸಭೆಗೆ ಸೂಚನೆ ನೀಡುತ್ತಿದ್ದೇವೆ ಎಂದು ಅರ್ಚನಾ ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಾಲ್ವರು ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ನಾಲ್ವರು ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿರುವ ಬಗ್ಗೆ ಮಾಹಿತಿ ಇದೆ. ಇಂತಹ ಘಟನೆ ನಡೆಯಬಾರದಿತ್ತು, ನನಗೂ ಬಹಳ ನೋವಾಗಿದೆ. ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಡಿಸಿಗೆ ಸೂಚನೆ ನೀಡಿದ್ದೇನೆ. ಸ್ಥಳೀಯ ಆಡಳಿತ, ಸರ್ಕಾರದಿಂದ 15 ಲಕ್ಷ ಪರಿಹಾರ ನೀಡಿದ್ದೇವೆ. ನನ್ನ ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿದ್ದರಿಂದ ಇಲ್ಲೇ ಇದ್ದೇನೆ. ಸ್ವಕ್ಷೇತ್ರದಲ್ಲಿ ಬಿಡುವಿಲ್ಲದೆ ಜನರ ಸಮಸ್ಯೆ ಆಲಿಸುತ್ತಿದ್ದೇನೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹುಬ್ಬಳ್ಳಿಯಲ್ಲಿ ತಿಳಿಸಿದ್ದಾರೆ.

Published On - 1:06 pm, Wed, 8 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ